2 ಸಮುಯೇಲ 14:14 - ಕನ್ನಡ ಸತ್ಯವೇದವು C.L. Bible (BSI)14 ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನಂತೆ ಇದ್ದೇವೆ ನಾವು. ಮನುಷ್ಯರ ಪ್ರಾಣತೆಗೆಯುವುದಕ್ಕೆ ದೇವರಿಗೆ ಇಷ್ಟ ಇಲ್ಲ; ಹೊರದೂಡಲಾದವನು ತಿರುಗಿ ಬಳಿಗೆ ಬರುವ ಹಾಗೆ ಅವರು ಸದುಪಾಯಗಳನ್ನು ಕಲ್ಪಿಸುವವರಾಗಿರುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾವು ಸಾಯುವವರು. ನೆಲದ ಮೇಲೆ ಚೆಲ್ಲಿದ ನೀರು ಪುನಃ ತೆಗೆದುಕೊಳ್ಳಲು ಆಗದಂತೆ ಇರುವ ನೀರಿನಂತೆ ನಾವು. ಮನುಷ್ಯರ ಪ್ರಾಣವನ್ನು ತೆಗೆಯುವುದಕ್ಕೆ ದೇವರಿಗೆ ಇಷ್ಟವಿಲ್ಲ. ತಳ್ಳಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾವು ಸಾಯುವವರು; ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡಲಾರದ ನೀರಿನಂತಿದ್ದೇವೆ. ಮನುಷ್ಯರ ಪ್ರಾಣವನ್ನು ತೆಗೆಯುವದಕ್ಕೆ ದೇವರಿಗೆ ಇಷ್ಟವಿಲ್ಲ; ತಳ್ಳಲ್ಪಟ್ಟವನು ತಿರಿಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾವೆಲ್ಲ ಎಂದಾದರೂ ಒಂದು ದಿನ ಸಾಯುತ್ತೇವೆ ಎನ್ನುವುದು ನಿಜ. ನಾವೆಲ್ಲ ನೆಲದ ಮೇಲೆ ಚೆಲ್ಲಿದ ನೀರಿನಂತಿದ್ದೇವೆ. ಈ ನೀರನ್ನು ನೆಲದಿಂದ ಮತ್ತೆ ಒಟ್ಟುಗೂಡಿಸುವುದು ಯಾವ ವ್ಯಕ್ತಿಯಿಂದಲೂ ಸಾಧ್ಯವಿಲ್ಲ. ಆದರೆ ಜೀವವನ್ನು ತೆಗೆದುಬಿಡಲು ದೇವರು ಇಚ್ಛಿಸುವುದಿಲ್ಲ. ಬಲಾತ್ಕಾರವಾಗಿ ಹೊರಗೆ ನೂಕಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನದೇ ಆದ ಉಪಾಯವಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಾವೆಲ್ಲರೂ ಸಾಯುವುದು ಅವಶ್ಯವೇ. ನಾವು ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಹಾಗೆ ಯಾರ ಪ್ರಾಣವನ್ನೂ ತೆಗೆಯ ಬಯಸುವವರಲ್ಲ. ಅದಕ್ಕೆ ಬದಲಾಗಿ ಬಹಿಷ್ಕಾರವಾದವವರನ್ನು ತಿರುಗಿ ತಮ್ಮ ಬಳಿಗೆ ಬರುವಂತೆ ದೇವರು ಸದುಪಾಯಗಳನ್ನು ಕಲ್ಪಿಸುವವರಾಗಿದ್ದಾರೆ. ಅಧ್ಯಾಯವನ್ನು ನೋಡಿ |