Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:2 - ಕನ್ನಡ ಸತ್ಯವೇದವು C.L. Bible (BSI)

2 ಆಗ ಇಸ್ರಯೇಲರೆಲ್ಲರೂ ದಾವೀದನನ್ನು ಬಿಟ್ಟು ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದ್ಯರು ತಮ್ಮ ಅರಸನನ್ನು ಅಂಟಿಕೊಂಡು ಜೋರ್ಡನ್ ತಗ್ಗಿನಿಂದ ಜೆರುಸಲೇಮಿನವರೆಗೂ ಅವನ ಜೊತೆಯಲ್ಲೇ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಇಸ್ರಾಯೇಲರೆಲ್ಲರೂ ದಾವೀದನನ್ನು ಬಿಟ್ಟು, ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದ್ಯರು ತಮ್ಮ ಅರಸನನ್ನು ಅಂಟಿಕೊಂಡು ಯೊರ್ದನ್ ತಗ್ಗಿನಿಂದ ಯೆರೂಸಲೇಮಿನ ವರೆಗೂ ಅವನ ಜೊತೆಯಲ್ಲಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಇಸ್ರಾಯೇಲ್ಯರೆಲ್ಲರೂ ದಾವೀದನನ್ನು ಬಿಟ್ಟು ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದ್ಯರು ತಮ್ಮ ಅರಸನನ್ನು ಅಂಟಿಕೊಂಡು ಯೊರ್ದನ್‍ತಗ್ಗಿನಿಂದ ಯೆರೂಸಲೇವಿುನವರೆಗೂ ಅವನ ಜೊತೆಯಲ್ಲಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಇಸ್ರೇಲರೆಲ್ಲರೂ ದಾವೀದನನ್ನು ತೊರೆದು, ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದದ ಜನರೆಲ್ಲರೂ ಜೋರ್ಡನ್ ನದಿಯಿಂದ ಜೆರುಸಲೇಮಿನ ತನಕ ತಮ್ಮ ರಾಜನ ಜೊತೆಯಲ್ಲಿಯೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಇಸ್ರಾಯೇಲರೆಲ್ಲರೂ ದಾವೀದನನ್ನು ಬಿಟ್ಟು ಸರಿದು, ಬಿಕ್ರಿಯ ಮಗ ಶೆಬನ ಹಿಂದೆ ಹೋದರು. ಆದರೆ ಯೊರ್ದನಿನಿಂದ ಯೆರೂಸಲೇಮಿನವರೆಗೂ ಇರುವ ಯೆಹೂದ ಜನರು ತಮ್ಮ ಅರಸನನ್ನು ಅಂಟಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:2
12 ತಿಳಿವುಗಳ ಹೋಲಿಕೆ  

ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ವಾಗ್ವಾದವು ಏರಿಗೆ ಬಿರುಕು ಬಿದ್ದಂತೆ; ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ತೊರೆದುಬಿಡು.


ನರಮಾನವರೆಲ್ಲರು ಬರೇ ಉಸಿರು I ನರಾಧಿಪತಿಗಳು ತೀರಾ ಹುಸಿಯು I ತ್ರಾಸಿನಲಿ ತೂಗಲು ಅವರೆಲ್ಲರು I ಉಸಿರಿಗಿಂತಲೂ ಅತ್ಯಂತ ಹಗುರು II


ಜುದೇಯ ಪ್ರಾಂತ್ಯದಲ್ಲಿದ್ದ ಇಸ್ರಯೇಲರಾದರೋ ಅರಸ ರೆಹಬ್ಬಾಮನ ಅಧೀನದಲ್ಲೆ ಉಳಿದರು.


ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಜೋರ್ಡನಿಗೆ ಬಂದಾಗ ಯೆಹೂದಕುಲದವರು ಅವನನ್ನು ಸ್ವಾಗತಿಸುವುದಕ್ಕೂ ಜೋರ್ಡನ್ ನದಿಯನ್ನು ದಾಟಿಸುವುದಕ್ಕೂ ಗಿಲ್ಗಾಲಿಗೆ ಬಂದರು.


ಬೆನ್ಯಾಮೀನ್ ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ನೀಚ ವ್ಯಕ್ತಿ ಅಲ್ಲಿಗೆ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಯೇಲರೇ, ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ. ಜೆಸ್ಸೆಯನ ಮಗನಲ್ಲಿ ನಮಗೆ ಹಕ್ಕುಭಾದ್ಯತೆಯಿಲ್ಲ. ಪ್ರತಿ ಒಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ತೆರಳೋಣ,” ಎಂದನು.


ಅರಸನಾದ ದಾವೀದನು ಜೆರುಸಲೇಮಿಗೆ ಬಂದ ಮೇಲೆ ತಾನು ಮನೆಕಾಯುವುದಕ್ಕಾಗಿ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾದ ಒಂದು ಮನೆಯಲ್ಲಿಟ್ಟು ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಆದರೆ ಅವರನ್ನು ತಿರುಗಿ ಕೂಡಲಿಲ್ಲ. ಅವರು ಜೀವದಿಂದ ಇರುವವರೆಗೂ ವಿಧವೆಯರಂತೆ ಇದ್ದು ಕಾವಲಲ್ಲಿರಬೇಕಾಯಿತು.


ನಾವು ಬಂದಿರುವ ಸಂಗತಿಯೇ ಬೇರೆ; ಎಫ್ರಯಿಮ್ ಪರ್ವತ ಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬವನು ಅರಸ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನನ್ನು ಒಪ್ಪಿಸಿಬಿಡಿ; ನಾನು ಊರನ್ನು ಬಿಟ್ಟು ಹೋಗುತ್ತೇನೆ,” ಎಂದು ಹೇಳಿದನು. ಅದಕ್ಕೆ ಆ ಸ್ತ್ರೀ, “ನೋಡಿ, ಈಗಲೇ ಅವನ ತಲೆಯನ್ನು ಗೋಡೆಯ ಕಿಂಡಿಯಿಂದ ನಿಮ್ಮ ಕಡೆಗೆ ಎಸೆಯಲಾಗುವುದು,” ಎಂದು ಉತ್ತರಕೊಟ್ಟು ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದಿಂದ ಈ ಸಂಗತಿಯನ್ನು ತಿಳಿಸಿದಳು.


ಯಾರೊಬ್ಬಾಮನು ಹಿಂದಿರುಗಿ ಬಂದು ಇದ್ದಾನೆಂಬ ಸಮಾಚಾರ ಇಸ್ರಯೇಲರಿಗೆ ಗೊತ್ತಾದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು