Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:14 - ಕನ್ನಡ ಸತ್ಯವೇದವು C.L. Bible (BSI)

14 ಆಗ ಅಬ್ನೇರನು ಯೋವಾಬನಿಗೆ, “ಎರಡು ಕಡೆಯ ತರುಣರು ಎದ್ದುಬಂದು ನಮ್ಮ ಮುಂದೆ ದ್ವಂದ್ವಯುದ್ಧ ಮಾಡಲಿ,” ಎಂದು ಹೇಳಿದನು. ಯೋವಾಬನು ಅದಕ್ಕೆ ಒಪ್ಪಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಅಬ್ನೇರನು ಯೋವಾಬನಿಗೆ, “ಎರಡು ಕಡೆಯ ತರುಣರು ಎದ್ದು ನಮ್ಮ ಮುಂದೆ ಸ್ಪರ್ಧಿಸಲಿ” ಎಂದು ಹೇಳಲು ಯೋವಾಬನು, “ಆಗಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಅಬ್ನೇರನು ಯೋವಾಬನಿಗೆ - ಪ್ರಾಯಸ್ಥರು ಎದ್ದು ನಮ್ಮ ಮುಂದೆ ಆಡಲಿ ಎಂದು ಹೇಳಲು ಯೋವಾಬನು ಆಗಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಬ್ನೇರನು ಯೋವಾಬನಿಗೆ, “ಯುವಜನರೆಲ್ಲ ಮೇಲೆದ್ದು, ಇಲ್ಲಿ ಹೋರಾಡಲಿ” ಎಂದು ಹೇಳಿದನು. ಯೋವಾಬನು “ಆಗಲಿ, ಅವರು ಹೋರಾಡಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅಬ್ನೇರನು ಯೋವಾಬನಿಗೆ, “ಕೆಲವು ಜನ ಯುವಕರು ಎದ್ದು ನಮ್ಮ ಮುಂದೆ ಮುಷ್ಠಿ ಯುದ್ಧ ಸ್ಪರ್ಧಿಸಲಿ,” ಎಂದನು. ಅದಕ್ಕೆ ಯೋವಾಬನು, “ಅವರು ಹಾಗೆಯೇ ಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:14
10 ತಿಳಿವುಗಳ ಹೋಲಿಕೆ  

ಅನಂತರ ಆ ದಿವಸ ಘೋರಯುದ್ಧ ನಡೆಯಿತು. ಅಬ್ನೇರನನ್ನೂ ಇಸ್ರಯೇಲರನ್ನೂ ದಾವೀದನ ಸೇವಕರು ಸೋಲಿಸಿದರು.


ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಓಡಬೇಡ; ಕಡೆಗೆ ಅವನು ನಿನ್ನ ಮಾನಕಳೆದಾಗ ಏನು ಮಾಡುವೆ, ಯೋಚಿಸು.


ಉದ್ದೇಶಗಳು ಕೈಗೂಡುವುವು ಹಿತಾಲೋಚನೆಯಿಂದ; ಬುದ್ಧಿವಂತರ ಆಲೋಚನೆ ಕೇಳದೆ ಹೂಡಬೇಡ ಯುದ್ಧ.


ವಾಗ್ವಾದವು ಏರಿಗೆ ಬಿರುಕು ಬಿದ್ದಂತೆ; ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ತೊರೆದುಬಿಡು.


ಮೂರ್ಖನಿಗೆ ಕೆಡುಕುಮಾಡುವ ಚಟ; ಬುದ್ಧಿವಂತನಿಗೆ ಜ್ಞಾನಗಳಿಸುವ ಹಟ.


ಆಗ ಸೌಲನ ಮಗ ಈಷ್ಬೋಶೆತನ ಕಡೆಯವರಾದ ಹನ್ನೆರಡು ಮಂದಿ ಬೆನ್ಯಾಮೀನ್ಯರು, ಮತ್ತು ದಾವೀದನ ಸೇವಕರಲ್ಲಿ ಹನ್ನೆರಡು ಮಂದಿ ಸಮಸಂಖ್ಯೆಯಾಗಿ ಹೊರಟು ದ್ವಂದ್ವಯುದ್ಧ ಮಾಡಿದರು.


ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆ ಹಿಡಿದು ಕತ್ತಿಯಿಂದ ಪಕ್ಕೆಯನ್ನು ತಿವಿದುದರಿಂದ ಎಲ್ಲರೂ ಸತ್ತುಬಿದ್ದರು. ಆದುದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ ‘ಹದಗತ್ತಿ ಕ್ಷೇತ್ರ’ ಎಂದು ಹೆಸರಾಯಿತು.


ಅನಂತರ ಅಮಚ್ಯನು ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಇಸ್ರಯೇಲರ ಅರಸನೂ ಆದ ಯೋವಾಷನ ಬಳಿಗೆ ದೂತರನ್ನು ಕಳುಹಿಸಿದನು. ಅವನಿಗೆ, “ನಾವು ಒಬ್ಬರನ್ನೊಬ್ಬರು ಎದುರುಗೊಳ್ಳೋಣ ಬಾ,” ಎಂದು ಹೇಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು