Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ಸೈನಿಕರು, “ನೀವು ಬರಬಾರದು; ನಾವು ಸೋತು ಓಡಿಹೋದರೆ ಶತ್ರುಗಳು ಲಕ್ಷಿಸುವುದಿಲ್ಲ; ನಮ್ಮಲ್ಲಿ ಅರ್ಧಜನ ಸತ್ತರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರ ಬೆಲೆ ನಿಮ್ಮೊಬ್ಬರಿಗೇ ಉಂಟು. ತಾವು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಸೈನ್ಯದವರು ಅವನಿಗೆ, “ನೀನು ಬರಬಾರದು. ನಾವು ಸೋತು ಓಡಿಹೋದರೆ ಶತ್ರುಗಳು ಅದನ್ನು ಗಮನಿಸುವುದಿಲ್ಲ. ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರಿಗಿರುವ ಬೆಲೆ ನಿನ್ನೊಬ್ಬನಿಗೆ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಸೈನ್ಯದವರು ಅವನಿಗೆ - ನೀನು ಬರಬಾರದು; ನಾವು ಸೋತು ಓಡಿ ಹೋದರೆ ಶತ್ರುಗಳು ಲಕ್ಷಿಸುವದಿಲ್ಲ; ನಮ್ಮಲ್ಲಿ ಅರ್ಧ ಜನರು ಸತ್ತರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರ ಬೆಲೆ ನಿನ್ನೊಬ್ಬನಿಗೇ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಅವರು, “ಬೇಡ, ನೀನು ನಮ್ಮ ಜೊತೆ ಬರುವುದು ಬೇಡ. ಏಕೆಂದರೆ ನಾವು ಯುದ್ಧರಂಗದಿಂದ ಓಡಿಹೋಗಿಬಿಟ್ಟರೆ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ನಮ್ಮಲ್ಲಿ ಅರ್ಧದಷ್ಟು ಜನರು ಸತ್ತರೂ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ಆದರೆ ನೀನು ನಮ್ಮ ಹತ್ತು ಸಾವಿರ ಜನರಷ್ಟು ಬೆಲೆಯುಳ್ಳವನಾಗಿರುವೆ! ನೀನು ನಗರದಲ್ಲಿರುವುದೇ ಉತ್ತಮ. ಅಲ್ಲಿಂದಲೇ ನೀನು ನಮಗೆ ಸಹಾಯ ಮಾಡಬಹುದು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಸೈನಿಕರು ಅವನಿಗೆ, “ನೀನು ನಮ್ಮ ಸಂಗಡ ಬರಬೇಡ. ಏಕೆಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವುದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸಮನಾಗಿದ್ದೀ. ಈಗ ನೀನು ಊರಿನಲ್ಲಿದ್ದು, ನಮಗೆ ಸಹಾಯವಾಗಿರುವುದೇ ಉತ್ತಮ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:3
8 ತಿಳಿವುಗಳ ಹೋಲಿಕೆ  

ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಯೇಲರ ಆಶಾಜ್ಯೋತಿ ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು,” ಎಂದು ಖಂಡಿತವಾಗಿ ಹೇಳಿದರು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಯಾವನನ್ನು ಕುರಿತು ನಾವು: “ನಮ್ಮ ಬಾಳಿನ ಉಸಿರು, ದೇವರಿಂದ ಅಭಿಷಿಕ್ತನು, ಇವನ ಆಶ್ರಯದಿಂದಲೆ ರಾಷ್ಟ್ರಗಳ ನಡುವೆ ನಮಗೆ ಉಳಿವು” ಎಂದುಕೊಂಡೆವೋ ಅಂಥವನೇ ಸಿಕ್ಕಿಬಿದ್ದಿದ್ದಾನೆ ಹಗೆಗಳು ತೋಡಿದ ಗುಳಿಯೊಳಗೆ!


ಸಿರಿಯಾದವರ ಅರಸನು ತನ್ನ ರಥಬಲದ ಮೂವತ್ತೆರಡು ಮಂದಿ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಯೇಲರ ಅರಸನಿಗೇ ಗುರಿ ಇಡಿ,” ಎಂದು ಆಜ್ಞಾಪಿಸಿದ್ದನು.


ಅವನು ದಣಿದವನೂ ಧೈರ್ಯಗುಂದಿದವನೂ ಆಗಿರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು; ಅವನ ಜನರೆಲ್ಲರೂ ಓಡಿಹೋಗುವರು.


“ಸಿರಿಯಾದವರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ; ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುತ್ತೇನೆ.


ಅವರು: ಸೌಲನು ಕೊಂದನು ಸಾವಿರಗಟ್ಟಳೆ ದಾವೀದನೋ ಕೊಂದನು ಹತ್ತುಸಾವಿರಗಟ್ಟಳೆ,” ಎಂದು ಪರಸ್ಪರ ಹಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು