Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:6 - ಕನ್ನಡ ಸತ್ಯವೇದವು C.L. Bible (BSI)

6 ಅರಸನ ಬಳಿಗೆ ನ್ಯಾಯನಿರ್ಣಯಕ್ಕಾಗಿ ಬರುತ್ತಿದ್ದ ಎಲ್ಲಾ ಇಸ್ರಯೇಲರಿಗೆ ಅಬ್ಷಾಲೋಮನು ಹೀಗೆಯೇ ಮಾಡಿ ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ಒಲಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲರಿಗೂ ಅಬ್ಷಾಲೋಮನು ಹೀಗೆಯೇ ಮಾಡಿ, ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲ್ಯರಿಗೆ ಅಬ್ಷಾಲೋಮನು ಹೀಗೆಯೇ ಮಾಡಿ ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ರಾಜನಾದ ದಾವೀದನ ಬಳಿಗೆ ತೀರ್ಪಿಗಾಗಿ ಬರುವ ಎಲ್ಲಾ ಇಸ್ರೇಲರಿಗೆ ಅಬ್ಷಾಲೋಮನು ಇದೇ ರೀತಿ ಮಾಡುತ್ತಿದ್ದನು. ಹೀಗೆ, ಅಬ್ಷಾಲೋಮನು ಇಸ್ರೇಲಿನ ಜನರೆಲ್ಲರ ಹೃದಯಗಳನ್ನು ಗೆದ್ದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲರೆಲ್ಲರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲರ ಹೃದಯಗಳನ್ನು ಗೆದ್ದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:6
6 ತಿಳಿವುಗಳ ಹೋಲಿಕೆ  

ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ಅನೀತಿವಂತನು ಮಾತಿನಿಂದ ನೆರೆಯವನನ್ನು ನಾಶಮಾಡುವನು; ನೀತಿವಂತನು ತಿಳುವಳಿಕೆಯಿಂದ ಅವನನ್ನು ಉದ್ಧಾರಮಾಡುವನು.


ಇಸ್ರಯೇಲರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನ ದಾವೀದನಿಗೆ ಮುಟ್ಟಿತು.


“ಅವನ ಸ್ಥಾನದಲ್ಲಿ ನೀಚನೊಬ್ಬನು ಏಳುವನು. ಅವನು ರಾಜಪದವಿಗೆ ಹಕ್ಕುದಾರನಲ್ಲ. ಆದರೂ ನೆಮ್ಮದಿಯ ಕಾಲದಲ್ಲಿ ನಯವಾದ ನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.


ಜಗತ್ತಿನಲ್ಲಿ ಬದುಕಿದ್ದ ಜೀವಂತರೆಲ್ಲರು ರಾಜನಿಗೆ ಪ್ರತಿಯಾಗಿ ನಿಂತ ಆ ಯುವಕನ ಪಕ್ಷ ವಹಿಸುವುದನ್ನು ಕಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು