Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:27 - ಕನ್ನಡ ಸತ್ಯವೇದವು C.L. Bible (BSI)

27 ಅವನು ಹಾಗೆ ಮಾಡದೆ ನನ್ನ ಒಡೆಯರಾದ ಅರಸರ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದ. ಅರಸರು ದೇವದೂತನ ಹಾಗಿರುತ್ತೀರಿ. ತಮಗೆ ಸರಿಕಂಡದ್ದನ್ನು ಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನು ಹಾಗೆ ಮಾಡದೆ ನನ್ನ ಒಡೆಯನಾದ ಅರಸನ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದನು. ಅರಸನು ದೇವದೂತನ ಹಾಗಿರುತ್ತಾನೆ. ತನಗೆ ಸರಿಕಂಡದ್ದನ್ನು ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನು ಹಾಗೆ ಮಾಡದೆ ನನ್ನ ಒಡೆಯನಾದ ಅರಸನ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದನು. ಅರಸನು ದೇವದೂತನ ಹಾಗಿರುತ್ತಾನೆ, ತನಗೆ ಸರಿಕಂಡದ್ದನ್ನು ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ನನ್ನ ಸೇವಕನು ನನ್ನನ್ನು ಮೋಸಗೊಳಿಸಿದನು. ಅವನು ನನ್ನ ಬಗ್ಗೆ ನಿನಗೆ ಕೆಟ್ಟದ್ದನ್ನು ಹೇಳಿದನು. ಆದರೆ ರಾಜನಾದ ನನ್ನ ಒಡೆಯನು ದೇವದೂತನಂತಿದ್ದಾನೆ. ನಿನಗೆ ಒಳ್ಳೆಯದೆಂದು ತೋರಿದ್ದನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ. ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:27
12 ತಿಳಿವುಗಳ ಹೋಲಿಕೆ  

ಅಬ್ಷಾಲೋಮನ ವಿಷಯವನ್ನು ರೂಪಾಂತರ ಪಡಿಸುವುದಕ್ಕಾಗಿ ನಿಮ್ಮ ಸೇವಕನಾದ ಯೋವಾಬನೇ ಇದನ್ನು ಮಾಡಿದನು. ನನ್ನ ಒಡೆಯರು ದೇವದೂತನಂಥ ಜ್ಞಾನಿ; ಅವರು ಭೂಲೋಕದಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುತ್ತಾರೆ!” ಎಂದು ಉತ್ತರಕೊಟ್ಟಳು.


ನನ್ನ ಒಡೆಯರಾದ ಅರಸರ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿಮ್ಮ ದಾಸಿಯಾದ ನಾನು ಬಂದೆ. ನ್ಯಾಯ ಅನ್ಯಾಯಗಳನ್ನು ಕಂಡು ಹಿಡಿಯುವುದರಲ್ಲಿ ನನ್ನ ಒಡೆಯರಾದ ಅರಸರು ದೇವದೂತನಂತೆ ಇರುತ್ತೀರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇರಲಿ!” ಎಂದಳು.


ಅರಸನು ಮತ್ತೆ, “ನಿನ್ನ ಯಜಮಾನನ ಮಗ ಎಲ್ಲಿದ್ದಾನೆ?” ಎಂದು ಕೇಳಲು ಅವನು, “ತನ್ನ ತಂದೆಯ ರಾಜ್ಯವನ್ನು ಇಸ್ರಯೇಲರು ಈ ದಿನ ತನಗೆ ಮರಳಿಕೊಡುವರೆಂದು ಹೇಳಿ ಅವನು ಜೆರುಸಲೇಮಿನಲ್ಲೇ ಉಳಿದುಕೊಂಡನು,” ಎಂದನು.


ಆಗ ಆಕೀಷನು ದಾವೀದನಿಗೆ, “ನೀನು ಒಳ್ಳೆಯವನೆಂದು ನನಗೆ ಗೊತ್ತಿದೆ; ನನ್ನ ದೃಷ್ಟಿಯಲ್ಲಿ ನೀನು ದೇವದೂತನಂತಿರುವೆ; ಆದರೆ ಫಿಲಿಷ್ಟಿಯದ ರಾಜರುಗಳು, ‘ಇವನು ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೊರಡಬಾರದು’ ಎಂದು ಹೇಳುತ್ತಾರೆ;


ನಿಮ್ಮ ನಿಮ್ಮ ಗೆಳೆಯರ ವಿಷಯದಲ್ಲಿ ಎಚ್ಚರಿಕೆಯಾಗಿರಿ ಯಾರೇ ಆಗಲಿ, ತನ್ನ ಸಹೋದರನನ್ನೂ ನಂಬದಿರಲಿ. ಪ್ರತಿಯೊಬ್ಬ ಸೋದರನೂ ವಂಚಿಸುವುದರಲ್ಲಿ ಯಕೋಬನಿಗೆ ಸಮಾನ. ಒಬ್ಬೊಬ್ಬ ಗೆಳೆಯನೂ ತಿರುಗಾಡುತ್ತಾನೆ ಚಾಡಿಹೇಳುತ್ತಾ.


ಸಂಹರಿಸುವೆನು ನೆರೆಯವನ ಮೇಲೆ ಅಪವಾದ ಹೊರಿಸುವವನನು I ಸಹಿಸಲಾರೆ ಸೊಕ್ಕಿದಕಣ್ಣು, ಕೊಬ್ಬಿದ ಮನ ಉಳ್ಳಂಥವನನು II


ಚಾಡಿಯನು ಹೇಳನು, ಕೇಡನು ಮಾಡನನ್ಯರಿಗೆ I ಗುರಿಮಾಡನವನು ನೆರೆಹೊರೆಯವರನು ನಿಂದೆಗೆ II


ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳಬೇಡ.


ಆಗ ಅರಸನು, “ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ,” ಎಂದು ಹೇಳಿದನು. ಅವನು, “ಅರಸರೇ, ನಿಮಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ; ನನ್ನ ಒಡೆಯರೇ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ!” ಎಂದನು.


ಅವನ ಜೊತೆಯಲ್ಲಿ ಸಾವಿರ ಮಂದಿ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ ಇಪ್ಪತ್ತು ಮಂದಿ ಸೇವಕರನ್ನೂ ಕರೆದುಕೊಂಡು ಬಂದನು;


ಆಗ ಅರಸನು, “ಸೌಲನ ಕುಟುಂಬದವರಲ್ಲಿ ಯಾರಾದರೂ ಉಳಿದಿದ್ದರೆ ಹೇಳು; ನಾನು ದೇವರನ್ನು ನೆನಸಿ ಅವರಿಗೆ ದಯೆ ತೋರಿಸುತ್ತೇನೆ,” ಎಂದನು. ಆಗ ಚೀಬನು, “ಯೋನಾತಾನನಿಗೆ, ಎರಡು ಕಾಲೂ ಕುಂಟಾದ ಒಬ್ಬ ಮಗನಿರುತ್ತಾನೆ,” ಎಂದು ಹೇಳಿದನು.


ಮೆಫೀಬೋಶೆತನಿಗೆ ಪ್ರತಿದಿನವೂ ರಾಜಪಂಕ್ತಿಯಲ್ಲಿ ಊಟವಾಗುತ್ತಿದ್ದುದರಿಂದ ಅವನು ಜೆರುಸಲೇಮಿನಲ್ಲೇ ವಾಸಿಸಿದನು. ಅವನ ಎರಡು ಕಾಲುಗಳೂ ಕುಂಟಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು