Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:16 - ಕನ್ನಡ ಸತ್ಯವೇದವು C.L. Bible (BSI)

16 ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆ ಹಿಡಿದು ಕತ್ತಿಯಿಂದ ಪಕ್ಕೆಯನ್ನು ತಿವಿದುದರಿಂದ ಎಲ್ಲರೂ ಸತ್ತುಬಿದ್ದರು. ಆದುದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ ‘ಹದಗತ್ತಿ ಕ್ಷೇತ್ರ’ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆಹಿಡಿದು, ಕತ್ತಿಯಿಂದ ಪಕ್ಕೆಯಲ್ಲಿ ತಿವಿದಿದ್ದರಿಂದ ಎಲ್ಲರೂ ಸತ್ತು ಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ “ಹೆಲ್ಕಾತ್ ಹಸ್ಸೂರಿಂ” ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆ ಹಿಡಿದು ಕತ್ತಿಯಿಂದ ಪಕ್ಕೆಯಲ್ಲಿ ತಿವಿದದರಿಂದ ಎಲ್ಲರೂ ಸತ್ತು ಬಿದ್ದರು. ಆದದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ ಹದಗತ್ತಿ ಹೊಲವೆಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಪ್ರತಿಯೊಬ್ಬರೂ ತಮ್ಮ ಎದುರಾಳಿಯ ತಲೆಯನ್ನು ಹಿಡಿದುಕೊಂಡರು ಮತ್ತು ಖಡ್ಗದಿಂದ ಅವರ ಪಕ್ಕೆಗಳಿಗೆ ತಿವಿದರು. ಆದ್ದರಿಂದ ಅವರು ಒಟ್ಟಾಗಿ ಕೆಳಕ್ಕೆ ಬಿದ್ದರು. ಆದಕಾರಣವೇ ಆ ಸ್ಥಳವನ್ನು “ಹರಿತ ಕತ್ತಿಯ ಹೊಲ” ಎಂದು ಕರೆಯುತ್ತಾರೆ. ಈ ಸ್ಥಳವು ಗಿಬ್ಯೋನಿನಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರಲ್ಲಿ ಒಬ್ಬರ ಪಕ್ಕೆಯಲ್ಲಿ ಒಬ್ಬರು ಖಡ್ಗವನ್ನು ತಿವಿದುದರಿಂದ ಎಲ್ಲರೂ ಸತ್ತುಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ “ಹೆಲ್ಕಾತ್ ಹಸ್ಸೂರಿಂ” ಅಂದರೆ, “ಹದಗತ್ತಿ ಕ್ಷೇತ್ರ” ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:16
7 ತಿಳಿವುಗಳ ಹೋಲಿಕೆ  

ಆಗ ಅಬ್ನೇರನು ಯೋವಾಬನಿಗೆ, “ಎರಡು ಕಡೆಯ ತರುಣರು ಎದ್ದುಬಂದು ನಮ್ಮ ಮುಂದೆ ದ್ವಂದ್ವಯುದ್ಧ ಮಾಡಲಿ,” ಎಂದು ಹೇಳಿದನು. ಯೋವಾಬನು ಅದಕ್ಕೆ ಒಪ್ಪಿಕೊಂಡನು.


ಆಗ ಸೌಲನ ಮಗ ಈಷ್ಬೋಶೆತನ ಕಡೆಯವರಾದ ಹನ್ನೆರಡು ಮಂದಿ ಬೆನ್ಯಾಮೀನ್ಯರು, ಮತ್ತು ದಾವೀದನ ಸೇವಕರಲ್ಲಿ ಹನ್ನೆರಡು ಮಂದಿ ಸಮಸಂಖ್ಯೆಯಾಗಿ ಹೊರಟು ದ್ವಂದ್ವಯುದ್ಧ ಮಾಡಿದರು.


ಅನಂತರ ಆ ದಿವಸ ಘೋರಯುದ್ಧ ನಡೆಯಿತು. ಅಬ್ನೇರನನ್ನೂ ಇಸ್ರಯೇಲರನ್ನೂ ದಾವೀದನ ಸೇವಕರು ಸೋಲಿಸಿದರು.


ಹೆಲ್ಕತ್, ಹಲೀ, ಬೆಟೆನ್, ಅಕ್ಷಾಫ್,


ಆಗ ಅಬ್ನೇರನು ಯೋವಾಬನನ್ನು ನೋಡಿ, “ಕತ್ತಿ ಯಾವಾಗಲೂ ತಿನ್ನುತ್ತಲೇ ಇರಬೇಕೇ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೇ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವೆ?” ಎಂದನು.


ಅವರಲ್ಲಿ ಪ್ರತಿಯೊಬ್ಬನು ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದೆ ನಡೆದನು; ಸಿರಿಯಾದವರು ಓಡಿಹೋಗತೊಡಗಿದರು. ಇಸ್ರಯೇಲರು ಅವರನ್ನು ಹಿಂದಟ್ಟಿದರು. ಅರಸ ಬೆನ್ಹದದನು ಹಾಗು ಕೆಲವು ಮಂದಿ ರಾಹುತರು ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು.


ಈ ವಿಷಯ ಜೆರುಸಲೇಮಿನ ನಿವಾಸಿಗಳಿಗೆಲ್ಲಾ ತಿಳಿಯಿತು. ಆ ಜಮೀನನ್ನು ತಮ್ಮ ಭಾಷೆಯಲ್ಲಿ ‘ಅಖೆಲ್ದಾಮ’ ಅಂದರೆ ‘ನೆತ್ತರನೆಲ’ ಎಂದು ಕರೆಯಲಾರಂಭಿಸಿದರು).


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು