13 ಆಗ ಗಾದನು ದಾವೀದನ ಬಳಿಗೆ ಬಂದು, “ನಿಮ್ಮ ನಾಡಿನಲ್ಲಿ ಏಳು ವರ್ಷಗಳ ಬರಗಾಲ ಉಂಟಾಗಬೇಕೋ, ಇಲ್ಲವೇ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳ ತನಕ ನಿನ್ನನ್ನು ಓಡಿಸಿಬಿಡಬೇಕೋ, ಇಲ್ಲವೆ ನಿನ್ನ ನಾಡಿನಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವರಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು,” ಎಂದನು.
13 ಆಗ ಗಾದನು ದಾವೀದನ ಬಳಿಗೆ ಹೋಗಿ, “ನಿನ್ನ ದೇಶದಲ್ಲಿ ಏಳು ವರ್ಷಗಳು ಬರವು ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ನಿನ್ನಿಂದ ಪಡೆದು ತಿಳಿಸಲಿ? ಆಲೋಚಿಸಿ ಹೇಳು” ಎಂದನು.
13 ಆಗ ಗಾದನು ದಾವೀದನ ಬಳಿಗೆ ಹೋಗಿ - ನಿನ್ನ ದೇಶದಲ್ಲಿ ಏಳು ವರುಷಗಳ ಬರವು ಉಂಟಾಗಬೇಕೋ, ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳುಗಳವರೆಗೆ ಓಡಿಸಿ ಬಿಡಬೇಕೋ, ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು ಅಂದನು.
13 ಗಾದನು ದಾವೀದನ ಬಳಿಗೆ ಹೋಗಿ, “ಈ ಮೂರು ಶಿಕ್ಷೆಗಳಲ್ಲಿ ಒಂದನ್ನು ಆರಿಸಿಕೊ: ನಿನಗೆ ಮತ್ತು ನಿನ್ನ ದೇಶಕ್ಕೆ ಏಳು ವರ್ಷಗಳ ಕಾಲ ಬರಗಾಲ ಬರಬೇಕೇ? ಅಥವಾ ನಿನ್ನ ಶತ್ರುಗಳು ನಿನ್ನನ್ನು ಮೂರು ತಿಂಗಳ ಕಾಲ ಅಟ್ಟಿಸಬೇಕೇ? ಅಥವಾ ಮೂರು ದಿನಗಳ ಕಾಲ ನಿನ್ನ ದೇಶದಲ್ಲಿ ರೋಗರುಜಿನಗಳು ವ್ಯಾಪಿಸಬೇಕೇ? ಇವುಗಳ ಬಗ್ಗೆ ಯೋಚಿಸು, ನನ್ನನ್ನು ಕಳುಹಿಸಿದ ಯೆಹೋವನಿಗೆ ನಾನು ಏನು ಹೇಳಬೇಕೆಂಬುದನ್ನು ನೀನು ತೀರ್ಮಾನಿಸು” ಎಂದು ಹೇಳಿದನು.
13 ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನಿನ್ನ ದೇಶದಲ್ಲಿ ಮೂರು ವರುಷ ಕ್ಷಾಮ ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಬೆನ್ನಟ್ಟಿ ಮೂರು ತಿಂಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ಮೂರು ದಿವಸಗಳವರೆಗೆ ಘೋರವ್ಯಾಧಿ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದವರಿಗೆ ನಾನು ಏನು ಉತ್ತರ ತೆಗೆದುಕೊಂಡು ಹೋಗಬೇಕು? ಯೋಚಿಸಿನೋಡು,” ಎಂದನು.
‘ಮೂರು ವರ್ಷಗಳ ಕಾಲ ಕ್ಷಾಮ ಉಂಟಾಗಬೇಕೋ? ಇಲ್ಲವೆ ಮೂರು ತಿಂಗಳುಗಳವರೆಗೆ ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ? ಇಲ್ಲವೆ ಇಸ್ರಯೇಲರ ಸಮಸ್ತ ಪ್ರಾಂತ್ಯಗಳಿಗೆ ಸರ್ವೇಶ್ವರ ಕಳುಹಿಸುವ ಸಂಹಾರಕ ದೂತನಿಂದ ಉಂಟಾಗುವ ಮೂರು ದಿನಗಳ ಘೋರ ವ್ಯಾಧಿರೂಪವಾದ ಸರ್ವೇಶ್ವರನ ಶಿಕ್ಷೆ ಬೇಕೋ? ಈ ಮೂರರಲ್ಲಿ ಒಂದನ್ನು ಆರಿಸಿಕೋ’ ನನ್ನನ್ನು ಕಳುಹಿಸಿದವರಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು,” ಎಂದು ಹೇಳಿದನು.
ದಾವೀದನ ಕಾಲದಲ್ಲಿ ಮೂರು ವರ್ಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದಾಗ, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೂ ಅವನ ಮನೆಯವರ ಮೇಲೂ ರಕ್ತಾಪರಾಧ ಇರುತ್ತದೆ,” ಎಂಬ ಉತ್ತರ ದೊರಕಿತು.
ಶತ್ರುಗಳ ಕತ್ತಿಯ ಮೂಲಕ ನಿಮ್ಮನ್ನು ಸಂಹರಿಸುವೆನು.ನೀವು ನನ್ನ ನಿಬಂಧನವನ್ನು ಮೀರಿದುದರಿಂದ ಆ ಕತ್ತಿ ಪ್ರತಿದಂಡನೆ ಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ಅಂಟುರೋಗವುಂಟಾಗುವಂತೆ ಮಾಡುವೆನು. ಹೀಗೆ ನೀವು ಶತ್ರುಗಳಿಗೆ ಶರಣಾಗುವಿರಿ.
ಹಿಂದೆ ನಡೆದ ಒಂದು ಸಂಗತಿಯನ್ನು ಕೇಳಿ: ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಕ್ಷಾಮ ಬಂದೊದಗಿತ್ತು. ಆಗ ಇಸ್ರಯೇಲ್ ನಾಡಿನಲ್ಲಿ ಎಷ್ಟೋ ಮಂದಿ ವಿಧವೆಯರಿದ್ದರು.
“ನರಪುತ್ರನೇ, ಒಂದು ನಾಡು ಅಪರಾಧವನ್ನು ನಡೆಸಿ ನನಗೆ ವಿರುದ್ಧ ಪಾಪಮಾಡಿದ ಮೇಲೆ ನಾನು ಕೈಯೆತ್ತಿ, ಅದರ ಜೀವನಾಧಾರವನ್ನು ನಿಲ್ಲಿಸಿಬಿಟ್ಟು, ಕ್ಷಾಮವನ್ನು ಬರಮಾಡಿ, ಜನ ಹಾಗೂ ಜಾನುವಾರುಗಳನ್ನು ಅದರಿಂದ ನಿರ್ಮೂಲಮಾಡುತ್ತೇನೆ.
ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.
ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರ ಇವುಗಳಿಂದಲೂ, ನಾಡನ್ನು ಕ್ಷಾಮದಿಂದಲೂ, ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ಪೀಡಿಸುವರು. ನೀವು ಸಾಯುವ ತನಕ ಈ ಪೀಡೆಗಳು ನಿಮ್ಮನ್ನು ಬೆನ್ನತ್ತುವುವು.
“ನೀನು ದಾವೀದನ ಹತ್ತಿರ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ; ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಅದನ್ನು ಆರಿಸಿಕೋ,’ ಎಂದು ಸರ್ವೇಶ್ವರ ನುಡಿಯುತ್ತಾರೆ ಎಂದು ಹೇಳು,” ಎಂದು ಆಜ್ಞಾಪಿಸಿದರು.
ಈಗ ಮಾಡಬೇಕಾದುದ್ದನ್ನು ನೀವೇ ಆಲೋಚಿಸಿ ತೀರ್ಮಾನಿಸಿ. ನಮ್ಮ ಯಜಮಾನರಿಗೂ ಅವರ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ; ಮಂದಮತಿಯಾದ ಅವರೊಡನೆ ಮಾತಾಡುವುದು ಅಸಾಧ್ಯ,” ಎಂದು ಹೇಳಿದನು.
ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಸರ್ವೇಶ್ವರಸ್ವಾಮಿ ಈ ನಾಡಿಗೆ ಏಳು ವರ್ಷಗಳ ಬರಗಾಲವನ್ನು ಕಳುಹಿಸಲಿದ್ದಾರೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು,” ಎಂದು ಭವಿಷ್ಯ ಹೇಳಿದನು.