Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:7 - ಕನ್ನಡ ಸತ್ಯವೇದವು C.L. Bible (BSI)

7 ಅಲ್ಲದೆ, ಅವನು ದಾವೀದನನ್ನು ಶಪಿಸುತ್ತಾ, “ನಡೆ, ಕೊಲೆಗಾರನೇ, ನೀಚನೇ, ನಡೆ; ಸೌಲನ ರಾಜ್ಯವನ್ನು ಕಬಳಿಸಿಕೊಂಡು, ಅವನ ಮನೆಯವರನ್ನು ಕೊಂದದ್ದಕ್ಕಾಗಿ ಸರ್ವೇಶ್ವರ ನಿನಗೆ ಮುಯ್ಯಿ ತೀರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ಅವರನ್ನು ಶಪಿಸುತ್ತಾ, “ಹೋಗು ಕೊಲೆಗಾರನೆ, ನೀಚನೆ ಹೋಗು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ಶಪಿಸುತ್ತಾ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಶಿಮ್ಮಿಯು ದಾವೀದನನ್ನು ಶಪಿಸುತ್ತಾ “ತೊಲಗಿಹೋಗು! ನೀನು ಕೊಲೆಗಾರ! ನೀನು ದುಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಶಿಮ್ಮಿಯು ಅರಸನನ್ನು ದೂಷಿಸುತ್ತಾ, “ಕೊಲೆಗಾರನೇ, ನೀಚನೇ, ಹೊರಟು ಹೋಗು; ಹೊರಟು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:7
16 ತಿಳಿವುಗಳ ಹೋಲಿಕೆ  

ತಪ್ಪಿಸೆನ್ನನು ಸ್ವಾಮಿ ದೇವಾ, ರಕ್ತಾಪರಾಧದಿಂದ I ನಿನ್ನ ಸತ್ಯಸಂಧತೆಯನು ಸಾರುವೆ ಮುಕ್ತಕಂಠದಿಂದ II


ಹುಸಿ ನುಡಿವವರನು ಪ್ರಭು, ನೀ ನಾಶಮಾಡುವೆ I ಹಿಂಸಕರನು, ವಂಚಕರನು ನೀ ಹೇಸಿಬಿಡುವೆ II


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು, ಕಲ್ಲೆಸೆದು ಕೊಲ್ಲಿರಿ,” ಎಂದು ಬರೆದಿದ್ದಳು.


ಹೀಗಿರಲು, ನೀನು ಸರ್ವೇಶ್ವರನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದೇಕೆ? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡೆ.


ನೇರನ ಮಗನಾದ ಅಬ್ನೇರನ ವಧೆಯಲ್ಲಿ ಅರಸನ ಕೈವಾಡವಿಲ್ಲ ಎಂಬುದು ಅವನ ಎಲ್ಲಾ ಜನರಿಗೂ ಇಸ್ರಯೇಲರಿಗೂ ಅದೇ ದಿವಸ ಗೊತ್ತಾಯಿತು.


ಈಗ ಮಾಡಬೇಕಾದುದ್ದನ್ನು ನೀವೇ ಆಲೋಚಿಸಿ ತೀರ್ಮಾನಿಸಿ. ನಮ್ಮ ಯಜಮಾನರಿಗೂ ಅವರ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ; ಮಂದಮತಿಯಾದ ಅವರೊಡನೆ ಮಾತಾಡುವುದು ಅಸಾಧ್ಯ,” ಎಂದು ಹೇಳಿದನು.


ಏಲಿಯ ಮಕ್ಕಳು ಮಹಾದುಷ್ಟರು. ಅವರು ಸರ್ವೇಶ್ವರನನ್ನು ಲಕ್ಷಿಸುತ್ತಿರಲಿಲ್ಲ.


ಅಲ್ಲಿ ವಾಸವಾಗಿರುವ ಇಸ್ರಯೇಲರಲ್ಲಿ ಕೆಲವು ಮಂದಿ ದುಷ್ಟರು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ಸೂಚಿಸಬಹುದು. ‘ಆ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಬಹುದು.


ಅವನು ದಾವೀದನ, ಅವನ ಎಲ್ಲ ಸೇವಕರ, ಎಡಬಲದಲ್ಲಿದ್ದ ಸೈನಿಕರ ಹಾಗು ಶೂರರ ಕಡೆಗೆ ಕಲ್ಲೆಸೆಯ ತೊಡಗಿದನು.


ಚೆರೂಯಳ ಮಗ ಅಬೀಷೈಯು, “ಸರ್ವೇಶ್ವರನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ?’ ಎಂದನು.


ಬೆನ್ಯಾಮೀನ್ ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ನೀಚ ವ್ಯಕ್ತಿ ಅಲ್ಲಿಗೆ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಯೇಲರೇ, ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ. ಜೆಸ್ಸೆಯನ ಮಗನಲ್ಲಿ ನಮಗೆ ಹಕ್ಕುಭಾದ್ಯತೆಯಿಲ್ಲ. ಪ್ರತಿ ಒಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ತೆರಳೋಣ,” ಎಂದನು.


ಶತ್ರುಗರ್ಜನೆಯಿಂದ, ದುರುಳರ ಹಿಂಸೆಯಿಂದ I ಅವರೆನಗೆ ಬರಮಾಡಿರುವ ಆತಂಕದಿಂದ I ದ್ವೇಷಿಸುತಿಹರೆನ್ನನು ಕೋಪಾವೇಶದಿಂದ II


“ಈತನಿಗೆ ದೇವರ ನೆರವೆನಿತು?” I ಇಂತಿದೆ ಹಲವರ ಕೆಣಕು ಮಾತು II


ನನ್ನ ಹೃದಯವು ನೊಂದು ಬೆಂದಿದೆ I ಮರಣ ಭಯವು ಆವರಿಸಿಕೊಂಡಿದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು