Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:5 - ಕನ್ನಡ ಸತ್ಯವೇದವು C.L. Bible (BSI)

5 ಯೋವಾಬನು ಅರಸನ ಬಳಿಗೆ ಹೋಗಿ, “ನಿಮ್ಮನ್ನೂ ನಿಮ್ಮ ಗಂಡುಹೆಣ್ಣು ಮಕ್ಕಳನ್ನೂ ಹೆಂಡತಿಯರನ್ನೂ ಉಪಪತ್ನಿಯರನ್ನೂ ರಕ್ಷಿಸಿದಂಥ ನಿಮ್ಮ ಸೇವಕರನ್ನು ಈ ದಿನ ಅಪಮಾನಪಡಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೋವಾಬನು ಅರಸನ ಬಳಿಗೆ ಹೋಗಿ ಅವನಿಗೆ, “ನಿನ್ನನ್ನೂ, ನಿನ್ನ ಗಂಡು ಹೆಣ್ಣು ಮಕ್ಕಳನ್ನೂ, ಹೆಂಡತಿಯರನ್ನೂ, ಉಪಪತ್ನಿಯರನ್ನೂ ರಕ್ಷಿಸಿದಂಥ ನಿನ್ನ ಸೈನಿಕರನ್ನು ಈ ಹೊತ್ತು ಅಪಮಾನಪಡಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೋವಾಬನು ಅರಸನ ಬಳಿಗೆ ಹೋಗಿ ಅವನಿಗೆ - ನಿನ್ನನ್ನೂ ನಿನ್ನ ಗಂಡುಹೆಣ್ಣು ಮಕ್ಕಳನ್ನೂ ಹೆಂಡತಿಯರನ್ನೂ ಉಪಪತ್ನಿಯರನ್ನೂ ರಕ್ಷಿಸಿದಂಥ ನಿನ್ನ ಸೇವಕರನ್ನು ಈಹೊತ್ತು ಅಪಮಾನಪಡಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೋವಾಬನು ರಾಜನ ಮನೆಗೆ ಬಂದನು. ಅವನು ರಾಜನಿಗೆ, “ನೀನು ನಿನ್ನ ಎಲ್ಲಾ ಸೈನಿಕರನ್ನು ಅವಮಾನ ಮಾಡುತ್ತಿರುವೆ! ನಿನ್ನ ಸೈನಿಕರು ಇಂದು ನಿನ್ನ ಜೀವವನ್ನು ರಕ್ಷಿಸಿದರು. ಅವರು ನಿನ್ನ ಗಂಡುಮಕ್ಕಳ, ಹೆಣ್ಣುಮಕ್ಕಳ, ಪತ್ನಿಯರ ಮತ್ತು ದಾಸಿಯರ ಜೀವಗಳನ್ನು ರಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಯೋವಾಬನು ಮನೆಯೊಳಗೆ ಅರಸನ ಬಳಿಗೆ ಬಂದು, ಅವನಿಗೆ, “ನಿನ್ನ ಪ್ರಾಣವನ್ನೂ, ನಿನ್ನ ಪುತ್ರಪುತ್ರಿಯರ ಪ್ರಾಣಗಳನ್ನೂ, ನಿನ್ನ ಹೆಂಡತಿಯರ ಮತ್ತು ಉಪಪತ್ನಿಯರ ಪ್ರಾಣಗಳನ್ನೂ ರಕ್ಷಿಸಿದ ನಿನ್ನ ಸೇವಕರನ್ನು ಈ ಹೊತ್ತು ನಾಚಿಕೆಪಡಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:5
9 ತಿಳಿವುಗಳ ಹೋಲಿಕೆ  

ಜಯ ವಿಜಯ ಲಭಿಸುವುದು ಪ್ರಭುವಿನಿಂದಲೆ I ನಿನ್ನಾಶೀರ್ವಾದವಿರಲಿ, ಪ್ರಭು, ಪ್ರಜೆಯ ಮೇಲೆ II


ಎಂದೇ ನೀವಿತ್ತಿರಿ ಅವರನು ಕ್ರೂರ ಶತ್ರುಗಳ ವಶಕೆ ಆದರೆ ಸಂಕಟದಲಿ ಮೊರೆಯಿಡಲು, ಪರದಿಂದ ಕಿವಿಗೊಟ್ಟಿರವರಿಗೆ! ರಕ್ಷಕರನು ಕಳುಹಿಸಿದಿರಿ ಕರುಣಾತಿಶಯದಿಂದ ಈ ಪರಿ ಬಿಡಿಸಿದಿರಿ ವಿರೋಧಿಗಳ ಕೈಯಿಂದ.


ನಾನು ರಾಜಾಭಿಷೇಕ ಹೊಂದಿದ್ದರೂ ಈಗ ಏನೂ ಮಾಡಲು ಅಶಕ್ತನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಸರ್ವೇಶ್ವರನೇ ಕೆಡುಕರಿಗೆ ಮುಯ್ಯಿತೀರಿಸಲಿ,” ಎಂದು ಹೇಳಿದನು.


ಅರಸನು ತನ್ನ ಮುಖ ಮುಚ್ಚಿಕೊಂಡು, “ಮಗ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ಮಗನೇ,” ಎಂದು ಬಹಳವಾಗಿ ಗೋಳಾಡಿದನು.‍


ನೀವು ಶತ್ರುಗಳನ್ನು ಪ್ರೀತಿಸುವವರೂ ಮಿತ್ರರನ್ನು ದ್ವೇಷಿಸುವವರೂ ಆಗಿದ್ದೀರಿ; ನೀವು ನಿಮ್ಮ ಸೇನಾಧಿಪತಿಗಳನ್ನೂ ಸೈನಿಕರನ್ನೂ ಲಕ್ಷಿಸುವವರಲ್ಲವೆಂದು ಈಗ ತೋರಿಸಿಕೊಟ್ಟಿರಿ. ಈ ದಿನ ನಾವೆಲ್ಲರೂ ಸತ್ತು ಅಬ್ಷಾಲೋಮನೊಬ್ಬನೇ ಉಳಿದಿದ್ದರೆ ನಿಮಗೆ ಸಂತೋಷವಾಗುತ್ತಿತ್ತೆಂದು ಇದರಿಂದ ತಿಳಿಯಬೇಕಷ್ಟೆ!


ಎಂಬುದಾಗಿ ತಿಳಿಸಿರಿ. ಅದಲ್ಲದೆ ಅಮಾಸನಿಗೆ, ‘ನೀನೂ ನನ್ನ ರಕ್ತಸಂಬಂಧಿಯಾಗಿದ್ದಿ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯಸೇನಾಪತಿಯನ್ನಾಗಿ ಮಾಡುತ್ತೇನೆ. ಹಾಗೆ ಮಾಡದಿದ್ದರೆ ಸರ್ವೇಶ್ವರ ನನಗೆ ಮಾಡಬೇಕಾದದ್ದನ್ನು ಮಾಡಲಿ,’ ಎಂಬುದಾಗಿಯೂ ತಿಳಿಸಿರಿ,” ಎಂದು ಹೇಳಿ ಕಳುಹಿಸಿದನು.


ದಾವೀದನು, ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೇಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು.


ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡ ಕಲ್ಲುರಾಶಿಯನ್ನು ಮಾಡಿ ಮುಚ್ಚಿದರು. ಇಸ್ರಯೇಲರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು