Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:6 - ಕನ್ನಡ ಸತ್ಯವೇದವು C.L. Bible (BSI)

6 ನೀವು ಶತ್ರುಗಳನ್ನು ಪ್ರೀತಿಸುವವರೂ ಮಿತ್ರರನ್ನು ದ್ವೇಷಿಸುವವರೂ ಆಗಿದ್ದೀರಿ; ನೀವು ನಿಮ್ಮ ಸೇನಾಧಿಪತಿಗಳನ್ನೂ ಸೈನಿಕರನ್ನೂ ಲಕ್ಷಿಸುವವರಲ್ಲವೆಂದು ಈಗ ತೋರಿಸಿಕೊಟ್ಟಿರಿ. ಈ ದಿನ ನಾವೆಲ್ಲರೂ ಸತ್ತು ಅಬ್ಷಾಲೋಮನೊಬ್ಬನೇ ಉಳಿದಿದ್ದರೆ ನಿಮಗೆ ಸಂತೋಷವಾಗುತ್ತಿತ್ತೆಂದು ಇದರಿಂದ ತಿಳಿಯಬೇಕಷ್ಟೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀನು ಶತ್ರುಗಳನ್ನು ಪ್ರೀತಿಸುವವನೂ, ಮಿತ್ರರನ್ನು ದ್ವೇಷಿಸುವವನೂ ಆಗಿದ್ದೀ. ನೀನು ನಿನ್ನ ಸೇನಾಧಿಪತಿಗಳನ್ನೂ, ಸೈನಿಕರನ್ನೂ ಲಕ್ಷಿಸುವವನಲ್ಲವೆಂದು ಈಗ ತೋರಿಸಿಕೊಟ್ಟೆ. ಇದರಿಂದ ಈ ದಿನ ನಾವೆಲ್ಲರೂ ಸತ್ತು ಅಬ್ಷಾಲೋಮನೊಬ್ಬನೆ ಉಳಿದಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ತಿಳಿಯಬೇಕಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀನು ಶತ್ರುಗಳನ್ನು ಪ್ರೀತಿಸುವವನೂ ವಿುತ್ರರನ್ನು ದ್ವೇಷಿಸುವವನೂ ಆಗಿದ್ದೀ; ನೀನು ನಿನ್ನ ಸೇನಾಧಿಪತಿಗಳನ್ನೂ ಸೈನಿಕರನ್ನೂ ಲಕ್ಷಿಸುವವನಲ್ಲವೆಂದು ಈಗ ತೋರಿಸಿಕೊಟ್ಟಿ. ಇದರಿಂದ ಈಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋಮನೊಬ್ಬನೇ ಉಳಿದಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ತಿಳಿಯಬೇಕಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿನ್ನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸುವೆ; ನಿನ್ನನ್ನು ಪ್ರೀತಿಸುವ ಜನರನ್ನು ನೀನು ದ್ವೇಷಿಸುವೆ. ಆದ್ದರಿಂದ ನಿನ್ನ ಸೇವಕರು ಅವಮಾನಿತರಾಗಿದ್ದಾರೆ. ನಿನ್ನ ಅಧಿಕಾರಿಗಳು ಮತ್ತು ನಿನ್ನ ಜನರು ನಿನಗೆ ಮುಖ್ಯವಲ್ಲ ಎಂಬುದನ್ನು ನೀನಿಂದು ರುಜುವಾತುಪಡಿಸಿದೆ. ಇಂದು ಅಬ್ಷಾಲೋಮನು ಬದುಕಿದ್ದು, ನಾವೆಲ್ಲರೂ ಸತ್ತಿದ್ದರೆ, ನೀನು ಬಹಳ ಹರ್ಷಗೊಳುತ್ತಿದ್ದೆ ಎಂಬುದನ್ನು ನಾನು ಈ ದಿನ ಕಂಡುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀನು ನಿನ್ನ ಹಗೆಯವರನ್ನು ಪ್ರೀತಿಮಾಡಿ, ನಿನ್ನನ್ನು ಪ್ರೀತಿಸುವವರನ್ನು ಹಗೆ ಮಾಡಿದ್ದರಿಂದ ಸೇನಾಧಿಪತಿಗಳನ್ನೂ, ಸೈನಿಕರನ್ನೂ ನಿನಗೆ ಏನೂ ಅಲ್ಲವೆಂದು ಈಗ ತಿಳಿಯಮಾಡಿದಿ. ಈ ಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋಮನು ಬದುಕಿದ್ದರೆ, ನಿನಗೆ ಸಂತೋಷವಾಗುತ್ತಿತ್ತು ಎಂದು ನನಗೆ ಅನಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:6
6 ತಿಳಿವುಗಳ ಹೋಲಿಕೆ  

ಪ್ರತ್ಯುತ್ತರವಾಗಿ ಪೌಲನು, “ಸಹೋದರರೇ, ಇವರು ಪ್ರಧಾನ ಯಾಜಕರೆಂದು ನನಗೆ ತಿಳಿಯದೆ ಹೋಯಿತು. ‘ನಿಮ್ಮ ಪ್ರಜಾಪಾಲನನ್ನು ದೂಷಿಸಬೇಡ’ ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ ಅಲ್ಲವೆ?” ಎಂದನು.


ದೇವರು ರಾಜನಿಗೆ “ಮೂರ್ಖ’ ಎಂದು ಹೇಳಬಲ್ಲನು ಪ್ರಭುಗಳನ್ನು “ದುಷ್ಟರು” ಎಂದು ಕರೆಯಬಲ್ಲನು.


ಯೋವಾಬನು ಅರಸನ ಬಳಿಗೆ ಹೋಗಿ, “ನಿಮ್ಮನ್ನೂ ನಿಮ್ಮ ಗಂಡುಹೆಣ್ಣು ಮಕ್ಕಳನ್ನೂ ಹೆಂಡತಿಯರನ್ನೂ ಉಪಪತ್ನಿಯರನ್ನೂ ರಕ್ಷಿಸಿದಂಥ ನಿಮ್ಮ ಸೇವಕರನ್ನು ಈ ದಿನ ಅಪಮಾನಪಡಿಸಿದಿರಿ.


ಈಗ ಎದ್ದು ಹೋಗಿ ನಿಮ್ಮ ಸೇವಕರನ್ನು ದಯಾಭಾವದಿಂದ ಮಾತಾಡಿಸಿ, ನೀವು ಹೀಗೆ ಮಾಡದಿದ್ದರೆ ಸರ್ವೇಶ್ವರನಾಣೆ, ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿಮ್ಮನ್ನು ಬಿಟ್ಟುಹೋಗುವರು. ಯೌವನಕಾಲದಿಂದ ಈವರೆಗೆ ನಿಮಗೆ ಬಂದೊದಗಿದ ಕೇಡುಗಳಲ್ಲಿ ಇದು ದೊಡ್ಡದಾಗುವುದು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು