Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:31 - ಕನ್ನಡ ಸತ್ಯವೇದವು C.L. Bible (BSI)

31 ಆದರೆ ದಾವೀದನ ಯೋಧರು ಅಬ್ನೇರನ ಜನರಾದ ಬೆನ್ಯಾಮೀನ್ಯರಲ್ಲಿ ಮುನ್ನೂರರ್ವತ್ತು ಮಂದಿಯನ್ನು ಕೊಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದರೆ ದಾವೀದನ ಸೈನಿಕರು ಅಬ್ನೇರನ ಜನರಾಗಿರುವ ಬೆನ್ಯಾಮೀನ್ಯರಲ್ಲಿ ಮುನ್ನೂರ ಅರವತ್ತು ಮಂದಿಯನ್ನು ಕೊಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದರೆ ದಾವೀದನ ಭಟರು ಅಬ್ನೇರನ ಜನರಾಗಿರುವ ಬೆನ್ಯಾಮೀನ್ಯರಲ್ಲಿ ಮುನ್ನೂರರುವತ್ತು ಮಂದಿಯನ್ನು ಕೊಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದರೆ ಅಬ್ನೇರನ ಹಿಂಬಾಲಕರೂ ಬೆನ್ಯಾಮೀನ್ ಕುಟುಂಬದ ಗುಂಪಿನವರೂ ಆದ ಮುನ್ನೂರೈವತ್ತು ಜನರನ್ನು ದಾವೀದನ ಭಟರು ಕೊಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ದಾವೀದನ ಸೇವಕರು ಬೆನ್ಯಾಮೀನ್ಯರಲ್ಲಿಯೂ, ಅಬ್ನೇರನ ಜನರಲ್ಲಿಯೂ ಮುನ್ನೂರ ಅರವತ್ತು ಜನರನ್ನು ಹೊಡೆದದ್ದರಿಂದ ಅವರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:31
4 ತಿಳಿವುಗಳ ಹೋಲಿಕೆ  

ಬಂದ ದೂತರಿಗೆ ಇಸ್ರಯೇಲರ ಅರಸನು, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಕೊಚ್ಚಿಕೊಳ್ಳಬಾರದು ಎಂದು ಅವನಿಗೆ ಹೇಳಿರಿ,” ಎಂದನು.


ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಬಹುದಿನಗಳವರೆಗೆ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶ ದುರ್ಬಲವಾಗುತ್ತಾ ಬಂದಿತು.


ಯೋವಾಬನು ಅಬ್ನೇರನನ್ನು ಬೆನ್ನಟ್ಟದೆ ಹಿಂದೆ ತಿರುಗಿ ಬಂದು, ಜನರನ್ನು ಕೂಡಿಸಿ ಲೆಕ್ಕಿಸಿದಾಗ ಅವರಲ್ಲಿ ದಾವೀದನ ಹತ್ತೊಂಬತ್ತು ಮಂದಿ ಯೋಧರು ಮತ್ತು ಅಸಾಹೇಲನು ಇರಲಿಲ್ಲ.


ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೆತ್ಲೆಹೇಮಿನಲ್ಲಿರುವ ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು