Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:16 - ಕನ್ನಡ ಸತ್ಯವೇದವು C.L. Bible (BSI)

16 ಅರ್ಕೀಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು, “ಅರಸರು ಚಿರಂಜೀವಿಯಾಗಿ ಬಾಳಲಿ! ಅರಸರು ಚಿರಂಜೀವಿಯಾಗಿ ಬಾಳಲಿ!” ಎಂದು ಘೋಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅರ್ಕಿಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು, “ಅರಸನು ಚಿರಂಜೀವಿಯಾಗಿರಲಿ, ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅರ್ಕೀಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು - ಅರಸನು ಚಿರಂಜೀವಿಯಾಗಿರಲಿ, ಅರಸನು ಚಿರಂಜೀವಿಯಾಗಿರಲಿ ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದಾವೀದನ ಸ್ನೇಹಿತನೂ ಅರ್ಕೀಯನೂ ಆದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದನು. ಹೂಷೈಯು, “ರಾಜನು ಚಿರಾಯುವಾಗಿರಲಿ, ರಾಜನು ಚಿರಾಯುವಾಗಿರಲಿ” ಎಂದು ಅಬ್ಷಾಲೋಮನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅರ್ಕಿಯನಾದ ಹೂಷೈಯು ಎಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದಾಗ, ಹೂಷೈ ಅಬ್ಷಾಲೋಮನಿಗೆ, “ಅರಸನು ಬಾಳಲಿ, ಅರಸನು ಬಾಳಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:16
13 ತಿಳಿವುಗಳ ಹೋಲಿಕೆ  

ಯೆಹೋಯಾದವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆಹೊಡೆದು, ‘ಅರಸನು ಚಿರಂಜೀವಿಯಾಗಿರಲಿ!’ ಎಂದು ಜಯಕಾರ ಮಾಡಿದರು.


ಆಗ ಸಮುವೇಲನು ಜನರೆಲ್ಲರಿಗೆ, “ನೋಡಿ, ಸರ್ವೇಶ್ವರನಿಂದ ಆಯ್ಕೆಯಾದವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ,” ಎಂದನು. ಜನರೆಲ್ಲರೂ, “ಅರಸನಿಗೆ ಜಯವಾಗಲಿ!” ಎಂದು ಘೋಷಿಸಿದರು.


ಅವನು ಇಲ್ಲಿಂದ ಇಳಿದುಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಬಲಿಯಾಗಿ ಅರ್ಪಿಸಿದ್ದಾನೆ. ರಾಜಪುತ್ರರೆಲ್ಲರನ್ನು, ಸೇನಾಪತಿಗಳನ್ನು ಹಾಗು ಯಾಜಕ ಎಬ್ಯಾತಾರನನ್ನು ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲೇ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿ ಇರಲಿ!’ ಎಂದು ಕೂಗುತ್ತಿದ್ದಾರೆ.


ಯೇಸುವಿನ ಹಿಂದೆಯೂ ಮುಂದೆಯೂ ಗುಂಪುಗುಂಪಾಗಿ ಹೋಗುತ್ತಿದ್ದ ಜನರು : “ದಾವೀದ ಕುಲಪುತ್ರನಿಗೆ ಜಯವಾಗಲಿ! ಸರ್ವೇಶ್ವರನ ನಾಮದಲಿ ಬರುವವನಿಗೆ ಮಂಗಳವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಹರ್ಷೋದ್ಗಾರ ಮಾಡುತ್ತಿದ್ದರು.


ಆಗ ದಾನಿಯೇಲನು ರಾಜನಿಗೆ, “ಅರಸರೇ, ಚಿರಂಜೀವಿಯಾಗಿರಿ!


ಬಳಿಕ ಆ ಮುಖ್ಯಾಧಿಕಾರಿಗಳೂ ಪ್ರಾಂತ್ಯಾಧಿಪತಿಗಳೂ ರಾಜನ ಸಮ್ಮುಖದಲ್ಲಿ ಕೂಡಿಬಂದು ಅವನಿಗೆ, “ದಾರ್ಯಾವೆಷ ರಾಜರೇ, ಚಿರಂಜೀವಿಯಾಗಿರಿ!


ರಾಜನೂ ಅವನ ಸಾಮಂತರೂ ಆಡಿದ ಮಾತು ರಾಣಿಗೆ ಮುಟ್ಟಿತು. ಆಕೆ ಔತಣ ಶಾಲೆಗೆ ಬಂದು, “ರಾಜರೇ, ಚಿರಂಜೀವಿಯಾಗಿರಿ! ನಿಮ್ಮ ಮನಸ್ಸು ಕಳವಳಗೊಳ್ಳದಿರಲಿ, ನಿಮ್ಮ ಮುಖ ಕಳೆಗುಂದದಿರಲಿ! ಪರಿಶುದ್ಧ ದೇವರ ಆತ್ಮ ನೆಲೆಸಿರುವ ಒಬ್ಬ ವ್ಯಕ್ತಿ ನಿಮ್ಮ ರಾಜ್ಯದಲ್ಲಿದ್ದಾನೆ.


ಆ ಪಂಡಿತರು ಅರಮೀಯ ಭಾಷೆಯಲ್ಲಿ ರಾಜನಿಗೆ, “ಅರಸರೇ, ಚಿರಂಜೀವಿಯಾಗಿರಿ! ಆ ಕನಸನ್ನು ನಿಮ್ಮ ದಾಸರಾದ ನಮಗೆ ಹೇಳಿ. ಅದರ ತಾತ್ಪರ್ಯವನ್ನು ತಿಳಿಸುತ್ತೇವೆ,” ಎಂದು ಅರಿಕೆಮಾಡಿದರು.


ಅಲ್ಲಿ ಯಾಜಕ ಚಾದೋಕನು ಹಾಗು ಪ್ರವಾದಿ ನಾತಾನನು ಅವನನ್ನು ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರು ‘ಅರಸ ಸೊಲೊಮೋನನು ಚಿರಂಜೀವಿಯಾಗಿರಲಿ!’ ಎಂದು ಘೋಷಿಸಲಿ.


ಅಬ್ಷಾಲೋಮನು ಜೆರುಸಲೇಮನ್ನು ಪ್ರವೇಶಿಸುವಷ್ಟರಲ್ಲೇ ದಾವೀದನ ಸ್ನೇಹಿತನಾದ ಹೂಷೈಯು ಪಟ್ಟಣಕ್ಕೆ ಬಂದನು.


ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ, ‘ಅರಸರೇ, ನಾನು ನಿಮ್ಮ ಸೇವಕನು; ಹಿಂದೆ ನಿಮ್ಮ ತಂದೆಗೆ ಸೇವೆಸಲ್ಲಿಸಿದಂತೆ ಈಗ ನಿಮ್ಮ ಸೇವೆಮಾಡುತ್ತೇನೆ,’ ಎಂದು ಹೇಳುವುದಾದರೆ ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡುವುದಕ್ಕೆ ನೀನು ನನಗೆ ಅನುಕೂಲ ಮಾಡಿಕೊಟ್ಟಂತಾಗುವುದು.


ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ, ಅರ್ಕೀಯನಾದ ಹೂಷೈ ಎಂಬವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು ಅರಸನ ಬಳಿಗೆ ಬಂದನು.


ನಾತಾನನ ಮಗ ಅಜರ್ಯನು - ಪ್ರದೇಶಾಧಿಪತಿಗಳ ಮುಖ್ಯಸ್ಥ; ನಾತಾನನ ಮಗ ಜಾಬೂದನು ಯಾಜಕ ಹಾಗು ಅರಸನ ಮಿತ್ರ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು