Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:7 - ಕನ್ನಡ ಸತ್ಯವೇದವು C.L. Bible (BSI)

7 ಇಸ್ರಯೇಲರು ದಾವೀದನ ಸೈನಿಕರಿಂದ ಪೂರ್ಣವಾಗಿ ಪರಾಭವಗೊಂಡರು. ಆ ದಿನ ಇಪ್ಪತ್ತು ಸಾವಿರ ಜನರು ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಸ್ರಾಯೇಲರು ದಾವೀದನ ಸೈನಿಕರಿಂದ ಪೂರ್ಣವಾಗಿ ಸೋಲಿಸಲ್ಪಟ್ಟರು. ಆ ದಿನ ಇಪ್ಪತ್ತು ಸಾವಿರ ಜನರು ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ಯರು ದಾವೀದನ ಸೈನಿಕರಿಂದ ಪೂರ್ಣವಾಗಿ ಸೋಲಿಸಲ್ಪಟ್ಟರು. ಆ ದಿವಸ ಇಪ್ಪತ್ತುಸಾವಿರ ಜನರು ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದಾವೀದನ ಸೈನ್ಯವು ಇಸ್ರೇಲರನ್ನು ಸೋಲಿಸಿತು. ಅಂದು ಇಪ್ಪತ್ತು ಸಾವಿರ ಜನರು ಕೊಲ್ಲಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅಲ್ಲಿ ಇಸ್ರಾಯೇಲರು ದಾವೀದನ ಸೇವಕರ ಮುಂದೆ ಸಂಹಾರವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:7
12 ತಿಳಿವುಗಳ ಹೋಲಿಕೆ  

ಮಗನೇ, ಸರ್ವೇಶ್ವರನಿಗೂ ರಾಜನಿಗೂ ಭಯಪಡು; ಅವರನ್ನು ವಿರೋಧಿಸುವವರ ಗೊಡವೆಗೆ ಹೋಗಬೇಡ.


ದುಷ್ಟನಿಗೆ ದಂಡನೆ ಕಟ್ಟಿಟ್ಟ ಬುತ್ತಿ; ಶಿಷ್ಟ ಸಂತಾನಕ್ಕೆ ಸಿಗುವುದು ಮುಕ್ತಿ.


ರೆಮಲ್ಯನ ಮಗ ಪೆಕಹ ಎಂಬವನು ಒಂದೇ ದಿವಸ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರು ರಣವೀರರು. ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಬಿಟ್ಟದ್ದೇ ಇದಕ್ಕೆ ಕಾರಣವಾಗಿತ್ತು.


ಅರಸನ ಬಳಿಗೆ ನ್ಯಾಯನಿರ್ಣಯಕ್ಕಾಗಿ ಬರುತ್ತಿದ್ದ ಎಲ್ಲಾ ಇಸ್ರಯೇಲರಿಗೆ ಅಬ್ಷಾಲೋಮನು ಹೀಗೆಯೇ ಮಾಡಿ ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ಒಲಿಸಿಕೊಳ್ಳುತ್ತಿದ್ದನು.


ಆದರೆ ದಾವೀದನ ಯೋಧರು ಅಬ್ನೇರನ ಜನರಾದ ಬೆನ್ಯಾಮೀನ್ಯರಲ್ಲಿ ಮುನ್ನೂರರ್ವತ್ತು ಮಂದಿಯನ್ನು ಕೊಂದಿದ್ದರು.


ಆಗ ಅಬ್ನೇರನು ಯೋವಾಬನನ್ನು ನೋಡಿ, “ಕತ್ತಿ ಯಾವಾಗಲೂ ತಿನ್ನುತ್ತಲೇ ಇರಬೇಕೇ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೇ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವೆ?” ಎಂದನು.


ಅನಂತರ ಆ ದಿವಸ ಘೋರಯುದ್ಧ ನಡೆಯಿತು. ಅಬ್ನೇರನನ್ನೂ ಇಸ್ರಯೇಲರನ್ನೂ ದಾವೀದನ ಸೇವಕರು ಸೋಲಿಸಿದರು.


ಅನಂತರ ಸೈನಿಕರು ಇಸ್ರಯೇಲರಿಗೆ ವಿರೋಧವಾಗಿ ಹೊರಟು ಬಯಲಿಗೆ ಬಂದರು. ಎಫ್ರಯಿಮ್ ಕಾಡಿನಲ್ಲಿ ಯುದ್ಧನಡೆಯಿತು.


ಯುದ್ಧವು ಸುತ್ತಣ ಪ್ರದೇಶಗಳಿಗೆ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಸತ್ತವರಿಗಿಂತ, ಮರುಳುಗಾಡಿನಲ್ಲಿ ಸತ್ತವರ ಸಂಖ್ಯೆಯೇ ಹೆಚ್ಚಾಗಿತ್ತು.


ನೀನೇ ಅರಸುಗಳಿಗೆ ಜಯಪ್ರದನು I ದಾಸ ದಾವೀದನನು ಬಿಡಿಸಿದವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು