Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:14 - ಕನ್ನಡ ಸತ್ಯವೇದವು C.L. Bible (BSI)

14 ಇದಲ್ಲದೆ, ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ, “ನಾನು ನೂರುಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದುಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು,” ಎಂಬುದಾಗಿ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದು ಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು” ಎಂಬುದಾಗಿ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮತ್ತು ಅವನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನಾನು ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದು ಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು ಎಂಬದಾಗಿ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ಸಂದೇಶಕರನ್ನು ಕಳುಹಿಸಿ, “ನನ್ನ ಹೆಂಡತಿಯಾದ ಮೀಕಲಳನ್ನು ನನ್ನ ಬಳಿಗೆ ಕಳುಹಿಸು. ಅವಳನ್ನು ನನಗೆ ಕೊಡುವುದಾಗಿ ಮಾತುಕತೆಯಾಗಿತ್ತು. ಅವಳನ್ನು ಪಡೆಯಲು ನಾನು ನೂರು ಜನ ಫಿಲಿಷ್ಟಿಯರನ್ನು ಕೊಂದಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದಾವೀದನು ಸೌಲನ ಮಗ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ಮೀಕಲಳನ್ನು ನನಗೆ ಒಪ್ಪಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:14
7 ತಿಳಿವುಗಳ ಹೋಲಿಕೆ  

ನೇಮಕವಾದ ದಿನಗಳು ಮುಗಿಯುವ ಮೊದಲೇ ತನ್ನ ಸೈನಿಕರೊಡನೆ ಹೊರಟು ಫಿಲಿಷ್ಟಿಯರ ದೇಶಕ್ಕೆ ಹೋಗಿ, ಅಲ್ಲಿನ ಇನ್ನೂರು ಮಂದಿಯನ್ನು ಕೊಂದು, ಮುಂದೊಗಲುಗಳನ್ನು ತಂದು ಅರಸನ ಅಳಿಯನಾಗಲು ಬೇಕಾಗಿದ್ದ ಲೆಕ್ಕಾಚಾರವನ್ನು ಪೂರ್ತಿ ಆಗಿ ಒಪ್ಪಿಸಿದನು. ಆಗ ಸೌಲನು ತನ್ನ ಮಗಳು ಮೀಕಲಳನ್ನು ದಾವೀದನಿಗೆ ಮದುವೆಮಾಡಿಕೊಟ್ಟನು.


ಆಗ ಅವನು, “ನೀವು ಹೋಗಿ ದಾವೀದನಿಗೆ, ‘ಅರಸರು ಯಾವ ದಕ್ಷಿಣೆಯನ್ನೂ ಬಯಸುವುದಿಲ್ಲ; ಆದರೆ ಅವರ ಶತ್ರುಗಳಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರುಮಂದಿಯ ಮುಂದೊಗಲನ್ನು ತಂದುಕೊಟ್ಟರೆ ಸಾಕೆನ್ನುತ್ತಾರೆ’ ಎಂದು ತಿಳಿಸಿರಿ,” ಎಂದು ಆಜ್ಞಾಪಿಸಿದನು. (ದಾವೀದನನ್ನು ಫಿಲಿಷ್ಟಿಯರ ಕೈಯಿಂದಲೇ ಕೊಲ್ಲಿಸಬೇಕೆಂಬುದು ಅವನ ಉದ್ದೇಶವಾಗಿತ್ತು.)


(ಸೌಲನ ಮಗನಾದ ಈಷ್ಬೋಶೆತನಿಗೆ ಆಗ ನಾಲ್ವತ್ತು ವರ್ಷ. ಇಸ್ರಯೇಲರನ್ನು ಆತ ಎರಡು ವರ್ಷ ಆಳಿದನು).ಯೆಹೂದ್ಯರು ಮಾತ್ರ ದಾವೀದನನ್ನೇ ಹಿಂಬಾಲಿಸಿದರು.


ಕ್ರಿಸ್ತಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭ ಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ.


ಈ ಮಧ್ಯೆ ಸೌಲನು, ದಾವೀದನ ಹೆಂಡತಿಯಾಗಿದ್ದ ಮೀಕಲಳೆಂಬ ತನ್ನ ಮಗಳನ್ನು ಗಲ್ಲೀಮ್ ಊರಿನ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆ ಮಾಡಿಕೊಟ್ಟಿದ್ದನು.


ಈಷ್ಬೋಶೆತನು ಲಯಿಷನ ಮಗನೂ ಆಕೆಯ ಗಂಡನೂ ಆದ ಪಲ್ಟೀಯೇಲನ ಮನೆಗೆ ಆಳುಗಳನ್ನು ಕಳುಹಿಸಿ ಆಕೆಯನ್ನು ಕರೆದು ತರಿಸಿದನು.


ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿ ನೋಡಿ ದಾವೀದನು ಸರ್ವೇಶ್ವರನ ಮುಂದೆ ನಲಿದಾಡುತ್ತಾ ಕುಣಿಯುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲೇ ಅವನನ್ನು ತಿರಸ್ಕರಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು