Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:21 - ಕನ್ನಡ ಸತ್ಯವೇದವು C.L. Bible (BSI)

21 ಮತ್ತೊಮ್ಮೆ ಬಲಿಷ್ಠನಾದ ಒಬ್ಬ ಈಜಿಪ್ಟಿನವನನ್ನು ಕೊಂದನು. ಆ ಈಜಿಪ್ಟಿನವನ ಕೈಯಲ್ಲಿ ಒಂದು ಭರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಭರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನೇ ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮತ್ತೊಮ್ಮೆ ಉನ್ನತನಾದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿ ಒಂದು ಬರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮತ್ತೊಮ್ಮೆ ಉನ್ನತನಾದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿ ಒಂದು ಬರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬೆನಾಯನು ವೀರಯೋಧನಾದ ಈಜಿಪ್ಟಿನವನೊಬ್ಬನನ್ನು ಕೊಂದನು. ಈಜಿಪ್ಟಿನವನ ಕೈಯಲ್ಲಿ ಒಂದು ಬರ್ಜಿಯಿತ್ತು. ಬೆನಾಯನ ಕೈಯಲ್ಲಿ ಒಂದು ಲಾಠಿ ಮಾತ್ರವೇ ಇದ್ದಿತು. ಬೆನಾಯನು ಈಜಿಪ್ಟಿನವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಆ ಬರ್ಜಿಯಿಂದಲೇ ಅವನನ್ನು ಕೊಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನು ಬಲಿಷ್ಠನಾದ ಒಬ್ಬ ಈಜಿಪ್ಟಿನವನನ್ನು ಹೊಡೆದುಬಿಟ್ಟನು. ಆ ಈಜಿಪ್ಟಿನವನ ಕೈಯಲ್ಲಿ ದಪ್ಪವಾದ ಒಂದು ಈಟಿ ಇದ್ದರೂ, ತಾನು ಒಂದು ಕೋಲು ಹಿಡಿದುಕೊಂಡು ಅವನ ಬಳಿಗೆ ಹೋಗಿ ಈಜಿಪ್ಟಿನವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು, ಅವನ ಈಟಿಯಿಂದಲೇ ಅವನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:21
5 ತಿಳಿವುಗಳ ಹೋಲಿಕೆ  

ಬಲಾಢ್ಯ ಒಡೆಯರನ್ನೂ ಅಧಿಕಾರಿಗಳನ್ನೂ ನಿರಾಯುಧರನ್ನಾಗಿ ಮಾಡಿ, ತಾವು ಗಳಿಸಿದ ಜಯದ ನಿಮಿತ್ತ ಜನರೆಲ್ಲರ ಮುಂದೆ ಶಿಲುಬೆಯ ವಿಜಯೋತ್ಸವದಲ್ಲಿ ಅವರನ್ನು ಸೆರೆಯಾಳುಗಳನ್ನಾಗಿ ಪ್ರದರ್ಶಿಸಿದ್ದಾರೆ.


ಇನ್ನೊಮ್ಮೆ ಏಳುವರೆ ಅಡಿ ಎತ್ತರದ, ಅತೀ ಬಲವಾದ ಈಟಿಯನ್ನು ಹೊಂದಿದ್ದ, ಬಲಾಢ್ಯನಾದ ಈಜಿಪ್ಟನೊಬ್ಬನನ್ನು ಸೋಲಿಸಿದನು. ಆ ಈಜಿಪ್ಟಿನವನ ಕೈಯಲ್ಲಿ ಬಲವಾದ ಈಟಿ ಇತ್ತು. ಇವನಾದರೋ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ, ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದಲೇ ಅವನನ್ನು ಸಂಹರಿಸಿದನು.


ಹೀಗೆ ದಾವೀದನು ಕತ್ತಿಯಿಂದಲ್ಲ, ಬರೀ ಒಂದು ಕವಣೆಕಲ್ಲಿನಿಂದ ಆ ಫಿಲಿಷ್ಟಿಯನನ್ನು ಸೋಲಿಸಿ ಕೊಂದುಹಾಕಿದನು. ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಫಿಲಿಷ್ಟಿಯರು ಓಡಿಹೋದರು.


ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ನಡೆಸಿದ್ದನು. ಉದಾಹರಣೆಗೆ: ಒಮ್ಮೆ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಬ್ಬ ಹಿಮಕಾಲದಲ್ಲಿ ಸಿಂಹವೊಂದು ಗುಂಡಿಯಲ್ಲಿ ಬಿದ್ದಿತ್ತು. ಇವನು ಆ ಗುಂಡಿಗೆ ಇಳಿದುಹೋಗಿ ಅದನ್ನು ಕೊಂದನು.


ಈ ಪರಾಕ್ರಮ ಕೃತ್ಯದಿಂದ ಯೆಹೋಯಾದಾವನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು