Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:21 - ಕನ್ನಡ ಸತ್ಯವೇದವು C.L. Bible (BSI)

21 ಅದಕ್ಕೆ ಇತ್ತೈ, “ಸರ್ವೇಶ್ವರನಾಣೆ, ನನ್ನ ಒಡೆಯರಾದ ಅರಸರ ಜೀವದಾಣೆ, ಪ್ರಾಣಹೋದರೂ ಉಳಿದರೂ ನನ್ನ ಒಡೆಯರಾದ ಅರಸರಿರುವಲ್ಲಿಗೇ ಹೋಗುವೆನು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದಕ್ಕೆ ಇತ್ತೈ, “ಯೆಹೋವನಾಣೆ, ನನ್ನ ಒಡೆಯನಾದ ಅರಸನ ಜೀವದಾಣೆ, ಪ್ರಾಣ ಹೋದರೂ, ಉಳಿದರೂ ನನ್ನ ಒಡೆಯನಾದ ಅರಸನು ಇರುವಲ್ಲೇ ಇರುವೆನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದಕ್ಕೆ ಇತ್ತೈ - ಯೆಹೋವನಾಣೆ, ನನ್ನ ಒಡೆಯನಾದ ಅರಸನ ಜೀವದಾಣೆ, ಜೀವಹೋದರೂ ಉಳಿದರೂ ನನ್ನ ಒಡೆಯನಾದ ಅರಸನಿರುವಲ್ಲಿಗೆ ಹೋಗುವೆನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅದಕ್ಕೆ ಇತ್ತೈಯನು ರಾಜನಿಗೆ, “ಯೆಹೋವನಾಣೆ ಮತ್ತು ನಿನ್ನಾಣೆ, ನಾನಂತೂ ನಿನ್ನೊಂದಿಗೆ ಇರುತ್ತೇನೆ. ನನಗೆ ಜೀವ ಹೋದರೂ ಉಳಿದರೂ ನಿನ್ನೊಂದಿಗೆ ಇರುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಇತ್ತೈಯೂ ಅರಸನಿಗೆ ಉತ್ತರವಾಗಿ, “ಯೆಹೋವ ದೇವರ ಜೀವದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ, ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ, ಸಾವಾದರೂ ಬದುಕಾದರೂ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:21
15 ತಿಳಿವುಗಳ ಹೋಲಿಕೆ  

ಮಿತ್ರನ ಪ್ರೀತಿ ನಿರಂತರ; ಕಷ್ಟಕ್ಕಾದವನೆ ಹುಟ್ಟುನಂಟ.


ಆದರೂ ಆ ಹುಡುಗನ ತಾಯಿ, “ಸರ್ವೇಶ್ವರನಾಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟುಹೋಗುವುದಿಲ್ಲ,” ಎಂದಳು. ಆದ್ದರಿಂದ ಎಲೀಷನು ಆಕೆಯ ಜೊತೆಯಲ್ಲೇ ಹೊರಟನು.


ನಿಮ್ಮನ್ನು ನಿಂದಿಸುವುದಕ್ಕಾಗಿ ಇದನ್ನು ನಾನು ಹೇಳುತ್ತಿಲ್ಲ; ಈ ಮೊದಲೇ ನಿಮಗೆ ತಿಳಿಸಿರುವಂತೆ, ‘ಸತ್ತರೂ ಒಂದಾಗಿ ಸಾಯುತ್ತೇವೆ, ಬದುಕಿದರೂ ಒಂದಾಗಿ ಬದುಕುತ್ತೇವೆ,” ಎನ್ನುವಷ್ಟರ ಮಟ್ಟಿಗೆ ನೀವು ನನ್ನ ಹೃದಯದಲ್ಲಿದ್ದೀರಿ.


ಅದಕ್ಕೆ ಅವನು ಪ್ರತ್ಯುತ್ತರವಾಗಿ, “ನೀವು ಮಾಡುತ್ತಿರುವುದಾದರೂ ಏನು? ನಿಮ್ಮ ಅಳುವಿನಿಂದ ನನ್ನ ಹೃದಯವನ್ನು ಸೀಳುತ್ತಿರುವಿರಾ? ನಾನು ಜೆರುಸಲೇಮಿನಲ್ಲಿ ಬಂಧಿತನಾಗುವುದಕ್ಕೆ ಮಾತ್ರವಲ್ಲ, ಪ್ರಭು ಯೇಸುವಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಗೆಳೆಯರಂತೆ ನಟಿಸಿ ನಾಶಗೊಳಿಸುವವರು ಅನೇಕರುಂಟು; ಸಹೋದರನಿಗಿಂತ ಪ್ರಿಯನಾದ ಸ್ನೇಹಿತನೂ ಉಂಟು.


ಎಲೀಯನು ಮತ್ತೆ ಎಲೀಷನಿಗೆ, “ದಯವಿಟ್ಟು ನೀನು ಇಲ್ಲೆಯಿರು; ಸರ್ವೇಶ್ವರ ನನಗೆ ಜೋರ್ಡನಿಗೆ ಹೋಗಬೇಕೆಂದು ಆಜ್ಞಾಪಿಸಿ ಇದ್ದಾರೆ,” ಎಂದನು. ಆಗ ಅವನು, “ಸರ್ವೇಶ್ವರನ ಆಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರಲಾಗದು,” ಎಂದು ಉತ್ತರಕೊಟ್ಟನು. ಆದುದರಿಂದ ಇಬ್ಬರೂ ಹೊರಟು ಜೋರ್ಡನ್ ನದಿಯ ದಡಕ್ಕೆ ಬಂದರು.


ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲೇ ಇರು; ಸರ್ವೇಶ್ವರ ನನಗೆ ಜೆರಿಕೋವಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾರೆ,” ಎಂದು ಹೇಳಿದನು. ಆದರೆ ಎಲೀಷನು, “ಸರ್ವೇಶ್ವರನಾಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರುವುದಿಲ್ಲ,” ಎಂದು ಉತ್ತರಕೊಟ್ಟು ಅವನ ಜೊತೆಯಲ್ಲೇ ಜೆರಿಕೋವಿಗೆ ಹೋದನು.


ದಾರಿಯಲ್ಲಿ ಎಲೀಯನು ಎಲೀಷನಿಗೆ, “ದಯವಿಟ್ಟು ನೀನು ಇಲ್ಲೇ ಇರು; ಸರ್ವೇಶ್ವರ ನನಗೆ ಬೇತೇಲಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾರೆ,” ಎಂದನು. ಎಲೀಷನು, “ಸರ್ವೇಶ್ವರನ ಆಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರಲಾರೆ,” ಎಂದು ಉತ್ತರಕೊಟ್ಟನು. ಬಳಿಕ ಅವರಿಬ್ಬರೂ ಬೇತೇಲಿಗೆ ಹೋದರು.


ಒಡೆಯಾ, ತಾವು ಸ್ವಹಸ್ತದಿಂದ ಮುಯ್ಯಿತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಸರ್ವೇಶ್ವರ ತಮ್ಮನ್ನು ಕಾಪಾಡಿದ್ದಾರೆ. ಸರ್ವೇಶ್ವರನಾಣೆ, ನಿಮ್ಮ ಜೀವದಾಣೆ, ನಿಮ್ಮ ವಿರೋಧಿಗಳೂ ನಿಮಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ!


ಅದಕ್ಕೆ ದಾವೀದನು, “ನಿನಗೆ ನಾನು ಪ್ರೀತಿಪಾತ್ರನೆಂದು ನಿನ್ನ ತಂದೆಗೆ ಗೊತ್ತಿದೆ. ಆದುದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾರೆ. ನಿನ್ನ ಜೀವದಾಣೆ, ಸರ್ವೇಶ್ವರನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಮಾತ್ರ ಅಂತರ,” ಎಂದು ಖಂಡಿತವಾಗಿ ಹೇಳಿದನು.


ಆಗ ದಾವೀದನು, “ಒಳ್ಳೆಯದು, ಮುಂದೆ ನಡೆ,” ಎಂದನು. ಗಿತ್ತೀಯನಾದ ಇತ್ತೈಯು ತನ್ನ ಎಲ್ಲಾ ಸೈನಿಕರನ್ನೂ ಪರಿಜನರನ್ನೂ, ಕರೆದುಕೊಂಡು ಮುಂದೆ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು