Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:1 - ಕನ್ನಡ ಸತ್ಯವೇದವು C.L. Bible (BSI)

1 ದಾವೀದನು ಗುಡ್ಡದ ತುದಿಯ ಆಚೆಗೆ ಹೋಗುವಷ್ಟರಲ್ಲಿ ಮೆಫೀಬೋಶೆತನ ಸೇವಕನಾದ ಚೀಬನು ಇನ್ನೂರು ರೊಟ್ಟಿಗಳನ್ನು, ನೂರು ಒಣಗಿದ ದ್ರಾಕ್ಷಿಗೊಂಚಲುಗಳನ್ನು, ನೂರು ಹಣ್ಣುಗಳನ್ನು ಹಾಗು ಒಂದು ಬುದ್ದಲಿ ದ್ರಾಕ್ಷಾರಸವನ್ನು ತಡಿಹಾಕಿದ ಎರಡು ಕತ್ತೆಗಳ ಮೇಲೆ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನು ಗುಡ್ಡದ ತುದಿಯ ಆಚೆಗೆ ಹೋದ ಕೂಡಲೆ ಮೆಫೀಬೋಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳನ್ನೂ, ನೂರು ಒಣಗಿದ ದ್ರಾಕ್ಷಿ ಗೊಂಚಲುಗಳನ್ನೂ, ನೂರು ಅಂಜೂರ ಹಣ್ಣುಗಳನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾವೀದನು ಗುಡ್ಡದ ತುದಿಯ ಆಚೆಗೆ ಹೋದ ಕೂಡಲೆ ಮೆಫೀಬೋಶೆತನ ಸೇವಕನಾದ ಚೀಬನು ತಡಿ ಹಾಕಿದ ಎರಡು ಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳನ್ನೂ ನೂರು ಒಣಗಿದ ದ್ರಾಕ್ಷೇ ಗೊಂಚಲುಗಳನ್ನೂ ನೂರು ಹಣ್ಣುಗಳನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದಾವೀದನು ಆಲೀವ್ ಬೆಟ್ಟದ ಮೇಲೆ ಸ್ವಲ್ಪ ದೂರ ಬಂದನು. ಅಲ್ಲಿ ಮೆಫೀಬೋಶೆತನ ಸೇವಕನಾದ ಚೀಬನು ದಾವೀದನನ್ನು ಸಂಧಿಸಿದನು. ಚೀಬನ ಹತ್ತಿರ ತಡಿಹಾಕಲ್ಪಟ್ಟ ಎರಡು ಹೇಸರಕತ್ತೆಗಳಿದ್ದವು. ಆ ಹೇಸರಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳು, ಒಂದುನೂರು ಗೊಂಚಲು ಒಣದ್ರಾಕ್ಷಿ, ಒಂದುನೂರು ಹಣ್ಣುಗಳು ಮತ್ತು ದ್ರಾಕ್ಷಾರಸದ ಒಂದು ಚೀಲ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರ ಹೋದಾಗ, ಮೆಫೀಬೋಶೆತನ ಸೇವಕ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡೆದುಕೊಂಡು ಬಂದು, ಅವನನ್ನು ಎದುರುಗೊಂಡನು. ಅವುಗಳ ಮೇಲೆ ಇನ್ನೂರು ರೊಟ್ಟಿಗಳೂ, ಒಣಗಿದ ನೂರು ದ್ರಾಕ್ಷಿ ಗೊಂಚಲುಗಳೂ, ಬೇಸಿಗೆ ಕಾಲದ ನೂರು ಹಣ್ಣುಗಳೂ, ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:1
17 ತಿಳಿವುಗಳ ಹೋಲಿಕೆ  

ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷೀ ಗೊಂಚಲುಗಳು, ಅಂಜೂರ ಹಣ್ಣುಗಳ ಇನ್ನೂರು ಉಂಡೆಗಳು, ಇವುಗಳನ್ನೆಲ್ಲ ಕತ್ತೆಗಳ ಮೇಲೆ ಹೇರಿಸಿದಳು.


ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ, ಅರ್ಕೀಯನಾದ ಹೂಷೈ ಎಂಬವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು ಅರಸನ ಬಳಿಗೆ ಬಂದನು.


ಒಡೆಯರಾದ ಸರ್ವೇಶ್ವರ ನನಗೆ ಈ ದರ್ಶನವನ್ನು ತೋರಿಸಿದರು: ಮಾಗಿದ ಹಣ್ಣಿನ ಬುಟ್ಟಿಯೊಂದು ಕಾಣಿಸಿತು.


ತಾವು ಹೊರದೂಡಲ್ಪಟ್ಟು ವಾಸಮಾಡುತ್ತಿದ್ದ ಎಲ್ಲಾ ಊರುಗಳಿಂದ ಜುದೇಯಕ್ಕೆ ಹಿಂದಿರುಗಿದರು. ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ಸೇರಿಕೊಂಡರು. ದ್ರಾಕ್ಷಾರಸವನ್ನೂ ಹಣ್ಣುಹಂಪಲುಗಳನ್ನೂ ಹೇರಳವಾಗಿ ಕೂಡಿಸಿಕೊಂಡರು.


ನಾನಂತು ಮಿಚ್ಪದಲ್ಲಿ ವಾಸವಾಗಿರುವೆನು. ನಮ್ಮ ಬಳಿಗೆ ಬರುವ ಬಾಬಿಲೋನಿಯರ ಮುಂದೆ ನಿಮ್ಮ ಪ್ರತಿನಿಧಿಯಾಗಿರುವೆನು. ನೀವು ಹೋಗಿ ದ್ರಾಕ್ಷಾರಸ, ಹಣ್ಣು, ಎಣ್ಣೆ ಮುಂತಾದವುಗಳನ್ನು ಸಂಗ್ರಹಿಸಿ ನಿಮ್ಮ ಉಗ್ರಾಣಗಳಲ್ಲಿ ತುಂಬಿಸಿಡಿ. ನೀವು ಹಿಡಿದಿರುವ ಪಟ್ಟಣಗಳಲ್ಲೆ ವಾಸವಾಗಿರಿ,” ಎಂದು ಶಪಥಮಾಡಿ ಹೇಳಿದನು.


ದೂರದ ಉತ್ತರದಲ್ಲಿದ್ದ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಗೋತ್ರಗಳ ಜನರು ತಮ್ಮ ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ರೊಟ್ಟಿ, ಅಂಜೂರ, ಒಣದ್ರಾಕ್ಷಿ, ದ್ರಾಕ್ಷಾರಸ, ಎಣ್ಣೆಗಳನ್ನು ಹೊತ್ತುತಂದರು. ಭೋಜನಕ್ಕೆ ಕುರಿದನಗಳನ್ನು ಸಹ ತೆಗೆದುಕೊಂಡು ಬಂದರು. ನಾಡಿನಲ್ಲೆಲ್ಲಾ ಸಂತೋಷ ಸಂಭ್ರಮವಿತ್ತು.


ಇವನು ಎಂಬತ್ತು ವರ್ಷದ ಮುದುಕ. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಅವಧಿಯಲ್ಲಿ ಅವನ ಜೀವನಕ್ಕೆ ಬೇಕಾದುದನ್ನು ಇವನೇ ಒದಗಿಸಿಕೊಡುತ್ತಿದ್ದನು.


ದಾವೀದನು, ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೇಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು.


ಜೆಸ್ಸೆಯನು ರೊಟ್ಟಿಯನ್ನು, ಒಂದು ಬುದ್ದಲಿ ದ್ರಾಕ್ಷಾರಸವನ್ನು ಹಾಗು ಒಂದು ಹೋತಮರಿಯನ್ನು ಕತ್ತೆಯ ಮೇಲೆ ಹೇರಿಸಿ, ತನ್ನ ಮಗ ದಾವೀದನ ಮುಖಾಂತರ ಸೌಲನಿಗೆ ಕಳುಹಿಸಿದನು.


ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನಗೆದುರಾಗುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡು ಇರುವರು.


ಅಯ್ಯೋ, ನನ್ನ ಗತಿ ಏನೆಂದು ಹೇಳಲಿ? ಬೇಸಿಗೆಯಲ್ಲಿ ಬೆಳೆಯನ್ನು ಕೊಯ್ಯಲು ಬಂದವನಂತೆ ಇದ್ದೇನೆ. ಹಕ್ಕಲನ್ನು ಆಯ್ದ ಮೇಲೆ ದ್ರಾಕ್ಷಿಹಣ್ಣನ್ನು ಕೊಯ್ಯಲು ಬಂದವನಂತೆ ಇದ್ದೇನೆ. ತಿನ್ನುವುದಕ್ಕೆ ಒಂದು ಗೊಂಚಲು ಸಹ ಉಳಿದಿಲ್ಲ. ನನಗೆ ಇಷ್ಟವಾದ ದೋರೆ ಅಂಜೂರ ಕೂಡ ಸಿಕ್ಕುತ್ತಿಲ್ಲ.


ಕಾಣಿಕೆ ತರುವವನಿಗೆ ಬಾಗಿಲು ತೆರೆಯುತ್ತದೆ; ಶ್ರೀಮಂತನ ಸಾನ್ನಿಧ್ಯಕ್ಕೂ ಅದು ನಡೆಸುತ್ತದೆ.


ಅವನ ಜೊತೆಯಲ್ಲಿ ಸಾವಿರ ಮಂದಿ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ ಇಪ್ಪತ್ತು ಮಂದಿ ಸೇವಕರನ್ನೂ ಕರೆದುಕೊಂಡು ಬಂದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು