Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:7 - ಕನ್ನಡ ಸತ್ಯವೇದವು C.L. Bible (BSI)

7 ಬಳಸಬೇಕು ಕಬ್ಬಿಣದಾಯುಧವನು, ಮೊನೆ ಭರ್ಜಿಯನು, ಇಲ್ಲವೆ ಸುಡಬೇಕು ಇದ್ದಲ್ಲೇ ಬೆಂಕಿಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕಬ್ಬಿಣದ ಆಯುಧವನ್ನೂ, ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು. ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟುಹೋಗುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕಬ್ಬಿಣದ ಆಯುಧವನ್ನೂ ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು; ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟು ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಒಬ್ಬ ವ್ಯಕ್ತಿಯು ಅವುಗಳನ್ನು ಮುಟ್ಟಿದರೆ, ಅವು ಮರದ ಮತ್ತು ಕಬ್ಬಿಣದ ಕತ್ತಿಗಳಿಂದ ಚುಚ್ಚಿದಂತಾಗುತ್ತದೆ. ಆ ಜನರು ಮುಳ್ಳುಗಳಂತಿದ್ದಾರೆ. ಅವರನ್ನು ಬೆಂಕಿಯಲ್ಲಿ ಎಸೆದು ಸಂಪೂರ್ಣವಾಗಿ ಸುಟ್ಟುಬಿಡುವರು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮುಳ್ಳುಗಳನ್ನು ಮುಟ್ಟುವವರು ಕಬ್ಬಿಣದ ಆಯುಧ ಉಪಯೋಗಿಸುವರು, ಇಲ್ಲವೆ ಈಟಿಯ ಮೊನೆಯನ್ನು ಉಪಯೋಗಿಸುವರು. ಅವು ಬೀಳುವ ಸ್ಥಳದಲ್ಲಿ ಸುಟ್ಟುಹೋಗುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:7
14 ತಿಳಿವುಗಳ ಹೋಲಿಕೆ  

ಆದರೆ, ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ಅಪ್ರಯೋಜಕವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ; ಕೊನೆಗದು ಬೆಂಕಿಗೆ ತುತ್ತಾಗುತ್ತದೆ.


ಆಮೇಲೆ ಆ ಅಧರ್ಮಿ ಕಾಣಿಸಿಕೊಳ್ಳುವನು. ಅವನನ್ನು ಪ್ರಭು ಯೇಸು ತಮ್ಮ ಬಾಯುಸಿರಿನಿಂದಲೇ ಕೊಂದುಹಾಕುವರು; ತಮ್ಮ ಪ್ರತ್ಯಕ್ಷತೆಯ ತೇಜಸ್ಸಿನಿಂದಲೇ ತರಿದುಬಿಡುವರು.


ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು.


“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”


ಅವನ ನಾಡಿಗರಾದರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮಗೆ ರಾಜನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ತಮ್ಮ ಪ್ರತಿನಿಧಿಗಳನ್ನು ಕಳುಹಿಸಿದರು.


ಮತ್ತು ದುಷ್ಕರ್ಮಿಗಳೆಲ್ಲರನ್ನೂ ಒಟ್ಟುಗೂಡಿಸಿ ಅಗ್ನಿಕುಂಡದಲ್ಲಿ ಹಾಕುವರು; ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.


ಇದರ ಬಗ್ಗೆ ನನಗೆ ಇನ್ನಿಲ್ಲ ರೌದ್ರ, ಇದರೊಳಗಿಲ್ಲ ಮುಳ್ಳುಕಳ್ಳಿಗಳ ಗಹ್ವರ, ಇದ್ದಿದ್ದರೆ ಸುಟ್ಟು ಭಸ್ಮ ಮಾಡುತ್ತಿದ್ದೆ ಹೂಡಿ ಸಮರ.


ಸುಗ್ಗಿಯವರೆಗೆ ಎರಡೂ ಒಟ್ಟಿಗೆ ಬೆಳೆಯಲಿ; ಸುಗ್ಗಿಯ ಕಾಲದಲ್ಲಿ ಮೊದಲು ಕಳೆ ಕಿತ್ತು, ಸುಟ್ಟುಹಾಕಲು ಕಟ್ಟಿಡಿ; ಬಳಿಕ ಗೋದಿಯನ್ನು ಒಕ್ಕಣೆಮಾಡಿ ನನ್ನ ಕಣಜಕ್ಕೆ ತುಂಬಿರಿ, ಎಂದು ಕೊಯ್ಲುಗಾರರಿಗೆ ಹೇಳುತ್ತೇನೆ,’ ಎಂದ.”


ನೀವು ಸುಟ್ಟ ಸುಣ್ಣದಂತಾಗುವಿರಿ.


“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿ ವಂಶದವರು; ಅವರ ಬಿರುನುಡಿಗೆ ದಿಗಿಲು ಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು.


ನಿರ್ಮೂಲಮಾಡುವೆ ನೀನವರ ಸಂತಾನವನು ಧರೆಯಿಂದ I ಕುಡಿಯಿಲ್ಲದಾಗಿಸುವೆ ಅವರನು ಮಾನವರ ಮಧ್ಯದಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು