Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:4 - ಕನ್ನಡ ಸತ್ಯವೇದವು C.L. Bible (BSI)

4 ಈ ಸಲಹೆ ಅಬ್ಷಾಲೋಮನಿಗೂ ಇಸ್ರಯೇಲರ ಹಿರಿಯರೆಲ್ಲರಿಗೂ ಸರಿಯಾಗಿ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈ ಮಾತು ಅಬ್ಷಾಲೋಮನಿಗೂ, ಇಸ್ರಾಯೇಲರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಈ ಮಾತು ಅಬ್ಷಾಲೋಮನಿಗೂ ಇಸ್ರಾಯೇಲ್ಯರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಈ ಉಪಾಯವು ಅಬ್ಷಾಲೋಮನಿಗೆ ಮತ್ತು ಇಸ್ರೇಲಿನ ನಾಯಕರಿಗೆಲ್ಲ ಸರಿಯೆಂದು ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈ ಮಾತು ಅಬ್ಷಾಲೋಮನ ದೃಷ್ಟಿಗೂ, ಇಸ್ರಾಯೇಲಿನ ಸಮಸ್ತ ಹಿರಿಯರ ದೃಷ್ಟಿಗೂ ಒಳ್ಳೆಯದಾಗಿ ತೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:4
8 ತಿಳಿವುಗಳ ಹೋಲಿಕೆ  

ಇಂಥವುಗಳನ್ನು ಮಾಡುವವರು ಮರಣದಂಡನೆಗೆ ಪಾತ್ರರು ಎಂಬ ದೈವನಿಯಮವನ್ನು ಅರಿತಿದ್ದರೂ ಇಂಥ ಹೀನ ಕೃತ್ಯಗಳನ್ನು ಮಾಡುತ್ತಾರೆ. ತಾವು ಮಾಡುವುದೇ ಅಲ್ಲದೆ ಹಾಗೆಮಾಡುವ ಇತರರನ್ನೂ ಪ್ರೋತ್ಸಾಹಿಸುತ್ತಾರೆ.


ಅದಕ್ಕೆ ಅವನ ಪತ್ನಿ ಜೆರೆಷಳೂ ಹಾಗೂ ಅವನ ಆಪ್ತರೂ ಅವನಿಗೆ, “ಅರಸನ ಅಪ್ಪಣೆಯನ್ನು ಪಡೆದು ಮೊರ್ದೆಕೈಯನ್ನು ಗಲ್ಲಿಗೇರಿಸುವ ಸಲುವಾಗಿ ಇಪ್ಪತ್ತೆರಡು ಮೀಟರ್ ಉದ್ದದ ಗಲ್ಲುಮರವೊಂದನ್ನು ಸಿದ್ಧಮಾಡಿಸಿರಿ. ಅನಂತರ ನೀವು ನೆಮ್ಮದಿಯಿಂದ ಅರಸನ ಜೊತೆ ಔತಣಕ್ಕೆ ಹೋಗಬಹುದು,” ಎಂದು ಸಲಹೆ ನೀಡಿದರು. ಅದು ಅವನಿಗೆ ಸಮರ್ಪಕವಾಗಿ ಕಂಡುಬರಲು ಹಾಮಾನನು ಅದರಂತೆಯೇ ಗಲ್ಲುಮರವನ್ನು ಸಿದ್ಧಮಾಡಿಸಿದನು.


ಮೆಮೂಕನು ನೀಡಿದ ಈ ಸಲಹೆ ಅರಸನಿಗೂ ಪದಾಧಿಕಾರಿಗಳಿಗೂ ಸರಿಕಂಡುಬಂತು. ಅರಸನು ಅದರಂತೆ ಮಾಡಿದನು.


ಈ ಅಭಿಪ್ರಾಯ ಅರಸನಿಗೂ ಸಾರ್ವಜನಿಕರಿಗೂ ಸರಿಕಂಡಿತು.


ಆಗ ಸೌಲನು ಅವರಿಗೆ, “ನೀವು ನನ್ನ ಮೇಲೆ ಕನಿಕರಪಟ್ಟದ್ದರಿಂದ ಸರ್ವೇಶ್ವರನ ಆಶೀರ್ವಾದ ನಿಮ್ಮ ಮೇಲಿರಲಿ!


ಅರಸನೊಬ್ಬನನ್ನೇ ಕೊಂದು ಎಲ್ಲಾ ಜನರನ್ನು ತಿರುಗಿ ನಿಮ್ಮ ಬಳಿಗೆ ಬರಮಾಡುವೆನು. ನಿಮ್ಮ ಅಪೇಕ್ಷೆಯಂತೆ ಎಲ್ಲಾ ಜನರೂ ಹಿಂದಿರುಗಿ ಬಂದ ಮೇಲೆ ನಾಡಿನಲ್ಲಿ ಎಲ್ಲಾ ಸಮಾಧಾನವುಂಟಾಗುವುದು,” ಎಂದು ಹೇಳಿದನು.


ಆಮೇಲೆ ಅಬ್ಷಾಲೋಮನು, “‍ಅರ್ಕೀಯನಾದ ಹೂಷೈಯನ್ನು ಕರೆದು ಅವನ ಅಭಿಪ್ರಾಯವನ್ನೂ ಕೇಳೋಣ,” ಎಂದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು