Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:29 - ಕನ್ನಡ ಸತ್ಯವೇದವು C.L. Bible (BSI)

29 ಆಗ ಅರಸನು, “ಆ ಯುವಕ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆ.ಆದರೆ ಸಂಗತಿಯೇನೆಂಬುದು ನನಗೆ ಗೊತ್ತಾಗಲಿಲ್ಲ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತವಾಗಿದ್ದಾನೋ” ಎಂದು ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆನು, ಆದರೆ ಸಂಗತಿ ಏನೆಂಬುದು ನನಗೆ ಗೊತ್ತಾಗಲಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ಅರಸನು ಅವನನ್ನು - ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ ಎಂದು ಕೇಳಿದನು. ಅದಕ್ಕೆ ಅಹೀಮಾಚನು ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆನು. ಆದರೆ ಸಂಗತಿಯೇನೆಂಬದು ನನಗೆ ಗೊತ್ತಾಗಲಿಲ್ಲ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ರಾಜನು, “ಯುವಕನಾದ ಅಬ್ಷಾಲೋಮನು ಕ್ಷೇಮವಾಗಿರುವನೇ?” ಎಂದು ಕೇಳಿದನು. ಅಹೀಮಾಚನು, “ಯೋವಾಬನು ನನ್ನನ್ನು ಕಳುಹಿಸಿದಾಗ, ನಾನು ಒಂದು ದೊಡ್ಡ ಕೋಲಾಹಲವನ್ನು ನೋಡಿದೆನು. ಆದರೆ ಅದು ಏನೆಂದು ನನಗೆ ಗೊತ್ತಿಲ್ಲ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅರಸನು, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು ಉತ್ತರವಾಗಿ, “ಯೋವಾಬನು ಅರಸನ ಸೇವಕನನ್ನೂ, ನಿನ್ನ ಸೇವಕನಾದ ನನ್ನನ್ನೂ ಕಳುಹಿಸಿದಾಗ ದೊಡ್ಡ ಗೊಂದಲವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:29
6 ತಿಳಿವುಗಳ ಹೋಲಿಕೆ  

ಚಾದೋಕನ ಮಗ ಅಹೀಮಾಚನು ಪುನಃ ಯೋವಾಬನಿಗೆ, “ಆಗುವುದಾಗಲಿ, ದಯವಿಟ್ಟು ಆ ಕೂಷ್ಯನ ಹಿಂದೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡಿ,” ಎಂದು ಬೇಡಿಕೊಂಡನು. ಅದಕ್ಕೆ ಯೋವಾಬನು, “ಮಗೂ, ಏಕೆ ಹೋಗಬೇಕೆನ್ನುತ್ತಿ? ಅದಕ್ಕಾಗಿ ನಿನಗೆ ಬಹುಮಾನವೇನೂ ಸಿಕ್ಕುವುದಿಲ್ಲ,” ಎಂದನು.


ಅವನು ಅಮಾಸನನ್ನು, “ಸಹೋದರಾ, ಕ್ಷೇಮವೇ?” ಎಂದು ಕೇಳಿ ಮುದ್ದಿಡುವುದಕ್ಕೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು, ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯನ್ನು ಇರಿದನು.


ಆಗ ಅರಸನು, “ನೀನು ಇತ್ತ ನಿಲ್ಲು,” ಎಂದು ಆಜ್ಞಾಪಿಸಿದನು.; ಅವನು ಅಂತೆಯೇ ನಿಂತನು.


ಅರಸನು ಅವನನ್ನು, “ಆ ಯುವಕ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೆಯೋ?’ ಎಂದು ಕೇಳಿದನು. ಅವನು, “ನನ್ನ ಒಡೆಯರಾದ ಅರಸರ ಶತ್ರುಗಳಿಗೂ, ಅವರಿಗೆ ಕೇಡು ಮಾಡುವುದಕ್ಕೆ ನಿಂತವರೆಲ್ಲರಿಗೂ ಆ ಯುವಕನಿಗಾದ ಗತಿಯೇ ಆಗಲಿ!” ಎಂದು ಉತ್ತರಕೊಟ್ಟನು.


“ಅಗೋ, ಅಲ್ಲಿ ಶೂನೇಮ್ಯಳು; ನೀನು ಓಡಿಹೋಗಿ ಆಕೆಯನ್ನು ಭೇಟಿಯಾಗು; ‘ನಿನಗೂ ನಿನ್ನ ಗಂಡನಿಗೂ ಮಗನಿಗೂ ಕ್ಷೇಮವೇ?’ ಎಂದು ವಿಚಾರಿಸು,” ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು. ಆಕೆ ಆ ಸೇವಕನಿಗೆ, “ಕ್ಷೇಮ,” ಎಂದು ಉತ್ತರಕೊಟ್ಟು, ಬೆಟ್ಟದ ಮೇಲಿದ್ದ ದೈವಪುರುಷನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು