Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:10 - ಕನ್ನಡ ಸತ್ಯವೇದವು C.L. Bible (BSI)

10 ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು ಅದನ್ನು ಬಂಡೆಯ ಮೇಲೆ ಹಾಸಿ ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಆ ಗೋಣಿತಟ್ಟಿನ ಮೇಲೆ ಕುಳಿತುಕೊಂಡು ಹಗಲಿನಲ್ಲಿ ಆಕಾಶದ ಪಕ್ಷಿಗಳಾಗಲಿ ಇರುಳಿನಲ್ಲಿ ಕಾಡುಮೃಗಗಳಾಗಲಿ ಆ ಶವಗಳನ್ನು ತಿನ್ನದಂತೆ ಕಾಯುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು, ಅದನ್ನು ಬಂಡೆಯ ಮೇಲೆ ಹಾಸಿ, ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಅದರ ಮೇಲೆ ಕುಳಿತುಕೊಂಡು, ಹಗಲಿನಲ್ಲಿ ಆಕಾಶದ ಪಕ್ಷಿಗಳೂ, ರಾತ್ರಿಯಲ್ಲಿ ಕಾಡು ಮೃಗಗಳೂ ಅವುಗಳನ್ನು ತಿನ್ನದಂತೆ ಕಾಯುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು ಅದನ್ನು ಬಂಡೆಯು ಮೇಲೆ ಹಾಸಿ ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಅದರ ಮೇಲೆ ಕೂತುಕೊಂಡು ಹಗಲಿನಲ್ಲಿ ಆಕಾಶದ ಪಕ್ಷಿಗಳೂ ಇರುಳಿನಲ್ಲಿ ಕಾಡುಮೃಗಗಳೂ ಅವುಗಳನ್ನು ತಿನ್ನದಂತೆ ಕಾಯುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅಯ್ಯಾಹನ ಮಗಳಾದ ರಿಚ್ಪಳು ಶೋಕವಸ್ತ್ರವನ್ನು ಕಲ್ಲಿನ ಮೇಲೆ ಹಾಸಿದಳು. ಸುಗ್ಗಿಯ ಆರಂಭದಿಂದ, ಆ ದೇಹಗಳ ಮೇಲೆ ಮಳೆಯು ಬೀಳುವ ತನಕ, ಆಕೆ ಆ ವಸ್ತ್ರದ ಮೇಲೆ ಕುಳಿತುಕೊಂಡಳು. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಹಗಲು ಹೊತ್ತಿನಲ್ಲಿಯೂ, ಕಾಡಿನ ಪ್ರಾಣಿಗಳು ರಾತ್ರಿಯ ಹೊತ್ತಿನಲ್ಲಿಯೂ ತನ್ನ ಮಕ್ಕಳ ದೇಹಗಳನ್ನು ಮುಟ್ಟಲು ರಿಚ್ಪಳು ಅವಕಾಶಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತೆಗೆದುಕೊಂಡುಹೋಗಿ, ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಅದರ ಮೇಲೆ ಕುಳಿತುಕೊಂಡಳು. ಸುಗ್ಗಿಯ ದಿವಸ ಮೊದಲ್ಗೊಂಡು ಆಕಾಶದಿಂದ ಶವಗಳ ಮೇಲೆ ಮಳೆ ಬೀಳುವ ತನಕ, ಹಗಲಲ್ಲಿ ಆಕಾಶದ ಪಕ್ಷಿಗಳಾದರೂ, ರಾತ್ರಿಯಲ್ಲಿ ಕಾಡುಮೃಗಗಳಾದರೂ ಶವಗಳನ್ನು ತಿನ್ನದಂತೆ ಕಾಯುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:10
19 ತಿಳಿವುಗಳ ಹೋಲಿಕೆ  

ಅವನ ಶವವನ್ನು ನೀವು ರಾತ್ರಿಯೆಲ್ಲಾ ಆ ಮರದ ಮೇಲೆ ಇರಿಸಬಾರದು; ಅದನ್ನು ಅದೇ ದಿನ ನೆಲದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ಹೀಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡನ್ನು ನೀವೇ ಅಪವಿತ್ರಗೊಳಿಸಬಾರದು.


ವಸಂತಕಾಲದಲ್ಲಿ ಮಳೆಗಾಗಿ ಸರ್ವೇಶ್ವರಸ್ವಾಮಿಗೆ ಪ್ರಾರ್ಥನೆ ಮಾಡಿರಿ. ಮೋಡ ಮಿಂಚುಗಳನ್ನು ಗಾಳಿಮಳೆಯನ್ನು ಉಂಟುಮಾಡುವವರು ಅವರೇ. ಸರ್ವರಿಗೂ ಹೊಲಗದ್ದೆಗಳಲ್ಲಿ ಪೈರುಪಚ್ಚೆಗಳನ್ನು ನೀಡುವವರು ಅವರೇ.


“ಸಿಯೋನಿನ ಜನರೇ, ಹರ್ಷಿಸಿರಿ; ಸ್ವಾಮಿ ದೇವರಾದ ಸರ್ವೇಶ್ವರ ನಿಮಗೆ ಮಾಡಿದ ಉಪಕಾರಗಳಿಗಾಗಿ ಆನಂದಿಸಿರಿ. ನಿಮಗೆ ಅವರು ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು; ಮುಂಗಾರು ಹಿಂಗಾರು ಮಳೆಗಳನ್ನು ಸುರಿಸುವರು.


ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ದುಃಖದಿಂದ ಹರಿದುಕೊಂಡನು; ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ವರ್ತಿಸಿದನು.


ಅಯಾಹನ ಮಗಳಾದ ರಿಚ್ಪಳು ಸೌಲನ ಉಪಪತ್ನಿಯಾಗಿದ್ದಳು. ಒಂದು ದಿನ ಈಷ್ಬೋಶೆತನು ಅಬ್ನೇರನನ್ನು, “ನೀನು ನನ್ನ ತಂದೆಯ ಉಪಪತ್ನಿಯನ್ನು ಕೂಡಿದ್ದೇಕೆ?” ಎಂದು ಕೇಳಿದನು.


ಪಶುಪ್ರಾಣಿಗಳು ನರಳುತ್ತಿವೆ; ದನಕರುಗಳು ಮೇವಿಲ್ಲದೆ ಕಂಗಾಲಾಗಿವೆ; ಕುರಿಮಂದೆಗಳು ಕೂಡ ಕಂಗೆಟ್ಟಿವೆ.


ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.


ನೀನು, ನಿನ್ನ ಸೇನೆ ಹಾಗು ಪರಿವಾರ ಇಸ್ರಯೇಲಿನ ಪರ್ವತಗಳಲ್ಲಿ ಬಿದ್ದುಬಿಡುವಿರಿ; ನಾನು ನಿಮ್ಮನ್ನು ಮಾಂಸಾಹಾರಿಗಳಾದ ಬಗೆಬಗೆಯ ಹಕ್ಕಿಗಳಿಗೂ ಭೂಜಂತುಗಳಿಗೂ ಆಹಾರ ಮಾಡುವೆನು. ನೀವು ಬಯಲಿನಲ್ಲೇ ಬೀಳುವಿರಿ.


ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.


ಅವನ ಮನೆಯಲ್ಲಿ ಒಂದು ತಿಂಗಳವರೆಗೆ ತನ್ನ ತಾಯಿತಂದೆಗಳ ವಿಯೋಗದ ನಿಮಿತ್ತ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.


ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಆಗುವುದು. ನಿಮ್ಮ ಭೂಮಿಗೆ ಬೇಕಾದ ಮುಂಗಾರು ಹಿಂಗಾರುಗಳನ್ನು ಅವರು ಸರಿಯಾಗಿ ಸುರಿಸುವರು.


“ಇಲ್ಲಿ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೆ, ಕಾಡಿನ ಮೃಗಗಳಿಗೆ ಹಂಚಿಕೊಡುತ್ತೇನೆ,” ಎಂದನು.


ಇನ್ನು ಮೂರು ದಿನದೊಳಗೆ ಫರೋಹನು ನಿನ್ನ ಕುತ್ತಿಗೆಗೆ ನೇಣುಹಾಕಿಸುವನು; ಮರಕ್ಕೆ ತೂಗುಹಾಕಿಸುವನು; ಹಕ್ಕಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವುವು,” ಎಂದನು.


ಅವರು ಈ ದಿನ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವರು. ನಾನು ನಿನ್ನನ್ನು ಕೊಂದು, ನಿನ್ನ ತಲೆಯನ್ನು ಕಡಿದು, ಫಿಲಿಷ್ಟಿಯ ಸೈನ್ಯದ ಶವಗಳನ್ನು ಆಕಾಶದ ಪಕ್ಷಿಗಳಿಗೂ ವನ್ಯಮೃಗಗಳಿಗೂ ಹಂಚಿಕೊಡುವೆನು. ಇದರಿಂದ ಇಸ್ರಯೇಲರ ಸಂಗಡ ದೇವರಿದ್ದಾರೆಂಬುದು ಜಗತ್ತಿಗೆಲ್ಲಾ ತಿಳಿದುಬರುವುದು.


ಅಯ್ಯಾಹನ ಮಗಳೂ ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡಿದ ಈ ಕಾರ್ಯವನ್ನು ದಾವೀದನಿಗೆ ತಿಳಿಸಲಾಯಿತು.


“ಮರಣಶಿಕ್ಷೆಗೆ ಪಾತ್ರನಾದ ಅಪರಾಧಿಯನ್ನು ಗಲ್ಲುಮರಕ್ಕೇರಿಸಿದ ಮೇಲೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು