Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:10 - ಕನ್ನಡ ಸತ್ಯವೇದವು C.L. Bible (BSI)

10 ಆದರೆ ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತ. ಹೀಗಿರುವಲ್ಲಿ ಅರಸ ದಾವೀದನನ್ನು ಮರಳಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ಹೀಗಿರುವಲ್ಲಿ ಅರಸನಾದ ದಾವೀದನನ್ನು ತಿರುಗಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ಹೀಗಿರುವಲ್ಲಿ ಅರಸನಾದ ದಾವೀದನನ್ನು ತಿರಿಗಿ ಕರಕೊಂಡು ಬರಬಾರದೇ? ಸುಮ್ಮನೆ ಕೂತಿರುವದೇಕೆ ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾವು ನಮ್ಮನ್ನು ಆಳಲು ಅಬ್ಷಾಲೋಮನನ್ನು ಆರಿಸಿಕೊಂಡೆವು. ಆದರೆ ಅವನೀಗ ಯುದ್ಧದಲ್ಲಿ ಸತ್ತಿದ್ದಾನೆ. ದಾವೀದನನ್ನು ನಾವು ಮತ್ತೆ ರಾಜನನ್ನಾಗಿ ಮಾಡೋಣ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಮ್ಮನ್ನು ಆಳಲು ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರುಗಿ ಕರೆದುಕೊಂಡು ಬಾರದೆ, ಸುಮ್ಮನೆ ಇರುವುದು ಏಕೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:10
9 ತಿಳಿವುಗಳ ಹೋಲಿಕೆ  

“ಅವರು ನನ್ನ ಅನುಮತಿ ಇಲ್ಲದೆ ಅರಸರನ್ನು ನೇಮಿಸಿಕೊಂಡಿದ್ದಾರೆ. ನನಗೆ ತಿಳಿಯದಂತೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ಬೆಳ್ಳಿಬಂಗಾರದ ವಿಗ್ರಹಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಮಾಡಿರುವುದೆಲ್ಲ ಅವರ ನಾಶಕ್ಕಾಗಿಯೇ.


ಆಗ ಯೋವಾಬನು, “ಇಲ್ಲಿ ನಿಂತು ನಿನ್ನೊಡನೆ ಸಮಯ ಕಳೆಯಲಾರೆ,” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು.


ಅವರು, “ಏಳಿ, ಅವರಿಗೆ ವಿರುದ್ಧ ಯುದ್ಧಕ್ಕೆ ಹೋಗೋಣ. ನಾವು ಆ ದೇಶವನ್ನು ನೋಡಿದೆವು; ಅದು ಬಹು ಉತ್ತಮ ದೇಶ. ನೀವು ಸುಮ್ಮನೆ ಕುಳಿತುಕೊಳ್ಳುವುದೇಕೆ? ತಡಮಾಡದೆ ಹೊರಡಿ; ಆ ದೇಶವನ್ನು ನಮ್ಮದಾಗಿಸಿಕೊಳ್ಳೋಣ.


ಇಸ್ರಯೇಲರೆಲ್ಲರು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋಗಿದ್ದರು. ಇಸ್ರಯೇಲ್ ಕುಲಗಳ ಜನರೆಲ್ಲರು, “ಅರಸ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಯಿಂದಲೂ ಬೇರೆ ಎಲ್ಲಾ ವೈರಿಗಳ ಕೈಯಿಂದಲೂ ತಪ್ಪಿಸಿ ಕಾಪಾಡಿದ. ಆದರೆ ಅಬ್ಷಾಲೋಮನ ಕಾರಣ ನಾಡನ್ನೇ ಬಿಟ್ಟು ಓಡಿಹೋಗುವಂತೆ ಮಾಡಿದ.


ಇಸ್ರಯೇಲರು ಹೀಗೆ ಮಾತಾಡಿಕೊಂಡ ಸಮಾಚಾರ ದಾವೀದನಿಗೆ ಮುಟ್ಟಿತು. ಅವನು ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರಿಗೆ, “ನೀವು ನನ್ನ ಹೆಸರಿನಲ್ಲಿ ಯೆಹೂದಕುಲದ ಹಿರಿಯರಿಗೆ, ‘ಅರಸನಾದ ನನ್ನನ್ನು ಮತ್ತೆ ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ನೀವೇಕೆ ಹಿಂದುಳಿದಿರುವಿರಿ?


ಅರಸನು ಕಿಮ್ಹಾಮನೊಡನೆ ಗಿಲ್ಗಾಲಿಗೆ ತೆರಳಿದನು. ಎಲ್ಲ ಯೆಹೂದ್ಯರು ಹಾಗು ಇಸ್ರಯೇಲರಲ್ಲಿ ಅರ್ಧಜನರು ಅರಸನನ್ನು ಕರೆದುಕೊಂಡು ಹೋದರು.


ಆಗ ಅವನು ಜೆರುಸಲೇಮಿನಲ್ಲಿದ್ದ ತನ್ನ ಸೇವಕರಿಗೆ, “ಏಳಿ, ಓಡಿಹೋಗೋಣ; ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ; ಅವನು ಅಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು ನಮಗೆ ದುರ್ಗತಿಯನ್ನುಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸಾನು,” ಎಂದು ಹೇಳಿದನು.


ಆಗ ಅರಸನು ಮನೆಕಾಯುವುದಕ್ಕಾಗಿ ಹತ್ತುಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು