Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:21 - ಕನ್ನಡ ಸತ್ಯವೇದವು C.L. Bible (BSI)

21 ಅವನು, “ತಾವು ಹೋಗಿ ತಮ್ಮ ತಂದೆ ಮನೆಕಾಯುವುದಕ್ಕೆ ಬಿಟ್ಟಿರುವ ಅವನ ಉಪಪತ್ನಿಗಳೊಡನೆ ಸಂಗಮಿಸಿ. ಹೀಗೆ ಮಾಡುವುದಾದರೆ, ತಾವು ತಮ್ಮ ತಂದೆಗೆ ಅಸಹ್ಯವೈರಿಯಾದಿರೆಂದು ಎಲ್ಲ ಇಸ್ರಯೇಲರಿಗೆ ತಿಳಿಯುವುದು. ಆಗ ತಮ್ಮ ಪಕ್ಷದವರು ಹುಮ್ಮಸ್ಸುಗೊಳ್ಳುವರು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಅಹೀತೋಫೆಲನು, “ಹೋಗಿ ನಿನ್ನ ತಂದೆಯು ಮನೆಕಾಯುವುದಕ್ಕೆ ಬಿಟ್ಟಿರುವ ಅವನ ಉಪಪತ್ನಿಯರೊಡನೆ ಸಂಗಮಿಸು. ಹೀಗೆ ಮಾಡುವುದಾದರೆ ನೀನು ನಿನ್ನ ತಂದೆಗೆ ವೈರಿಯಾಗುವೆ ಎಂದು ಎಲ್ಲಾ ಇಸ್ರಾಯೇಲ್ಯರಿಗೆ ತಿಳಿಯುವುದರಿಂದ ನಿನ್ನ ಪಕ್ಷದವರು ಬಲಗೊಳ್ಳುವರು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೋಗಿ ನಿನ್ನ ತಂದೆಯು ಮನೆಕಾಯುವದಕ್ಕೆ ಬಿಟ್ಟಿರುವ ಅವನ ಉಪಪತ್ನಿಗಳೊಡನೆ ಸಂಗವಿುಸು. ಹೀಗೆ ಮಾಡುವದಾದರೆ ನೀನು ನಿನ್ನ ತಂದೆಗೆ ಅಸಹ್ಯವಾದಿಯೆಂದು ಎಲ್ಲಾ ಇಸ್ರಾಯೇಲ್ಯರಿಗೆ ತಿಳಿಯುವದರಿಂದ ನಿನ್ನ ಪಕ್ಷದವರು ಬಲಗೊಳ್ಳುವರು ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅಹೀತೋಫೆಲನು ಅಬ್ಷಾಲೋಮನಿಗೆ, “ನಿಮ್ಮ ತಂದೆಯು, ಮನೆಯನ್ನು ಕಾಯುವುದಕ್ಕೆ ತನ್ನ ಕೆಲವು ಪತ್ನಿಯರನ್ನು ಇಲ್ಲಿ ಬಿಟ್ಟುಹೋಗಿದ್ದಾನೆ. ನೀನು ಅವರೊಂದಿಗೆ ಮಲಗಿಕೋ. ನಿನ್ನ ತಂದೆಯು ನಿನ್ನನ್ನು ದ್ವೇಷಿಸುವನೆಂಬುದು ಇಸ್ರೇಲರಿಗೆಲ್ಲ ಆಗ ತಿಳಿಯುವುದು; ನಿನಗೆ ಮತ್ತಷ್ಟು ಬೆಂಬಲವನ್ನು ಕೊಡಲು ನಿನ್ನ ಜನರೆಲ್ಲರನ್ನು ಪ್ರೋತ್ಸಾಹಿಸಿದಂತಾಗುತ್ತದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅಹೀತೋಫೆಲನು ಅಬ್ಷಾಲೋಮನಿಗೆ, “ಮನೆಗೆ ಕಾವಲಿಟ್ಟ ನಿನ್ನ ತಂದೆಯ ಉಪಪತ್ನಿಯರ ಸಂಗಡ ಮಲಗು; ಆಗ ನಿನ್ನ ತಂದೆ ನಿನ್ನನ್ನು ತನ್ನ ಶತ್ರುವನ್ನಾಗಿ ಮಾಡಿದನೆಂದು ಎಲ್ಲ ಇಸ್ರಾಯೇಲರಿಗೆ ತಿಳಿಯುವುದು. ಆಗ ನಿನ್ನ ಜನರ ಕೈಗಳೂ ಬಲವಾಗುವುವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:21
22 ತಿಳಿವುಗಳ ಹೋಲಿಕೆ  

ಅರಸನಾದ ದಾವೀದನು ಜೆರುಸಲೇಮಿಗೆ ಬಂದ ಮೇಲೆ ತಾನು ಮನೆಕಾಯುವುದಕ್ಕಾಗಿ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾದ ಒಂದು ಮನೆಯಲ್ಲಿಟ್ಟು ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಆದರೆ ಅವರನ್ನು ತಿರುಗಿ ಕೂಡಲಿಲ್ಲ. ಅವರು ಜೀವದಿಂದ ಇರುವವರೆಗೂ ವಿಧವೆಯರಂತೆ ಇದ್ದು ಕಾವಲಲ್ಲಿರಬೇಕಾಯಿತು.


ಆಗ ಅರಸನು ಮನೆಕಾಯುವುದಕ್ಕಾಗಿ ಹತ್ತುಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.


ಜುದೇಯದ ಕುಲಸ್ಥರೇ, ಇಸ್ರಯೇಲ್ ವಂಶಜರೇ, ರಾಷ್ಟ್ರಗಳಲ್ಲಿ ನಿಮ್ಮ ಹೆಸರು ಶಾಪಕ್ಕೆ ಅಡ್ಡ ಹೆಸರಾಗಿತ್ತು. ಆದರೆ ನಾನು ನಿಮ್ಮನ್ನು ಉದ್ಧರಿಸಿ ನಿಮ್ಮ ಹೆಸರು ಶುಭಸೂಚ್ಯವಾಗುವಂತೆ ಮಾಡುವೆನು. ಹೆದರಬೇಡಿ; ನಿಮ್ಮ ಕೈ ಮುಂದಾಗಲಿ.”


ಯೆಹೂದ್ಯರು ನನ್ನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡಿದ್ದಾರೆ. ಆದುದರಿಂದ ಸೌಲನು ಸತ್ತುಹೋಗಿದ್ದರೂ ನೀವು ಶೂರರಾಗಿರಿ; ನಿಮ್ಮ ಕೈಗಳು ಜೋಲುಬೀಳದಿರಲಿ,” ಎಂದು ಹೇಳಿಸಿದನು.


“ಮಲತಾಯಿಯನ್ನು ಸಂಭೋಗಿಸಬಾರದು; ಹಾಗೆ ಮಾಡಿದರೆ ತಂದೆಗೆ ಮಾನಭಂಗವಾಗುವುದು. ಆಕೆ ನಿನ್ನ ತಂದೆಯ ಅರ್ಧಾಂಗಿ.


ಅನ್ಯಜನರಲ್ಲಿ ಕೂಡ ಇಲ್ಲದಂಥ ದುರ್ನಡತೆ ನಿಮ್ಮಲ್ಲಿದೆಯೆಂಬುದಾಗಿ ವರದಿ ಬಂದಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನಂತೆ.


ಆಗ ಅರಸ ಸೊಲೊಮೋನನು ತನ್ನ ತಾಯಿಗೆ, “ಅದೋನೀಯನಿಗಾಗಿ ಶೂನೇಮ್ಯಳಾದ ಅಬೀಷಗಳನ್ನು ಮಾತ್ರ ಕೇಳುವುದೇಕೆ? ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು; ಅವನು ನನ್ನ ಅಣ್ಣನಲ್ಲವೇ? ಯಾಜಕ ಎಬ್ಯಾತಾರನೂ ಚೆರೂಯಳ ಮಗ ಯೋವಾಬನೂ ಅವನ ಪಕ್ಷದವರಾಗಿದ್ದಾರೆ,” ಎಂದು ಉತ್ತರಕೊಟ್ಟನು.


ಅವನು, “ದಯವಿಟ್ಟು ಶೂನೇಮ್ಯಳಾದ ಅಬೀಷಗಳನ್ನು ನನಗೆ ಹೆಂಡತಿಯನ್ನಾಗಿ ಕೊಡಬೇಕೆಂದು ಅರಸ ಸೊಲೊಮೋನನಿಗೆ ಹೇಳಿ; ಅವನು ನಿಮ್ಮ ಮಾತನ್ನು ತಳ್ಳುವುದಿಲ್ಲ,” ಎಂದನು.


ಸರ್ವೇಶ್ವರನಾದ ನನ್ನ ಮಾತನ್ನು ಕೇಳು: ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ನಿನ್ನೆದುರಿನಲ್ಲೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲೇ ಅವರ ಕೂಡ ಮಲಗುವನು.


“ದಾವೀದನ ಹೆಸರು ಸ್ವಜನರಾದ ಇಸ್ರಯೇಲರಲ್ಲೇ ತಿರಸ್ಕೃತವಾಗಿದೆ. ಆದುದರಿಂದ ಇವನು ಎಂದೆಂದಿಗೂ ತನ್ನ ಅಧೀನನಾಗಿಯೇ ಇರುವನು,” ಎಂದು ಆಕೀಷನು ನಂಬಿದ್ದನು.


ಸೌಲನು ಫಿಲಿಷ್ಟಿಯರ ದಂಡುಪ್ರದೇಶವನ್ನು ನಾಶಮಾಡಿದ್ದರಿಂದ, ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಯೇಲರು ತಿಳಿದು, ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.


ಯಾವನಾದರು ಮಲತಾಯಿಯನ್ನು ಕೂಡಿದರೆ ಅವನು ತಂದೆಗೆ ಮಾನಭಂಗ ಮಾಡಿದಂತಾಯಿತು. ಅವರಿಬ್ಬರಿಗೂ ಮರಣ ಶಿಕ್ಷೆಯಾಗಬೇಕು. ಆ ಶಿಕ್ಷೆಗೆ ಅವರೇ ಕಾರಣರು.


ಆಕೆ ವೇಶ್ಯೆ ಎಂದೇ ಭಾವಿಸಿ, ದಾರಿಯಿಂದ ಓರೆಯಾಗಿ, ಆಕೆಯ ಬಳಿಗೆ ಹೋಗಿ, “ಸಂಭೋಗಕ್ಕೆ ಬರುತ್ತೀಯಾ?" ಎಂದು ಕರೆದನು. “ಬರಬೇಕಾದರೆ ಏನು ಕೊಡುತ್ತೀಯಾ?" ಎಂದಳು ಆಕೆ.


ಇಸ್ರಯೇಲನು ಆ ನಾಡಿನಲ್ಲಿ ವಾಸವಾಗಿದ್ದಾಗ ರೂಬೇನ್ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗಮಿಸಿದನು, ಈ ಸಂಗತಿ ತಿಳಿದುಬಂದಾಗ ಇಸ್ರಯೇಲನಿಗೆ ಕಡುಕೋಪವಾಯಿತು.


ಆಗ ಯಕೋಬನು, ಸಿಮೆಯೋನ್ ಮತ್ತು ಲೇವಿಯರಿಗೆ, “ನೀವು ನನ್ನ ಹೆಸರನ್ನು ಈ ನಾಡಿನ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯಮಾಡಿಬಿಟ್ಟರಿ; ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಕೆಲವರೇ. ಈ ನಾಡಿನವರೆಲ್ಲರು ಒಟ್ಟಿಗೆ ಬಂದು ನನ್ನ ಮೇಲೆ ಬಿದ್ದರೆ ನಾನು ಮಾತ್ರವಲ್ಲ, ನನ್ನ ಮನೆಯವರೆಲ್ಲರೂ ನಿರ್ಮೂಲವಾಗುತ್ತೇವೆ ಅಲ್ಲವೇ?” ಎಂದನು.


ದೇವಪುತ್ರರೂ ಮನುಷ್ಯಪುತ್ರಿಯರೂ ಕೂಡಿ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದನಂತರವೂ ಜಗದಲ್ಲಿ ‘ನೆಪೀಲಿಯರು’ ಇದ್ದರು. ಇವರೇ ಪ್ರಾಚೀನಕಾಲದ ಸುಪ್ರಸಿದ್ಧ ಪರಾಕ್ರಮಿಗಳು.


ಅನಂತರ ಅಬ್ಷಾಲೋಮನು, “ನಾವು ಈಗ ಮಾಡತಕ್ಕದ್ದೇನು? ಆಲೋಚನೆಮಾಡಿ ಹೇಳು,” ಎಂಬುದಾಗಿ ಅಹೀತೋಫೆಲನನ್ನು ಕೇಳಿದನು.


ಆಗ ಹೂಷೈಯು ಅಬ್ಷಾಲೋಮನಿಗೆ, “ಈ ಸಾರಿ ಅಹೀತೋಫೆಲನು ಹೇಳಿದ ಆಲೋಚನೆ ಒಳ್ಳೆಯದಲ್ಲ;


ತಾವು ದಾವೀದನಿಗೆ ವೈರಿಗಳಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಹಣಕೊಟ್ಟು ಬೇತ್ ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಸಿರಿಯಾದವರ ಇಪ್ಪತ್ತು ಸಾವಿರಮಂದಿ ಕಾಲಾಳುಗಳನ್ನು, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನು ಹಾಗು ಟೋಬ್ ದೇಶದಿಂದ ಹನ್ನೆರಡು ಸಾವಿರ ಮಂದಿ ದಂಡಾಳುಗಳನ್ನೂ ಬರಮಾಡಿದರು.


ಆಗ ಯೋನಾದಾಬನು, “ನೀನು ಅಸ್ವಸ್ಥನಾದವನಂತೆ ನಟಿಸಿ ಹಾಸಿಗೆಯ ಮೇಲೆ ಮಲಗಿಕೋ; ನಿನ್ನ ತಂದೆ ನಿನ್ನನ್ನು ನೋಡುವುದಕ್ಕೆ ಬಂದಾಗ, ‘ದಯವಿಟ್ಟು ನನ್ನ ತಂಗಿ ತಾಮಾರಳನ್ನು ನನಗಾಗಿ ಆಹಾರ ಸಿದ್ಧಮಾಡುವುದಕ್ಕೆ ಕಳುಹಿಸಿ. ಆಕೆ ನನ್ನೆದುರಿನಲ್ಲೇ ಸಿದ್ಧಮಾಡಿಕೊಡುವುದಾದರೆ ಊಟಮಾಡುತ್ತೇನೆ’ ಎಂದು ಹೇಳು,” ಎಂದನು.


ಸೊಲೊಮೋನನ ಜೀವಮಾನದಲ್ಲೆಲ್ಲಾ ಇಸ್ರಯೇಲರಿಗೆ ಮಹಾಬಾಧಕನಾದ ಹದದನ ಜೊತೆಗೆ ಇವನೂ ವೈರಿಯಾಗಿದ್ದನು. ಇವನು ಸಿರಿಯಾ ದೇಶದಲ್ಲಿ ಅರಸನಾಗಿ ಇಸ್ರಯೇಲರನ್ನು ಬಹಳವಾಗಿ ದ್ವೇಷಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು