Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:1 - ಕನ್ನಡ ಸತ್ಯವೇದವು C.L. Bible (BSI)

1 ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಬಹುದಿನಗಳವರೆಗೆ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶ ದುರ್ಬಲವಾಗುತ್ತಾ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬಹು ದಿನಗಳವರೆಗೆ ಸೌಲನ ವಂಶದವರಿಗೂ ಮತ್ತು ದಾವೀದನ ವಂಶದವರಿಗೂ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶವು ದುರ್ಬಲವಾಗುತ್ತಾ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬಹುದಿವಸಗಳವರೆಗೆ ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧನಡೆದಿತ್ತು. ದಾವೀದನು ಬಲಗೊಳ್ಳುತ್ತಾ ಬಂದನು, ಸೌಲನ ವಂಶವು ದುರ್ಬಲವಾಗುತ್ತಾ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸೌಲನ ವಂಶದವರ ಮತ್ತು ದಾವೀದನ ವಂಶದವರ ಮಧ್ಯೆ ಬಹಳ ಕಾಲದವರೆಗೆ ಯುದ್ಧವು ನಡೆಯಿತು. ದಾವೀದನು ಬಲಗೊಳ್ಳುತ್ತಲೇ ಇದ್ದನು. ಸೌಲನ ವಂಶವು ದುರ್ಬಲಗೊಳ್ಳುತ್ತಲೇ ಇದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸೌಲನ ಕುಟುಂಬದವರಿಗೂ ದಾವೀದನ ಕುಟುಂಬದವರಿಗೂ ಬಹು ದಿವಸ ಯುದ್ಧವು ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಆದರೆ ಸೌಲನ ಕುಟುಂಬದವರು ಬಲಹೀನರಾಗುತ್ತಾ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:1
26 ತಿಳಿವುಗಳ ಹೋಲಿಕೆ  

ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.


ಆಗ ನಿನ್ನ ಭವಿಷ್ಯ ಎಷ್ಟು ಉಜ್ವಲವಾಗಿರುತ್ತದೆಂದರೆ ನಿನ್ನ ಮೊದಲಿನ ಸ್ಥಿತಿ ಕೂಡ ಅತ್ಯಲ್ಪವಾಗಿ ಕಾಣುವುದು ನಿನಗೆ.


ಅನಂತರ ಆ ದಿವಸ ಘೋರಯುದ್ಧ ನಡೆಯಿತು. ಅಬ್ನೇರನನ್ನೂ ಇಸ್ರಯೇಲರನ್ನೂ ದಾವೀದನ ಸೇವಕರು ಸೋಲಿಸಿದರು.


ನಮ್ಮ ಹೋರಾಟ ಕೇವಲ ನರಮಾನವರೊಂದಿಗಲ್ಲ, ದಿಗಂತದಲ್ಲಿರುವ ಅಧಿಕಾರಿಗಳ ಹಾಗೂ ಆಧಿಪತ್ಯಗಳ ವಿರುದ್ಧ; ಪ್ರಸ್ತುತ ಅಂಧಕಾರಲೋಕಾಧಿಪತಿಗಳ ಹಾಗೂ ಅಶರೀರ ದುಷ್ಟಗಣಗಳ ವಿರುದ್ಧ.


ಸಾಗುಸಾಗುತ್ತಾ ಬೆಳೆವುದಾ ಯಾತ್ರಿಕರ ಚೇತನ I ಪಡೆವರು ಸಿಯೋನ್ ಗಿರಿಯೊಳು ದೇವಾಧಿದೇವನ ದರ್ಶನ II


ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು.


ಏಕೆಂದರೆ, ದೈಹಿಕ ವ್ಯಾಮೋಹವು ಪವಿತ್ರಾತ್ಮರಿಗೆ ವಿರುದ್ಧವಾಗಿದೆ. ಪವಿತ್ರಾತ್ಮ ಆ ವ್ಯಾಮೋಹಕ್ಕೆ ವಿರುದ್ಧವಾಗಿದ್ದಾರೆ. ಇವೆರಡೂ ಒಂದಕ್ಕೊಂದು ಕಾದಾಡುವುದರಿಂದ ನಿಮ್ಮ ಬಯಕೆ ಕೈಗೂಡುವುದಿಲ್ಲ.


ತನ್ನ ಪತ್ನಿ ಜೆರೆಷಳಿಗೂ ಎಲ್ಲಾ ಆಪ್ತರಿಗೂ ತನಗೆ ಸಂಭವಿಸಿದುದನ್ನೆಲ್ಲಾ ವರದಿಮಾಡಿದನು. ಆಗ ಅವನ ಪಂಡಿತರೂ ಪತ್ನಿಯೂ ಅವನಿಗೆ, “ಯಾವನಿಂದ ನಿಮ್ಮ ಪತನವು ಪ್ರಾರಂಭವಾಯಿತೋ ಆ ವ್ಯಕ್ತಿ ಒಂದು ವೇಳೆ ಯೆಹೂದ್ಯನಾಗಿದ್ದರೆ, ನೀವು ಅವನನ್ನೆಂದಿಗೂ ಜಯಿಸಲಾರಿರಿ. ಅವನ ಮುಂದೆ ಬಿದ್ದು ಹಾಳಾಗುವಿರಿ,” ಎಂದು ಎಚ್ಚರವಿತ್ತರು.


ಆಸನಿಗೂ ಇಸ್ರಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.


ಇವನಿಗೂ ಇಸ್ರಯೇಲರ ಅರಸ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ಆಗ ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ಬಿಲ್ಲೊಂದು ಇತ್ತು. ಅವನಿಗೆ ಜಯಮಾಲೆಯನ್ನು ಹಾಕಲಾಗಿತ್ತು. ಅವನು ಜಯಪ್ರದನಾಗಿ, ಜಯದ ಮೇಲೆ ಜಯಗಳಿಸುವ ಸಲುವಾಗಿ ಹೊರಟುಹೋದನು.


ಕೂಡಲೆ ತುತೂರಿಯನ್ನು ಊದಿಸಿದನು. ಆಗ ಜನರು ಇಸ್ರಯೆಲರನ್ನು ಹಿಂದಟ್ಟದೆ ಬಿಟ್ಟರು. ಯುದ್ಧವು ನಿಂತುಹೋಯಿತು.


ಸೇನಾಧೀಶ್ವರ ಹಾಗು ಸರ್ವೇಶ್ವರರಾದ ದೇವರು ಅವನೊಂದಿಗೆ ಇದ್ದರು. ಆದ್ದರಿಂದ ಅವನು ಅಭಿವೃದ್ಧಿಹೊಂದುತ್ತಾ ಬಂದನು.


ನನ್ನ ಜನರ ಒಳಕಲಹದಿಂದೆನ್ನ ನೀ ತಪ್ಪಿಸಿದೆ ನನ್ನನುಳಿಸಿ ಜನಾಂಗಗಳಿಗೆ ಜನಪನಾಗಿಸಿದೆ ನಾನರಿಯದ ಜನರನ್ನೂ ನನಗಧೀನರನ್ನಾಗಿಸಿದೆ.


ಸರ್ವಶಕ್ತ ಸರ್ವೇಶ್ವರಸ್ವಾಮಿ ದಾವೀದನೊಂದಿಗೆ ಇದ್ದುದರಿಂದ ಅವನು ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದಿದನು.


ಆದುದರಿಂದ ಸಕಲ ಸಂಸ್ಥಾನಾಧಿಕಾರಿಗಳೂ ಉಪರಾಜರೂ ದೇಶಾಧಿಪತಿಗಳೂ ಮತ್ತು ಇತರ ರಾಜಸೇವಕರೂ ಅವನಿಗೆ ಭಯಪಟ್ಟು ಯೆಹೂದ್ಯರಿಗೆ ನೆರವಾದರು.


ಜನರ ಒಳಕಲಹದಿಂದೆನ್ನ ನೀ ತಪ್ಪಿಸಿದೆ I ನನ್ನನುಳಿಸಿ ಜನಾಂಗಗಳಿಗೆ ಜನಪನಾಗಿಸಿದೆ I ನಾನರಿಯದ ಜನರನೂ ನನಗಧೀನರನ್ನಾಗಿಸಿದೆ II


ಜಗದೆಲ್ಲೆಡೆ ಕದನ ಕಾಳಗ ನಿಲ್ಲಿಸಿಹನು I ಬಿಲ್ಲು ಭಲ್ಲೆಗಳನು ಮುರಿದು ಹಾಕಿದನು I ರಥಗಳನು ಬೆಂಕಿಯಿಂದ ಸುಟ್ಟುಹಾಕಿದನು II


ಸೌಲನ ಸೇನೆಗೂ ದಾವೀದನ ಸೇನೆಗೂ ಯುದ್ಧ ನಡೆಯುತ್ತಿದ್ದಾಗ ಸೌಲನ ವಂಶದವರಲ್ಲಿ ಅಬ್ನೇರನೇ ಪ್ರಬಲನಾಗಿದ್ದನು.


ದಾವೀದನು ಹೆಬ್ರೋನಿನಲ್ಲಿದ್ದಾಗ ಅವನಿಗೆ ಹುಟ್ಟಿದ ಗಂಡುಮಕ್ಕಳ ಹೆಸರುಗಳು ಇವು: ಅಮ್ನೋನ - ಜೆಸ್ರೀಲಿನ ಅಹೀನೋಮ ಇವನ ತಾಯಿ. ದಾನಿಯೇಲ - ಕರ್ಮೇಲಿನ ಆಬೀಗೈಲಳು ಇವನ ತಾಯಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು