Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:41 - ಕನ್ನಡ ಸತ್ಯವೇದವು C.L. Bible (BSI)

41 ಆಗ ಇಸ್ರಯೇಲರೆಲ್ಲರು ಅರಸನ ಮುಂದೆ ಬಂದು, “ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೇ ಹೋಗಿ ಅರಸರನ್ನೂ ಅವರ ಮನೆಯವರನ್ನೂ ಅವರೊಡನೆ ಇದ್ದ ಜನರನ್ನೂ ಜೋರ್ಡನ್ ನದಿದಾಟಿಸಿ ಕರೆದುಕೊಂಡು ಬಂದದ್ದೇಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆಗ ಇಸ್ರಾಯೇಲರೆಲ್ಲರೂ ಅರಸನ ಮುಂದೆ ಬಂದು ಅವನನ್ನು, “ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೆ ಹೋಗಿ ಅರಸನನ್ನೂ, ಅವನ ಮನೆಯವರನ್ನೂ, ಅವನೊಡನೆ ಇದ್ದ ಜನರನ್ನೂ ಯೊರ್ದನ್ ನದಿ ದಾಟಿಸಿ ಕರೆದುಕೊಂಡು ಬಂದದ್ದೇಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆಗ ಇಸ್ರಾಯೇಲ್ಯರೆಲ್ಲರೂ ಅರಸನ ಮುಂದೆ ಬಂದು ಅವನನ್ನು - ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೇ ಹೋಗಿ ಅರಸನನ್ನೂ ಅವನ ಮನೆಯವರನ್ನೂ ಅವನೊಡನೆ ಇದ್ದ ಜನರನ್ನೂ ಯೊರ್ದನ್‍ಹೊಳೆ ದಾಟಿಸಿ ಕರಕೊಂಡು ಬಂದದ್ದೇಕೆ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಇಸ್ರೇಲರೆಲ್ಲರೂ ರಾಜನ ಬಳಿಗೆ ಬಂದರು. ಅವರು ರಾಜನಿಗೆ, “ನಮ್ಮ ಸೋದರರಾದ ಯೆಹೂದದ ಜನರು ತಾವೇ ಬಂದು ನಿನ್ನನ್ನು ಮತ್ತು ನಿನ್ನ ಕುಟುಂಬವನ್ನು ನಿನ್ನ ಜನರೊಂದಿಗೆ ಜೋರ್ಡನ್ ನದಿಯನ್ನು ದಾಟಿಸಿ ಕರೆತಂದದ್ದೇಕೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಇಸ್ರಾಯೇಲರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ, “ನಮ್ಮ ಸಹೋದರರಾದ ಯೆಹೂದದ ಮನುಷ್ಯರು ಕಳ್ಳತನವಾಗಿ ನಿನ್ನನ್ನು ಕರೆತಂದದ್ದೇನು? ಅರಸನನ್ನೂ, ಅವನ ಮನೆಯವರನ್ನೂ, ಅವನ ಸಂಗಡ ಇರುವ ದಾವೀದನ ಸಕಲ ಮನುಷ್ಯರನ್ನೂ ಯೊರ್ದನನ್ನು ದಾಟಿಸಿದ್ದೇನು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:41
7 ತಿಳಿವುಗಳ ಹೋಲಿಕೆ  

ಎಫ್ರಯಿಮ್ಯರು ಒಟ್ಟುಗೂಡಿ ಜೋರ್ಡನನ್ನು ದಾಟಿ ಉತ್ತರದಿಕ್ಕಿಗೆ ಯೆಪ್ತಾಹನಿದ್ದಲ್ಲಿಗೆ ಹೋದರು. ಅವನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಏಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ,” ಎಂದರು.


ಅನಂತರ ಎಫ್ರಯಿಮ್ಯರು ಗಿದ್ಯೋನನಿಗೆ, “ನೀನು ಹೀಗೇಕೆ ಮಾಡಿದೆ? ಮಿದ್ಯಾನ್ಯರೊಡನೆ ಯುದ್ಧ ಮಾಡುವುದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ?” ಎಂದು ಉಗ್ರ ವಾಗ್ವಾದ ಮಾಡಿದರು.


ಜನರು ಆ ದಿನದ ಯುದ್ಧದಲ್ಲಿ ಸೋತು ಓಡಿಬಂದಿರುವವರೋ ಎಂಬಂತೆ, ನಾಚಿಕೆಯಿಂದ ಕಳ್ಳತನವಾಗಿ ಊರನ್ನು ಹೊಕ್ಕರು.


ಇಸ್ರಯೇಲರು ಹೀಗೆ ಮಾತಾಡಿಕೊಂಡ ಸಮಾಚಾರ ದಾವೀದನಿಗೆ ಮುಟ್ಟಿತು. ಅವನು ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರಿಗೆ, “ನೀವು ನನ್ನ ಹೆಸರಿನಲ್ಲಿ ಯೆಹೂದಕುಲದ ಹಿರಿಯರಿಗೆ, ‘ಅರಸನಾದ ನನ್ನನ್ನು ಮತ್ತೆ ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ನೀವೇಕೆ ಹಿಂದುಳಿದಿರುವಿರಿ?


ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರು; ಆದುದರಿಂದ ನನ್ನನ್ನು ಕರೆದುಕೊಂಡು ಹೋಗುವುದರಲ್ಲಿ ನೀವು ಹಿಂದುಳಿದಿರುವುದು ಸರಿಯಲ್ಲ’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು