Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:3 - ಕನ್ನಡ ಸತ್ಯವೇದವು C.L. Bible (BSI)

3 ಅರಸನೊಬ್ಬನನ್ನೇ ಕೊಂದು ಎಲ್ಲಾ ಜನರನ್ನು ತಿರುಗಿ ನಿಮ್ಮ ಬಳಿಗೆ ಬರಮಾಡುವೆನು. ನಿಮ್ಮ ಅಪೇಕ್ಷೆಯಂತೆ ಎಲ್ಲಾ ಜನರೂ ಹಿಂದಿರುಗಿ ಬಂದ ಮೇಲೆ ನಾಡಿನಲ್ಲಿ ಎಲ್ಲಾ ಸಮಾಧಾನವುಂಟಾಗುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಅರಸನೊಬ್ಬನನ್ನೇ ಕೊಂದು, ನಿನ್ನ ಅಪೇಕ್ಷೆಯಂತೆ ಎಲ್ಲಾ ಜನರನ್ನು ನಿನ್ನ ಬಳಿಗೆ ತಿರುಗಿ ಬರಮಾಡುವೆನು. ನಿನ್ನ ದೇಶದಲ್ಲೆಲ್ಲಾ ಸಮಾಧಾನವುಂಟಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅರಸನೊಬ್ಬನನ್ನೇ ಕೊಂದು ಎಲ್ಲಾ ಜನರನ್ನು ತಿರಿಗಿ ನಿನ್ನ ಬಳಿಗೆ ಬರಮಾಡುವೆನು. ನಿನ್ನ ಅಪೇಕ್ಷೆಯಂತೆ ಎಲ್ಲಾ ಜನರೂ ಹಿಂದಿರುಗಿ ಬಂದ ಮೇಲೆ ದೇಶದಲ್ಲೆಲ್ಲಾ ಸಮಾಧಾನವುಂಟಾಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅನಂತರ ನಾನು ಜನರೆಲ್ಲರನ್ನೂ ಹಿಂದಕ್ಕೆ ನಿನ್ನ ಬಳಿಗೆ ಕರೆತರುತ್ತೇನೆ. ದಾವೀದನು ಸತ್ತರೆ, ಜನರೆಲ್ಲರೂ ಸಮಾಧಾನದಿಂದ ಹಿಂದಕ್ಕೆ ಬರುತ್ತಾರೆ” ಎಂದು ಅಬ್ಷಾಲೋಮನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ನಾನು ಅರಸನನ್ನು ಮಾತ್ರ ಹೊಡೆದು, ಜನರೆಲ್ಲರನ್ನು ತಿರುಗಿ ನಿನ್ನ ಬಳಿಗೆ ತೆಗೆದುಕೊಂಡು ಬರುವೆನು. ನೀನು ಹುಡುಕುವವನು ಸಿಕ್ಕಿದರೆ, ಜನರೆಲ್ಲರು ಹಿಂದಿರುಗಿದ ಹಾಗೆ ಆಗುವುದು. ಜನರೆಲ್ಲರು ಸಮಾಧಾನವಾಗಿರುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:3
6 ತಿಳಿವುಗಳ ಹೋಲಿಕೆ  

ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ದುರುಳರಿಗೆ ಇಲ್ಲ ಶಾಂತಿಸಮಾಧಾನ,” ಎನ್ನುತ್ತಾರೆ ದೇವರು.


“ದುಷ್ಟರಿಗಿಲ್ಲ ಶಾಂತಿಸಮಾಧಾನ” ಇದು ಸರ್ವೇಶ್ವರ ಸ್ವಾಮಿಯ ವಚನ.


ಅಬ್ನೇರನು ದಾವೀದನಿಗೆ, “ನಾನು ಹೊರಟುಹೋಗಿ ಇಸ್ರಯೇಲರನ್ನೆಲ್ಲಾ ಕೂಡಿಸಿ ನನ್ನ ಒಡೆಯರಾದ ಅರಸರ ಬಳಿಗೆ ಕರೆದುಕೊಂಡು ಬರುವೆನು; ಅವರು ನಿಮ್ಮ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನ ಮಾಡಬಹುದು,” ಎಂದು ಹೇಳಿದನು. ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಕೊಟ್ಟನು.


ಈ ಸಲಹೆ ಅಬ್ಷಾಲೋಮನಿಗೂ ಇಸ್ರಯೇಲರ ಹಿರಿಯರೆಲ್ಲರಿಗೂ ಸರಿಯಾಗಿ ಕಂಡಿತು.


ಅವರು, ನನ್ನ ಜನರ ಗಾಯಗಳು ಗುಣವಾಗದಿದ್ದರೂ ಅವು ಕೇವಲ ಮಚ್ಚೆಗಳೋ ಎಂಬಂತೆ ‘ಎಲ್ಲ ಚೆನ್ನಾಗಿದೆ’ ಎಂದು ಸಮಾಧಾನ ಹೇಳಿ ವಂಚಿಸುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು