Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:12 - ಕನ್ನಡ ಸತ್ಯವೇದವು C.L. Bible (BSI)

12 ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ, “ಈ ನಾಡು ಯಾರದು? ನೀನು ನನ್ನೊಡನೆ ಒಪ್ಪಂದ ಮಾಡಿಕೊಂಡರೆ ಇಸ್ರಯೇಲರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವೆನು. ಹಾಗು ನನ್ನ ಬೆಂಬಲ ನಿನಗಿರುವುದು,” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ದೇಶವು ಯಾರದು? ನೀನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡರೆ ಇಸ್ರಾಯೇಲರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವ ಪ್ರಯತ್ನದಲ್ಲಿ ನಾನು ನಿನ್ನ ಸಂಗಡ ಕೈಜೋಡಿಸುತ್ತೇನೆ” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ದೇಶವು ಯಾರದು? ನೀನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡರೆ ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವ ಹಾಗೆ ನನ್ನ ಹಸ್ತವು ನಿನ್ನ ಸಂಗಡ ಇರುವದು ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಬ್ನೇರನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿ, “ಈ ದೇಶವನ್ನು ಯಾರು ಆಳಬೇಕೆಂಬದು ನಿನ್ನ ಅಭಿಪ್ರಾಯ? ನನ್ನೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡರೆ, ಇಸ್ರೇಲಿನ ಜನರೆಲ್ಲರನ್ನು ನೀನು ಆಳುವಂತೆ ಮಾಡಲು ನಾನು ಸಹಾಯ ಮಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ತನ್ನ ದೂತರನ್ನು ಕಳುಹಿಸಿ, “ದೇಶವು ಯಾರದು? ಇದಲ್ಲದೆ ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು. ಆಗ ಇಗೋ, ಇಸ್ರಾಯೇಲರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವುದೆಂದು ಹೇಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:12
15 ತಿಳಿವುಗಳ ಹೋಲಿಕೆ  

ನರಮಾನವರೆಲ್ಲರು ಬರೇ ಉಸಿರು I ನರಾಧಿಪತಿಗಳು ತೀರಾ ಹುಸಿಯು I ತ್ರಾಸಿನಲಿ ತೂಗಲು ಅವರೆಲ್ಲರು I ಉಸಿರಿಗಿಂತಲೂ ಅತ್ಯಂತ ಹಗುರು II


ಆಗ ಇಸ್ರಯೇಲರೆಲ್ಲರು ಅರಸನ ಮುಂದೆ ಬಂದು, “ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೇ ಹೋಗಿ ಅರಸರನ್ನೂ ಅವರ ಮನೆಯವರನ್ನೂ ಅವರೊಡನೆ ಇದ್ದ ಜನರನ್ನೂ ಜೋರ್ಡನ್ ನದಿದಾಟಿಸಿ ಕರೆದುಕೊಂಡು ಬಂದದ್ದೇಕೆ?” ಎಂದು ಕೇಳಿದರು.


ಆಗ ಯೆಹೂದ್ಯರೆಲ್ಲರೂ ಏಕ ಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, ” ನೀವು ನಿಮ್ಮ ಎಲ್ಲಾ ಸೇವಕರೊಡನೆ ಮರಳಿ ಬನ್ನಿ,” ಎಂದು ಹೇಳಿಕಳುಹಿಸಿದರು.


ನೀವು ಶತ್ರುಗಳನ್ನು ಪ್ರೀತಿಸುವವರೂ ಮಿತ್ರರನ್ನು ದ್ವೇಷಿಸುವವರೂ ಆಗಿದ್ದೀರಿ; ನೀವು ನಿಮ್ಮ ಸೇನಾಧಿಪತಿಗಳನ್ನೂ ಸೈನಿಕರನ್ನೂ ಲಕ್ಷಿಸುವವರಲ್ಲವೆಂದು ಈಗ ತೋರಿಸಿಕೊಟ್ಟಿರಿ. ಈ ದಿನ ನಾವೆಲ್ಲರೂ ಸತ್ತು ಅಬ್ಷಾಲೋಮನೊಬ್ಬನೇ ಉಳಿದಿದ್ದರೆ ನಿಮಗೆ ಸಂತೋಷವಾಗುತ್ತಿತ್ತೆಂದು ಇದರಿಂದ ತಿಳಿಯಬೇಕಷ್ಟೆ!


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತಸಂಭಾಷಣೆಗಾಗಿಯೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ, ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದುಕೊಂದನು.


ಅಬ್ನೇರನು ದಾವೀದನಿಗೆ, “ನಾನು ಹೊರಟುಹೋಗಿ ಇಸ್ರಯೇಲರನ್ನೆಲ್ಲಾ ಕೂಡಿಸಿ ನನ್ನ ಒಡೆಯರಾದ ಅರಸರ ಬಳಿಗೆ ಕರೆದುಕೊಂಡು ಬರುವೆನು; ಅವರು ನಿಮ್ಮ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನ ಮಾಡಬಹುದು,” ಎಂದು ಹೇಳಿದನು. ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಕೊಟ್ಟನು.


ಈಷ್ಬೋಶೆತನು ಅವನಿಗೆ ಹೆದರಿ ಏನೂ ಉತ್ತರಕೊಡಲಾರದೆ ಹೋದನು.


ಅದಕ್ಕೆ ದಾವೀದನು, “ಒಳ್ಳೆಯದು, ನಿನ್ನ ಸಂಗಡ ಒಪ್ಪಂದಮಾಡಿಕೊಳ್ಳುತ್ತೇನೆ; ಆದರೆ ನೀನು ಒಂದು ಕಾರ್ಯವನ್ನು ಮಾಡಬೇಕು; ನನ್ನನ್ನು ನೋಡುವುದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರೆದುಕೊಂಡು ಬರಬೇಕು. ಹಾಗೆ ಕರೆದುಕೊಂಡು ಬಾರದಿದ್ದರೆ ನೀನು ನನ್ನ ಮುಖವನ್ನು ನೋಡಕೂಡದು,” ಎಂದು ಉತ್ತರಕೊಟ್ಟನು.


ಅರಸನು ತನ್ನ ಸೇವಕರಿಗೆ, “ಈ ದಿನ ಇಸ್ರಯೇಲರಲ್ಲಿ ಹತನಾದವನು ಒಬ್ಬ ಶ್ರೇಷ್ಠನಾಯಕ ಹಾಗು ಮಹಾಪುರುಷ ಆಗಿದ್ದನೆಂಬುದು ನಿಮಗೆ ಗೊತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು