Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:20 - ಕನ್ನಡ ಸತ್ಯವೇದವು C.L. Bible (BSI)

20 ಒಡೆಯರೇ, ತಮ್ಮ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದುದರಿಂದಲೇ ನಾನು ಈ ದಿನ ಅರಸನನ್ನು ಸ್ವಾಗತಿಸುವುದಕ್ಕೆ ಎಲ್ಲಾ ಜೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಒಡೆಯನೇ, ನಿನ್ನ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದ್ದರಿಂದಲೆ ನಾನು ಈ ಹೊತ್ತು ಅರಸನನ್ನು ಎದುರುಗೊಳ್ಳುವುದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಒಡೆಯನೇ, ನಿನ್ನ ಸೇವಕನಾದ ನಾನು ಪಾಪ ಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದದರಿಂದಲೇ ನಾನು ಈಹೊತ್ತು ಅರಸನನ್ನು ಎದುರುಗೊಳ್ಳುವದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಾಗಿ ಬಂದಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ಪಾಪಮಾಡಿದ್ದೇನೆಂದು ಒಪ್ಪಿಕೊಳ್ಳುತ್ತೇನೆ. ಆದ ಕಾರಣವೇ, ನನ್ನ ರಾಜನಾದ ಒಡೆಯನೇ, ನಿನ್ನನ್ನು ಭೇಟಿಮಾಡಲು ಬಂದ ಯೋಸೇಫ್ಯರ ಕುಲದಲ್ಲಿ ನಾನೇ ಮೊದಲಿಗನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಏಕೆಂದರೆ ಪಾಪ ಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದ್ದರಿಂದ ಇಗೋ, ನಾನು ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫ್ಯರಲ್ಲಿ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:20
12 ತಿಳಿವುಗಳ ಹೋಲಿಕೆ  

“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ಎಫ್ರಯಿಮನ್ನು ಬಲ್ಲೆನು; ಇಸ್ರಯೇಲ್ ನನಗೆ ಕಣ್ಮರೆಯಾಗಿಲ್ಲ. ಎಫ್ರಯಿಮ್, ನೀನು ವ್ಯಭಿಚಾರಿಣಿಯಾಗಿರುವೆ. ಇಸ್ರಯೇಲ್, ನೀನು ಹೊಲಸಾಗಿರುವೆ.”


‘ಲೆಬನೋನ್’ ಅರಮನೆಯಲ್ಲಿ ವಾಸಿಸುವವಳೇ, ದೇವದಾರುಗಳ ನಡುವೆ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂಥ ಸಂಕಟಗಳು ಸಂಭವಿಸಿದಾಗ ನಿನಗೊದಗುವ ಪರಿಸ್ಥಿತಿ ಎಷ್ಟೋ ದುಃಖಕರ !


ಯಾರೊಬ್ಬಾಮನು ಎಫ್ರಯಿಮ್ ಮಲೆನಾಡಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.


ಯಾರೊಬ್ಬಾಮನು ಹಿಂದಿರುಗಿ ಬಂದು ಇದ್ದಾನೆಂಬ ಸಮಾಚಾರ ಇಸ್ರಯೇಲರಿಗೆ ಗೊತ್ತಾದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.


ಇಸ್ರಯೇಲರೆಲ್ಲರು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋಗಿದ್ದರು. ಇಸ್ರಯೇಲ್ ಕುಲಗಳ ಜನರೆಲ್ಲರು, “ಅರಸ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಯಿಂದಲೂ ಬೇರೆ ಎಲ್ಲಾ ವೈರಿಗಳ ಕೈಯಿಂದಲೂ ತಪ್ಪಿಸಿ ಕಾಪಾಡಿದ. ಆದರೆ ಅಬ್ಷಾಲೋಮನ ಕಾರಣ ನಾಡನ್ನೇ ಬಿಟ್ಟು ಓಡಿಹೋಗುವಂತೆ ಮಾಡಿದ.


ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ ಗೇರನ ಮಗನೂ ಆದ ಶಿಮ್ಮೀ ಎಂಬವನು ದಾವೀದನನ್ನು ಶಪಿಸುತ್ತಾ ಆ ಊರಿನಿಂದ ಹೊರಗೆ ಬಂದನು.


ಆ ದಿನ ಅವರನ್ನು ಆಶೀರ್ವದಿಸುತ್ತಾ ಹೀಗೆಂದನು: "ಎಫ್ರಯಿಮ್ - ಮನಸ್ಸೆಯಂತೆ ನಿಮ್ಮನ್ನೂ ಅಭಿವೃದ್ಧಿಗೊಳಿಸಲಿ ದೇವರು! ಹೀಗೆ ನಿಮ್ಮ ಹೆಸರನ್ನು ಉಚ್ಚರಿಸುತ್ತಾ ಇತರರನ್ನು ಆಶೀರ್ವದಿಸುವರು ಇಸ್ರಯೇಲರು". ಈ ರೀತಿಯಾಗಿ ಅವನು ಎಫ್ರಯಿಮನನ್ನು ಮನಸ್ಸೆಗಿಂತ ಮುಂದಿಟ್ಟನು.


ಮನಸ್ಸೆಯು ಜೇಷ್ಠಮಗನಾಗಿದ್ದರೂ ಯಕೋಬನು ತನ್ನ ಕೈಗಳನ್ನು ಅಡ್ಡಡ್ಡವಾಗಿ ಚಾಚಿ ಕಿರಿಯವನಾದ ಎಫ್ರಯಿಮನ ತಲೆಯ ಮೇಲೆ ಬಲಗೈಯನ್ನು, ಮನಸ್ಸೆಯ ತಲೆಯ ಮೇಲೆ ಎಡಗೈಯನ್ನು ಇಟ್ಟು,


ಚೆರೂಯಳ ಮಗ ಅಬೀಷೈಯು, “ಸರ್ವೇಶ್ವರನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ?’ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು