Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:17 - ಕನ್ನಡ ಸತ್ಯವೇದವು C.L. Bible (BSI)

17 ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡ ಕಲ್ಲುರಾಶಿಯನ್ನು ಮಾಡಿ ಮುಚ್ಚಿದರು. ಇಸ್ರಯೇಲರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡದಾದ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ಬಲುದೊಡ್ಡ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮತಮ್ಮ ನಿವಾಸಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಂತರ ಯೋವಾಬನ ಜನರು ಅಬ್ಷಾಲೋಮನ ದೇಹವನ್ನು ತೆಗೆದುಕೊಂಡು ಹೋಗಿ, ಕಾಡಿನ ಒಂದು ದೊಡ್ಡ ಕುಣಿಯಲ್ಲಿ ಎಸೆದರು. ಅವರು ಆ ದೊಡ್ಡ ಕುಣಿಯನ್ನು ಕಲ್ಲುಗಳಿಂದ ತುಂಬಿಸಿದರು. ಅಬ್ಷಾಲೋಮನನ್ನು ಹಿಂಬಾಲಿಸಿಕೊಂಡು ಬಂದಿದ್ದ ಇಸ್ರೇಲರೆಲ್ಲ ಮನೆಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ಅಬ್ಷಾಲೋಮನನ್ನು ತೆಗೆದುಕೊಂಡು, ಅಡವಿಯಲ್ಲಿರುವ ಒಂದು ದೊಡ್ಡ ಗುಂಡಿಯಲ್ಲಿ ಹಾಕಿ, ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆದರೆ ಇಸ್ರಾಯೇಲರೆಲ್ಲರೂ ತಮ್ಮ ಗುಡಾರಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:17
15 ತಿಳಿವುಗಳ ಹೋಲಿಕೆ  

ಆಯಿಯ ಅರಸನನ್ನು ಸಂಜೆಯವರೆಗೂ ಮರಕ್ಕೆ ನೇತುಹಾಕಿಸಿದನು. ಸೂರ್ಯನು ಅಸ್ತಮಿಸುತ್ತಲೆ ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಿನಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.


ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ಗುಡ್ಡೆಯನ್ನು ಹಾಕಿದರು. ಅದು ಇಂದಿನವರೆಗೂ ಇದೆ. ಬಳಿಕ ಸರ್ವೇಶ್ವರನ ಕೋಪಾಗ್ನಿ ತಣ್ಣಗಾಯಿತು. ಈ ಘಟನೆಯಿಂದಾಗಿ ಆ ಸ್ಥಳಕ್ಕೆ ‘ಆಕೋರಿನ ಕಣಿವೆ’ ಎಂಬ ಹೆಸರು ಬಂದಿತು.


ಸಜ್ಜನರ ಸ್ಮರಣೆ ಮಂಗಳಕರ; ದುರ್ಜನರ ಹೆಸರು ಅಸಹ್ಯಕರ.


ಅವರು ಬಿಕ್ರೀಯ ಮಗ ಶೆಬನ ತಲೆಯನ್ನು ಕಡಿದು ಯೋವಾಬನಿದ್ದಲ್ಲಿಗೆ ಬಿಸಾಡಿದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಅವನ ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಜೆರುಸಲೇಮಿನಲ್ಲಿದ್ದ ಅರಸನ ಬಳಿಗೆ ಬಂದನು.


ಬೆನ್ಯಾಮೀನ್ ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ನೀಚ ವ್ಯಕ್ತಿ ಅಲ್ಲಿಗೆ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಯೇಲರೇ, ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ. ಜೆಸ್ಸೆಯನ ಮಗನಲ್ಲಿ ನಮಗೆ ಹಕ್ಕುಭಾದ್ಯತೆಯಿಲ್ಲ. ಪ್ರತಿ ಒಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ತೆರಳೋಣ,” ಎಂದನು.


ಆಗ ಅರಸನು ಎದ್ದು ಬಂದು ಊರುಬಾಗಿಲಲ್ಲಿ ಕುಳಿತುಕೊಂಡನು. “ಇಗೋ, ಅರಸರು ಊರುಬಾಗಿಲಲ್ಲಿ ಕುಳಿತುಕೊಂಡಿದ್ದಾರೆ,” ಎಂಬ ಸುದ್ದಿ ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಬಂದು ಅವನ ಸುತ್ತಲೂ ನೆರೆದರು.


ಸೂರ್ಯಾಸ್ತಮಾನದ ಹೊತ್ತಿಗೆ ಜನರು ಯೆಹೋಶುವನ ಅಪ್ಪಣೆಯಂತೆ ಅವುಗಳನ್ನು ಮರಗಳಿಂದ ಕೆಳಗಿಳಿಸಿ ಅವರು ಅಡಗಿಕೊಂಡಿದ್ದ ಗವಿಯಲ್ಲೇ ಹಾಕಿ ಅದರ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿದರು. ಆ ಕಲ್ಲುಗಳು ಇಂದಿನವರೆಗೂ ಅಲ್ಲೇ ಇವೆ.


ಅಲ್ಲಿ ಅವರಿಗೆ, ‘ಈ ನಮ್ಮ ಮಗ ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ,ತುಂಟ’ ಎಂದು ಸಾಕ್ಷಿ ಹೇಳಬೇಕು.


ಅಗ ಊರಿನವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದು ಹಾಕಿಬಿಡಬೇಕು. ಇಸ್ರಯೇಲರೆಲ್ಲರು ಕೇಳಿ ಭಯಪಡುವರು.


ಇಸ್ರಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.


ಆಗ ಯೆಹೋರಾಮನು ತನ್ನ ಎಲ್ಲಾ ರಥಬಲಸಹಿತವಾಗಿ ಜೋರ್ಡನ್ ಹೊಳೆಯನ್ನು ದಾಟಿ ಚಾಯೀರಿಗೆ ಹೋದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಂಡರು. ಅವನು ರಾತ್ರಿಯಲ್ಲೆದ್ದು ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು. ಅವನ ಸೈನ್ಯದವರೂ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.


ಯೆಹೂದ್ಯರು ಇಸ್ರಯೇಲರಿಂದ ಸೋಲು ಸವಿದು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.


ಯೋವಾಬನು ಅರಸನ ಬಳಿಗೆ ಹೋಗಿ, “ನಿಮ್ಮನ್ನೂ ನಿಮ್ಮ ಗಂಡುಹೆಣ್ಣು ಮಕ್ಕಳನ್ನೂ ಹೆಂಡತಿಯರನ್ನೂ ಉಪಪತ್ನಿಯರನ್ನೂ ರಕ್ಷಿಸಿದಂಥ ನಿಮ್ಮ ಸೇವಕರನ್ನು ಈ ದಿನ ಅಪಮಾನಪಡಿಸಿದಿರಿ.


ಇಸ್ರಯೇಲರೆಲ್ಲರು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋಗಿದ್ದರು. ಇಸ್ರಯೇಲ್ ಕುಲಗಳ ಜನರೆಲ್ಲರು, “ಅರಸ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಯಿಂದಲೂ ಬೇರೆ ಎಲ್ಲಾ ವೈರಿಗಳ ಕೈಯಿಂದಲೂ ತಪ್ಪಿಸಿ ಕಾಪಾಡಿದ. ಆದರೆ ಅಬ್ಷಾಲೋಮನ ಕಾರಣ ನಾಡನ್ನೇ ಬಿಟ್ಟು ಓಡಿಹೋಗುವಂತೆ ಮಾಡಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು