Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:22 - ಕನ್ನಡ ಸತ್ಯವೇದವು C.L. Bible (BSI)

22 ಆಗ ಅರೌನನು ದಾವೀದನಿಗೆ, “ನನ್ನ ಒಡೆಯರಾದ ಅರಸರು ತಮಗೆ ಇಷ್ಟವಾದುದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ; ಇಲ್ಲಿ ಬಲಿದಾನಕ್ಕೆ ಹೋರಿಗಳೂ, ಸೌದೆಗೆ ಹಂತೀಕುಂಟೆ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಅರೌನನು ದಾವೀದನಿಗೆ, “ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ, ಇಲ್ಲಿ ಯಜ್ಞಕ್ಕೆ ಹೋರಿಗಳೂ, ಸೌದೆಗೆ ನೊಗ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಅರೌನನು ದಾವೀದನಿಗೆ - ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ; ಇಲ್ಲಿ ಯಜ್ಞಕ್ಕೆ ಹೋರಿಗಳೂ ಸೌದೆಗೆ ಹಂತೀಕುಂಟೆ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅರೌನನು ದಾವೀದನಿಗೆ, “ರಾಜನಾದ ನನ್ನ ಒಡೆಯನೇ, ಯಜ್ಞವನ್ನು ಸಮರ್ಪಿಸಲು ನೀನು ಏನನ್ನು ಬೇಕಾದರೂ ತೆಗೆದುಕೊ. ಸರ್ವಾಂಗಹೋಮವನ್ನು ಅರ್ಪಿಸಲು ಇಲ್ಲಿ ಕೆಲವು ಹೋರಿಗಳಿವೆ, ನೊಗ ಮುಂತಾದ ಮರದ ಸಲಕರಣೆಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅರೌನನು ದಾವೀದನಿಗೆ, “ಅರಸನಾದ ನನ್ನ ಒಡೆಯನು ಅದನ್ನು ತೆಗೆದುಕೊಂಡು, ತನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಅರ್ಪಿಸಲಿ. ದಹನಬಲಿಗೋಸ್ಕರ ಎತ್ತುಗಳೂ, ಸೌದೆಗೆ ಹಂತೀಕುಂಟೆ ಮುಂತಾದವುಗಳು ಇಲ್ಲಿ ಇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:22
5 ತಿಳಿವುಗಳ ಹೋಲಿಕೆ  

ಎಲೀಷನು ಹಿಂದಿರುಗಿಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ವಧಿಸಿ ಮಾಂಸವನ್ನು ನೊಗದ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಶಿಷ್ಯನಾದನು.


ಆ ಬಂಡಿ ಬೇತ್‍ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ಒಂದು ದೊಡ್ಡ ಕಲ್ಲಿನ ಬಳಿ ಬಂದು ನಿಂತಿತು. ಅವರು ಅಲ್ಲಿಗೆ ಹೋಗಿ, ಬಂಡಿಯ ಕಟ್ಟಿಗೆಗಳನ್ನು ಮುರಿದು, ಅಗ್ನಿ ಮಾಡಿ ಆ ಹಸುಗಳನ್ನು ಸರ್ವೇಶ್ವರನಿಗೆ ದಹನಬಲಿಯಾಗಿ ಅರ್ಪಿಸಿದರು.


ದಾವೀದನು ಅವನಿಗೆ, “ನಿನ್ನ ಕಣವನ್ನೂ ಭೂಮಿಯನ್ನೂ ನನಗೆ ಕೊಡು; ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ಅದರಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸುತ್ತೇನೆ; ಪೂರ್ಣ ಕ್ರಯ ತೆಗೆದುಕೊಂಡು ಅದನ್ನು ಕೊಡು,” ಎಂದು ಹೇಳಿದನು.


“ಒಡೆಯಾ, ನನ್ನ ಮಾತಿಗೆ ಸ್ವಲ್ಪ ಕಿವಿಗೊಡಿ; ಆ ಜಮೀನನ್ನೂ ಅದರಲ್ಲಿರುವ ಗವಿಯನ್ನೂ ನಿಮಗೆ ದಾನಮಾಡಿಬಿಡುತ್ತೇನೆ; ನನ್ನ ಈ ಜನರ ಮುಂದೆಯೇ ದಾನಕೊಡುತ್ತೇನೆ; ಮೃತಳಾದ ನಿಮ್ಮ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು,” ಎಂದು ಹೇಳಿದನು.


ಈ ಗುಡ್ಡದ ಶಿಖರದಲ್ಲಿ ಸರ್ವೇಶ್ವರನಿಗಾಗಿ ನೇಮಕವಾದ ರೀತಿಯಿಂದ ಒಂದು ಬಲಿಪೀಠವನ್ನು ಕಟ್ಟಿಸು. ನೀನು ಕಡಿದುಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ ಆ ಎರಡನೆ ಹೋರಿಯನ್ನು ದಹನ ಬಲಿಯಾಗಿ ಸಮರ್ಪಿಸು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು