Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:23 - ಕನ್ನಡ ಸತ್ಯವೇದವು C.L. Bible (BSI)

23 ಅಹೀತೋಫೆಲನು ತನ್ನ ಆಲೋಚನೆ ನಡೆಯಲಿಲ್ಲವೆಂದು ತಿಳಿದು, ಕತ್ತೆಗೆ ತಡಿಹಾಕಿಸಿ ಕುಳಿತುಕೊಂಡು ತನ್ನ ಊರಿಗೆ ಹೋಗಿದ್ದನು. ಮನೆಯ ವ್ಯವಸ್ಥೆಮಾಡಿ ಅನಂತರ ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದು ಕತ್ತೆಗೆ ತಡಿಹಾಕಿಸಿ ಕೂತುಕೊಂಡು ತನ್ನ ಊರಿಗೆ ಹೋಗಿ ಮನೆಯಲ್ಲಿ ವ್ಯವಸ್ಥೆಮಾಡಿ ಉರ್ಲುಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅಹೀತೋಫೆಲನು ತನ್ನ ಸಲಹೆಯನ್ನು ಇಸ್ರೇಲರು ಸ್ವೀಕರಿಸಲಿಲ್ಲವೆಂಬುದನ್ನು ತಿಳಿದು ತನ್ನ ಹೇಸರಕತ್ತೆಯ ಮೇಲೆ ತಡಿಯನ್ನು ಹಾಕಿ ತನ್ನ ಸ್ವಂತ ಊರಿನಲ್ಲಿದ್ದ ಮನೆಗೆ ಹೋದನು. ಅವನು ತನ್ನ ಕುಟುಂಬಕ್ಕೆ ಯೋಜನೆಗಳನ್ನು ಮಾಡಿದನು. ನಂತರ ಅವನೇ ನೇಣು ಹಾಕಿಕೊಂಡು ಸತ್ತನು. ಅಹೀತೋಫೆಲನನ್ನು ಜನರು ಅವನ ತಂದೆಯ ಸಮಾಧಿಯ ಬಳಿ ಸಮಾಧಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ, ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ, ತನ್ನ ಪಟ್ಟಣದಲ್ಲಿರುವ ತನ್ನ ಮನೆಗೆ ಹೋದನು. ಅವನು ಮನೆಯನ್ನು ಕ್ರಮಪಡಿಸಿ, ಉರುಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:23
15 ತಿಳಿವುಗಳ ಹೋಲಿಕೆ  

ಆಗ ಅವನು ಆ ಹಣವನ್ನು ದೇವಾಲಯದಲ್ಲೇ ಎಸೆದು, ಹೊರಟುಹೋಗಿ ನೇಣುಹಾಕಿಕೊಂಡು ಸತ್ತನು.


ಆ ದಿನಗಳಲ್ಲಿ ಹಿಜ್ಕೀಯನು ಮಾರಕ ರೋಗದಿಂದ ನರಳುತ್ತಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನಿನ್ನ ಸಂಸಾರದ ವಿಷಯವಾಗಿ ವ್ಯವಸ್ಥೆಮಾಡು; ಏಕೆಂದರೆ, ‘ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ,’ ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದು ಹೇಳಿದನು.


ಇದಲ್ಲದೆ ಅವನು ಶಾಂತಿಸಮಾಧಾನದ ಬಲಿದಾನ ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಬರಮಾಡಿಸಿದ್ದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದುದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.


ಅವರಪರಾಧಿಗಳೆಂದು ಹೇ ದೇವಾ, ನಿರ್ಣಯಿಸಿಬಿಡು I ಅವರ ಮೋಸದ ಪಾಶದಲೇ ಅವರನು ಸಿಕ್ಕಿಸಿಬಿಡು I ಅವರನೇಕ ಪಾಪಗಳಿಗಾಗಿ ಅವರನು ದಬ್ಬಿಬಿಡು I ಅವರು ನಿನ್ನ ವಿರುದ್ಧ ದಂಗೆಯೆದ್ದವರು, ನೋಡು II


ಪಟ್ಟಣ ಅವರ ವಶವಾದದ್ದನ್ನು ಜಿಮ್ರಿ ಕಂಡು, ಅರಮನೆಯ ಗರ್ಭಗೃಹವನ್ನು ಹೊಕ್ಕು ಅರಮನೆಗೆ ಬೆಂಕಿಹೊತ್ತಿಸಿ ಸುಟ್ಟುಕೊಂಡು ಸತ್ತನು.


ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು, “ಸರ್ವೇಶ್ವರಾ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು,” ಎಂದು ಪ್ರಾರ್ಥಿಸಿದನು.


ಮನುಷ್ಯನ ಬಾಳಿನ ಅಳಿವು ತನ್ನ ಮೂರ್ಖತನದಿಂದ; ಆದರೂ ಅವನು ಸಿಡಿದೇಳುವುದು ಸರ್ವೇಶ್ವರನ ವಿರುದ್ಧ.


ವಿನಾಶಕ್ಕೆ ಮುಂಚೆ ವಿಪರೀತ ಬುದ್ಧಿ; ನೆಲಕ್ಕುರುಳುವುದಕ್ಕೆ ಮುಂಚೆ ನೆತ್ತಿಗೇರಿತು ಸೊಕ್ಕು.


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ದುರ್ಜನರಿಗೆ ವಿಪತ್ತು ಬರಮಾಡುತ್ತಾನಲ್ಲವೆ? ಕೇಡಿಗರಿಗೆ ಉಪದ್ರವ ಕೊಡುತ್ತಾನಲ್ಲವೆ?


ಆ ದಿನಗಳಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿಗಿರುವಷ್ಟೇ ಬೆಲೆಯಿತ್ತು. ದಾವೀದನೂ ಅಬ್ಷಾಲೋಮನೂ ಅವನ ಸಲಹೆಗಳನ್ನು ಮಾನ್ಯಮಾಡುತ್ತಿದ್ದರು.


ಆಗ ದಾವೀದನೂ ಅವನ ಜೊತೆಯಲ್ಲಿದ್ದವರೆಲ್ಲರೂ ಜೋರ್ಡನ್ ನದಿಯನ್ನು ದಾಟಿದರು. ಉದಯವಾದಾಗ ದಾಟಬೇಕಾದವನೊಬ್ಬನೂ ಇರಲಿಲ್ಲ.


ಆ ದಿನಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ. ಆದುದರಿಂದ ನಿನ್ನ ಸಂಸಾರವನ್ನು ವ್ಯವಸ್ಥೆಮಾಡಬೇಕು ಎಂದು ಸರ್ವೇಶ್ವರ ಹೇಳಿದ್ದಾರೆ,” ಎಂದು ತಿಳಿಸಿದನು.


ನನಗೆದುರಾಡಿ ತಪ್ಪು ಹೊರಿಸುವವರಿಗೆ I ಅದುವೇ ಪ್ರಭುವಿನಿಂದ ಗಿಟ್ಟುವ ಕೊಡುಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು