Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:6 - ಕನ್ನಡ ಸತ್ಯವೇದವು C.L. Bible (BSI)

6 ಅವರ ಅಚಲ ಪ್ರೀತಿಸತ್ಯತೆಗಳು ನಿಮ್ಮೊಂದಿಗಿರಲಿ! ಈ ಸತ್ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನ ಒಡಂಬಡಿಕೆಯ ನಂಬಿಕೆ ಮತ್ತು ಸತ್ಯ ನಿಮ್ಮೊಂದಿಗಿರಲಿ. ಈ ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನ ಕೃಪಾಸತ್ಯತೆಗಳು ನಿಮ್ಮೊಂದಿಗಿರಲಿ; ಈ ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆತನು ನಿಮಗೆ ಕೃಪಾಳುವೂ ನಂಬಿಗಸ್ತನೂ ಆಗಿರಲಿ. ನೀವು ಸೌಲನ ಬೂದಿಯನ್ನು ಸಮಾಧಿಮಾಡಿದ್ದರಿಂದ ನಾನೂ ನಿಮಗೆ ಕರುಣೆ ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈಗ ಯೆಹೋವ ದೇವರು ನಿಮಗೆ ದಯೆಯನ್ನೂ, ನಂಬಿಗಸ್ತಿಕೆಯನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ, ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:6
15 ತಿಳಿವುಗಳ ಹೋಲಿಕೆ  

ಕೆಟ್ಟದ್ದನ್ನು ಕಲ್ಪಿಸುವವರು ಮಾರ್ಗಭ್ರಷ್ಟರು; ಒಳ್ಳೆಯದನ್ನು ಕಲ್ಪಿಸುವವರು ಮರ್ಯಾದಸ್ಥರು.


ಸರ್ವೇಶ್ವರ ಮೋಶೆಯ ಎದುರಿನಲ್ಲಿ ಹಾದುಹೋಗುತ್ತಾ ಹೀಗೆಂದು ಪ್ರಕಟಿಸಿದರು: ಸರ್ವೇಶ್ವರನು; ಸರ್ವೇಶ್ವರನು ಕರುಣಾಮಯನು, ದಯಾಳು ದೇವರು. ತಟ್ಟನೆ ಸಿಟ್ಟುಗೊಳ್ಳದವನು, ಪ್ರೀತಿಪಾತ್ರನು, ನಂಬಿಗಸ್ತನು,


ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ.


ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು.


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಆತ ನೆರವಾಗುವನೆನಗೆ ಪರಲೋಕದಿಂದ I ತಪ್ಪಿಸುವನು ನನ್ನನು ಬೆನ್ನಟ್ಟಿ ಬರುವವರಿಂದ II ತೋರ್ಪಡಿಸುವನು ಸತ್ಯತೆಯನು I ತನ್ನ ಅಚಲ ಪ್ರೀತಿಯನಾ ದೇವನು II


ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು; ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡುಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು? ನಿನ್ನ ಸಹೋದರನನ್ನು ಕರೆದುಕೊಂಡು ಹಿಂದಿರುಗಿ ಹೋಗು; ದೇವರ ಅನಂತ ಕೃಪೆ ನಿನ್ನ ಮೇಲಿರಲಿ,” ಎಂದು ಹೇಳಿದನು.


ದಾವೀದನು, “ನಾಹಾಷನು ನನಗೆ ಸ್ನೇಹತೋರಿಸಿದ್ದರಿಂದ ನಾನೂ ಅವನ ಮಗ ಹಾನೂನನಿಗೆ ಸ್ನೇಹ ತೋರಿಸುವೆನು,” ಎಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕಾಗಿ ತನ್ನ ಸೇವಕರನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದರು.


ಆಗ ದಾವೀದನು, “ಹೆದರಬೇಡ; ನಿನ್ನ ತಂದೆ ಯೋನಾತಾನನ ನೆನಪಿನಲ್ಲಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ; ಇದಲ್ಲದೆ ನೀನು ಪ್ರತಿದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು,” ಎಂದು ಹೇಳಿದನು.


ಆಗ ಅರಸನು, “ಸೌಲನ ಕುಟುಂಬದವರಲ್ಲಿ ಯಾರಾದರೂ ಉಳಿದಿದ್ದರೆ ಹೇಳು; ನಾನು ದೇವರನ್ನು ನೆನಸಿ ಅವರಿಗೆ ದಯೆ ತೋರಿಸುತ್ತೇನೆ,” ಎಂದನು. ಆಗ ಚೀಬನು, “ಯೋನಾತಾನನಿಗೆ, ಎರಡು ಕಾಲೂ ಕುಂಟಾದ ಒಬ್ಬ ಮಗನಿರುತ್ತಾನೆ,” ಎಂದು ಹೇಳಿದನು.


ಯೆಹೂದ್ಯರು ನನ್ನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡಿದ್ದಾರೆ. ಆದುದರಿಂದ ಸೌಲನು ಸತ್ತುಹೋಗಿದ್ದರೂ ನೀವು ಶೂರರಾಗಿರಿ; ನಿಮ್ಮ ಕೈಗಳು ಜೋಲುಬೀಳದಿರಲಿ,” ಎಂದು ಹೇಳಿಸಿದನು.


ಆಗ ಆ ಗೂಢಚಾರರು, “ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ. ಸರ್ವೇಶ್ವರಸ್ವಾಮಿ ಈ ನಾಡನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ದಯೆಯಿಂದ ನಡೆದುಕೊಳ್ಳುತ್ತೇವೆ,” ಎಂದರು.


ಹೀಗೆ ಹೋಗುತ್ತಿರುವಾಗ ದಾರಿಯಲ್ಲಿ ನವೊಮಿ ಅವರಿಗೆ: “ನೀವು ಇಬ್ಬರೂ ನಿಮ್ಮ ತವರುಮನೆಗಳಿಗೆ ಹಿಂದಿರುಗಿರಿ. ನನಗೂ ಮರಣಹೊಂದಿದ ನನ್ನ ಮಕ್ಕಳಿಗೂ ನೀವು ಒಳಿತು ಮಾಡಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು