Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:13 - ಕನ್ನಡ ಸತ್ಯವೇದವು C.L. Bible (BSI)

13 ಶವವನ್ನು ಆಚೆ ಹಾಕಿದ ನಂತರ ಜನರೆಲ್ಲರು ಬಿಕ್ರೀಯ ಮಗನಾದ ಶೆಬನನ್ನು ಬೆನ್ನಟ್ಟುವುದಕ್ಕಾಗಿ ಯೋವಾಬನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಶವವನ್ನು ಆಚೆ ಹಾಕಿದ ನಂತರ ಜನರೆಲ್ಲರೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೊಸ್ಕರ ಯೋವಾಬನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಶವವನ್ನು ಆಚೆ ಹಾಕಿದನಂತರ ಜನರೆಲ್ಲರೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವದಕ್ಕೋಸ್ಕರ ಯೋವಾಬನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಮಾಸನ ದೇಹವನ್ನು ರಸ್ತೆಯಿಂದ ಎತ್ತಿಕೊಂಡು ಹೋದ ಮೇಲೆ ಜನರೆಲ್ಲರೂ ಯೋವಾಬನನ್ನು ಹಿಂಬಾಲಿಸಿದರು. ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋಗಲು ಅವರು ಯೋವಾಬನೊಂದಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಶವವನ್ನು ರಾಜಮಾರ್ಗದಿಂದ ಎಳೆದು ಆಚೆ ಹಾಕಿದ ತರುವಾಯ ಜನರೆಲ್ಲರೂ ಮುಂದಕ್ಕೆ ಹೋಗಿ, ಬಿಕ್ರಿಯ ಮಗನಾದ ಶೆಬನನ್ನು ಹಿಂದಟ್ಟಿ ಯೋವಾಬನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:13
14 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು. ಅಲ್ಲಿಂದ ಹೊರಡುವಾಗ ಜನರ ದೊಡ್ಡಗುಂಪು ಅವರನ್ನು ಹಿಂಬಾಲಿಸಿತು.


“ದಾರಿತೋರುವ ಕಂಬಗಳನ್ನೂ ಕೈಮರಗಳನ್ನೂ ನಿಲ್ಲಿಸಿಕೊ ನೀನು ಯಾವ ಮಾರ್ಗವಾಗಿ ಹೋದೆಯೋ ಆ ಮಾರ್ಗವನ್ನು ನೆನಸಿಕೊ. ಇಸ್ರಯೇಲೆಂಬ ಯುವತಿಯೇ ಹಿಂದಿರುಗು ಈ ನಿನ್ನ ನಗರಕ್ಕೆ ಹಿಂದಿರುಗು.


ಹೊರಟುಬನ್ನಿ, ಹಾದುಬನ್ನಿ, ಪುರದ್ವಾರವನು ಬರಲಿರುವ ಜನರಿಗೆ ಸರಿಮಾಡಿರಿ ಹಾದಿಯನು ಎತ್ತರಿಸಿ ಹೆದ್ದಾರಿಯನು, ತೆಗೆದುಹಾಕಿ ಕಲ್ಲುಗಳನು ಹಾರಿಸಿ ಧ್ವಜವನು, ನೀಡಿ ರಾಷ್ಟ್ರಗಳಿಗೆ ಸೂಚನೆಯನು.


ಬಳಿಕ ಅವನು ಲಾಕೀಷಿನಿಂದ ರಬ್ಷಾಕೆ ಎಂಬ ಒಬ್ಬ ದಳಪತಿಯನ್ನು ಮಹಾಸೈನ್ಯದೊಂದಿಗೆ ಜೆರುಸಲೇಮಿನಲ್ಲಿದ್ದ ರಾಜ ಹಿಜ್ಕೀಯನ ಬಳಿಗೆ ಕಳುಹಿಸಿದನು. ಈ ದಳಪತಿ ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದ ಹತ್ತಿರವಿರುವ ಕೆರೆಯ ಕಾಲುವೆಯ ಬಳಿ ಪಾಳೆಯ ಮಾಡಿಕೊಂಡನು.


ಆಗ ಸರ್ವೇಶ್ವರಸ್ವಾಮಿ ಯೆಶಾಯನಿಗೆ ಹೀಗೆಂದರು : “ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಆಹಾಜಾರಸನನ್ನು ಕಾಣಲುಹೋಗು. ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದಲ್ಲಿ ಕೆರೆಯ ಕಾಲುವೆಯ ತುದಿಯ ಬಳಿ ಆತ ನಿನಗೆ ಸಿಕ್ಕುವನು. ಅವನಿಗೆ ಈ ಪ್ರಕಾರ ತಿಳಿಸು :


ಸಜ್ಜನರ ರಾಜಮಾರ್ಗ ಹಾನಿಗೆ ದೂರ; ಸನ್ನಡತೆಯುಳ್ಳವ ಪ್ರಾಣಸಂರಕ್ಷಕ.


ಅಸ್ಸೀರಿಯದ ಅರಸನು ಲಾಕೀಷಿನಿಂದ ಮಹಾ ಸೈನ್ಯಸಹಿತರಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಜೆರುಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ದಿಣ್ಣೆ ಹತ್ತಿ ಜೆರುಸಲೇಮಿಗೆ ಬಂದು, ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದ ಹತ್ತಿರವಿರುವ, ಕೆರೆಯ ಕಾಲುವೆಯ ಬಳಿ, ಪಾಳೆಯ ಮಾಡಿಕೊಂಡು ಅರಸನನ್ನು ಕೂಗಿ ಕರೆದರು.


ಕೂಡಲೆ ಆ ಹಸುಗಳು ಬೇತ್‍ಷೆಮೆಷಿನ ರಾಜಮಾರ್ಗವನ್ನು ಹಿಡಿದು, ಅಂಬಾ ಎನ್ನುತ್ತಾ ನೆಟ್ಟಗೆ ಮುಂದೆ ಸಾಗಿದವು. ಎಡಕ್ಕಾಗಲಿ, ಬಲಕ್ಕಾಗಲಿ ತಿರುಗಲಿಲ್ಲ. ಫಿಲಿಷ್ಟಿಯ ರಾಜರುಗಳು ಬೇತ್ ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆಹೋದರು.


ಎಂದು ಮಾತನಾಡಿಕೊಳ್ಳುತ್ತಿರುವಾಗ ಶಿಲೋವಿನಲ್ಲಿ ವರ್ಷ ವರ್ಷ ಸರ್ವೇಶ್ವರನ ಉತ್ಸವ ನಡೆಯುತ್ತದೆಂಬುದು ಅವರಿಗೆ ನೆನಪಿಗೆ ಬಂದಿತು. (ಶಿಲೋ ಎಂಬುದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ ಲೇಬೋನದ ದಕ್ಷಿಣಕ್ಕೂ ಇರುತ್ತದೆ.)


ಅದಕ್ಕೆ ಇಸ್ರಯೇಲರು, “ನಾವು ರಾಜಮಾರ್ಗದಲ್ಲೇ ಹೋಗುತ್ತೇವೆ. ನಾವಾಗಲಿ, ನಮ್ಮ ಜಾನುವಾರುಗಳಾಗಲಿ ನಿಮ್ಮ ನೀರನ್ನು ಕುಡಿದರೆ ಅದಕ್ಕೆ ಬೆಲೆ ಕೊಡುತ್ತೇವೆ. ಬೇರೆ ಏನೂ ನಮಗೆ ಬೇಡ; ಕಾಲ್ನಡೆಯಾಗಿ ದಾಟಿಹೋಗುವುದಕ್ಕೆ ಮಾತ್ರ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದರು.


ಬೆನ್ಯಾಮೀನ್ ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ನೀಚ ವ್ಯಕ್ತಿ ಅಲ್ಲಿಗೆ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಯೇಲರೇ, ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ. ಜೆಸ್ಸೆಯನ ಮಗನಲ್ಲಿ ನಮಗೆ ಹಕ್ಕುಭಾದ್ಯತೆಯಿಲ್ಲ. ಪ್ರತಿ ಒಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ತೆರಳೋಣ,” ಎಂದನು.


“ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕಾಗಿ ಮುಂದೆ ನಡೆದಾಗ ಯೋವಾಬನ ಆಳುಗಳಲ್ಲೊಬ್ಬನು ಅಮಾಸನ ಹತ್ತಿರ ನಿಂತು, “ದಾವೀದ ಹಾಗು ಯೋವಾಬರ ಕಡೆಯವರು ಯೋವಾಬನನ್ನು ಹಿಂಬಾಲಿಸಲಿ,” ಎಂದು ಕೂಗಿದನು.


ಶೆಬನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ಸಂಚರಿಸುತ್ತಾ ಅಬೇಲ್ಬೇತ್ಮಾಕಾ ಎಂಬಲ್ಲಿಗೆ ಬಂದನು. ಬೇರೆಯವರೆಲ್ಲರೂ ಕೂಡಿಕೊಂಡು ಅವನೊಡನೆ ಆ ಊರನ್ನು ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು