Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:23 - ಕನ್ನಡ ಸತ್ಯವೇದವು C.L. Bible (BSI)

23 ಇವರೆಲ್ಲರೂ ಬಹಳವಾಗಿ ನಡೆಯುವಾಗ ಸುತ್ತ-ಮುತ್ತಿನವರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯಮಾರ್ಗ ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇವರೆಲ್ಲರೂ ಮುಂದೆ ನಡೆಯುವಾಗ ಸುತ್ತಮುತ್ತಲಿನ ಜನರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲಾ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯ ಮಾರ್ಗವನ್ನು ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇವರೆಲ್ಲರೂ ಮುಂದೆ ನಡೆಯುವಾಗ ಸುತ್ತಣವರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲಾ ಜನರೂ ಕಿದ್ರೋನ್‍ಹಳ್ಳವನ್ನು ದಾಟಿ ಅರಣ್ಯಮಾರ್ಗ ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಜನರೆಲ್ಲರೂ ಜೋರಾಗಿ ಅಳುತ್ತಿದ್ದರು. ರಾಜನಾದ ದಾವೀದನು ಕಿದ್ರೋನ್ ಹಳ್ಳವನ್ನು ದಾಟಿಹೋದನು. ನಂತರ ಜನರೆಲ್ಲರೂ ಅರಣ್ಯಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಜನರೆಲ್ಲಾ ದಾಟಿಹೋಗುವಾಗ, ದೇಶದವರೆಲ್ಲಾ ಮಹಾಧ್ವನಿಯಿಂದ ಅತ್ತರು. ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು. ಹಾಗೆಯೇ ಅವನ ಜನರೆಲ್ಲರೂ ದಾಟಿ ಮರುಭೂಮಿಯ ಮಾರ್ಗವಾಗಿ ನಡೆದುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:23
12 ತಿಳಿವುಗಳ ಹೋಲಿಕೆ  

ಅರಸನು ಚೀಬನನ್ನು ನೋಡಿ, “ಇವುಗಳನ್ನು ಏಕೆ ತಂದೆ?” ಎಂದು ಕೇಳಿದನು. ಅವನು, “ಕತ್ತೆಗಳನ್ನು ಅರಸರ ಮನೆಯವರು ಸವಾರಿಮಾಡಲೆಂದು, ಹಣ್ಣು ರೊಟ್ಟಿಗಳನ್ನು ಆಳುಗಳು ತಿನ್ನಲೆಂದೂ ಹಾಗು ದ್ರಾಕ್ಷಾರಸವನ್ನು ಅರಣ್ಯದಲ್ಲಿ ದಣಿದವರು ಕುಡಿಯಲೆಂದು ತಂದಿದ್ದೇನೆ,” ಎಂದು ಉತ್ತರಕೊಟ್ಟನು.


ಯೇಸು ಸ್ವಾಮಿ ಹೀಗೆ ಹೇಳಿದ ಬಳಿಕ ತಮ್ಮ ಶಿಷ್ಯರೊಡನೆ ಹೊರಟು, ಕೆದ್ರೋನ್ ಹಳ್ಳವನ್ನು ದಾಟಿ, ಅಲ್ಲೇ ಇದ್ದ ತೋಟವನ್ನು ಹೊಕ್ಕರು.


ನೀನು ಇದನ್ನು ಬಿಟ್ಟು ಕಿದ್ರೋನ್ ಹಳ್ಳದ ಆಚೆಗೆ ಹೋದೆಯಾದರೆ, ಅದೇ ದಿವಸ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಕೋ; ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು,” ಎಂದು ಹೇಳಿದನು.


ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.


ಬಾಲಕನು ಬೆಳೆದಂತೆ ಆತ್ಮಶಕ್ತಿಯುತನಾದನು. ಇಸ್ರಯೇಲ್ ಜನರಿಗೆ ಬಹಿರಂಗವಾಗಿ ಕಾಣಿಸಿಕೊಳ್ಳುವವರೆಗೂ ಅವನು ಬೆಂಗಾಡಿನಲ್ಲೇ ವಾಸಿಸುತ್ತಿದ್ದನು.


“ಸರ್ವೇಶ್ವರನಿಗೆ ಮಾರ್ಗವನ್ನು ನೇರಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ, ಎಂದು ಬೆಂಗಾಡಿನಲ್ಲೊಬ್ಬನು ಘೋಷಿಸುತ್ತಿದ್ದಾನೆ,” ಎಂದಾಗ ಪ್ರವಾದಿ ಯೆಶಾಯನು ಸೂಚಿಸಿದ ವ್ಯಕ್ತಿ ಈತನೇ.


ಆ ಕಾಲದಲ್ಲಿ ಸ್ನಾನಿಕ ಯೊವಾನ್ನನು ಜುದೇಯ ಪ್ರಾಂತ್ಯದ ಬೆಂಗಾಡಿಗೆ ಹೋಗಿ ಬೋಧನೆಮಾಡಲು ಪ್ರಾರಂಭಿಸಿದನು.


ಯಾಜಕರು ಸರ್ವೇಶ್ವರನ ಆಲಯವನ್ನು‍ ಶುದ್ಧಮಾಡುವುದಕ್ಕೆ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ಹೊರಗೆ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.


ಇವನ ತಾಯಿ ಮಾಕಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ‘ರಾಜಮಾತೆ’ ಎಂಬ ಪದವಿಯಿಂದ ತೆಗೆದುಹಾಕಿ ಆ ಮೂರ್ತಿಯನ್ನು ಕಡಿದು ಕಿದ್ರೋನ್ ಹಳ್ಳದ ಹತ್ತಿರ ಸುಡಿಸಿದನು.


ಆಗ ದಾವೀದನು, “ಒಳ್ಳೆಯದು, ಮುಂದೆ ನಡೆ,” ಎಂದನು. ಗಿತ್ತೀಯನಾದ ಇತ್ತೈಯು ತನ್ನ ಎಲ್ಲಾ ಸೈನಿಕರನ್ನೂ ಪರಿಜನರನ್ನೂ, ಕರೆದುಕೊಂಡು ಮುಂದೆ ನಡೆದನು.


ನಿಮ್ಮಿಂದ ವರ್ತಮಾನ ಬರುವ ತನಕ ನಾನು ಅಡವಿಯಲ್ಲಿ ನದಿದಾಟುವ ಸ್ಥಳದ ಹತ್ತಿರ ಇರುವೆನು,” ಎಂದು ಹೇಳಿದನು.


ಹೆಣ ಹೂಣುವ, ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲ ಸರ್ವೇಶ್ವರನಿಗೆ ಪರಿಶುದ್ಧ ಸ್ಥಾನವಾಗುವುದು. ಈ ನಗರ ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು