Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:34 - ಕನ್ನಡ ಸತ್ಯವೇದವು C.L. Bible (BSI)

34 ನಿನ್ನ ಕೈ ಕಂಕಣಬದ್ಧವಾಗಿರಲಿಲ್ಲ, ನಿನ್ನ ಕಾಲಿಗೆ ಬೇಡಿ ಬಿದ್ದಿರಲಿಲ್ಲ, ದುಷ್ಟರಿಂದಲೋ ಎಂಬಂತೆ ನೀನು ಹತನಾದೆಯಲ್ಲಾ!” ಎಂದು ಶೋಕಗೀತೆಯನ್ನು ಹಾಡಿದನು. ಜನರು ಮತ್ತೆ ಕಣ್ಣೀರು ಸುರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನಿನ್ನ ಕೈಗಳು ಕಟ್ಟಲ್ಪಡಲಿಲ್ಲ. ನಿನ್ನ ಕಾಲುಗಳಿಗೆ ಬೇಡಿಗಳು ಹಾಕಿರಲಿಲ್ಲ. ನೀನು ದುಷ್ಟರಿಂದ ಹತನಾದಂತೆ ಹತನಾದಿ” ಎಂದು ಶೋಕಗೀತೆಯನ್ನು ಹಾಡಲು ಜನರು ತಿರುಗಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನಿನ್ನ ಕೈಗಳು ಕಟ್ಟಲ್ಪಡಲಿಲ್ಲ, ನಿನ್ನ ಕಾಲಿಗೆ ಬೇಡಿಗಳು ಬರಲಿಲ್ಲ; ನೀನು ದುಷ್ಟರಿಂದಲೋ ಎಂಬಂತೆ ಹತನಾದಿ ಎಂದು ಶೋಕಗೀತವನ್ನು ಹಾಡಲು ಜನರು ತಿರಿಗಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅಬ್ನೇರನೇ, ನಿನ್ನ ಕೈಗಳನ್ನು ಹಗ್ಗದಿಂದ ಬಿಗಿದಿರಲಿಲ್ಲ. ನಿನ್ನ ಪಾದಗಳಿಗೆ ಸಂಕೋಲೆಯನ್ನು ತೊಡಿಸಿರಲಿಲ್ಲ. ದುಷ್ಟಜನರೆದುರು ನೀನು ಬಿದ್ದೆಯಲ್ಲ, ನೀನು ಬಿದ್ದು ಸತ್ತೆಯಲ್ಲ.” ಆಗ ಜನರೆಲ್ಲರೂ ಅಬ್ನೇರನಿಗಾಗಿ ಮತ್ತೆ ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನಿನ್ನ ಕೈಗಳು ಕಟ್ಟಿರಲಿಲ್ಲ. ನಿನ್ನ ಕಾಲಿಗೆ ಬೇಡಿ ಹಾಕಿರಲಿಲ್ಲ. ಒಬ್ಬನು ದುಷ್ಟರ ಮುಂದೆ ಬೀಳುವ ಹಾಗೆಯೇ ನೀನು ಬಿದ್ದು ಹೋದೆ.” ಆಗ ಜನರೆಲ್ಲರು ತಿರುಗಿ ಅವನಿಗೋಸ್ಕರ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:34
8 ತಿಳಿವುಗಳ ಹೋಲಿಕೆ  

ದರೋಡೆಗಾರರು ದಾರಿಹೋಕರಿಗಾಗಿ ಹೊಂಚುಹಾಕುವಂತೆ ಯಾಜಕರು ಗುಂಪುಗೂಡಿ ಹೊಂಚುಹಾಕುತ್ತಾ, ಶೆಖೆಮಿಗೆ ಯಾತ್ರೆಹೋಗುವವರನ್ನು ಕೊಂದುಹಾಕುತ್ತಾರೆ. ಅವರು ಮಾಡುವುದು ನಿಜಕ್ಕೂ ಘೋರಕೃತ್ಯ.


ಕೊಲೆಪಾತಕ ಏಳುತ್ತಾನೆ ಮುಂಜಾನೆಯೇ ದೀನದಲಿತರನ್ನು ಕೊಂದುಹಾಕುತ್ತಾನೆ ರಾತ್ರಿಯಲ್ಲಿ ವರ್ತಿಸುತ್ತಾನೆ ಕಳ್ಳನಂತೆ.


ದಾವೀದನೂ ಅವನ ಜನರೂ ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಗೋಳಾಡಿದರು. ಸಾಯಂಕಾಲದವರೆಗೆ ಉಪವಾಸಮಾಡಿದರು.


ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಾಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಬೀಸುವುದಕ್ಕೆ ಹಚ್ಚಿದರು.


ದಾವೀದನು ಅಬ್ನೇರನನ್ನು ಕುರಿತು, “ಅಬ್ನೇರನೇ, ಮೂರ್ಖರಿಗಾಗುವಂತೆ ನಿನಗೆ ದುರ್ಮರಣವಾಯಿತೇ!


ಸೂರ್ಯಾಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಳುಗುವ ಮೊದಲು ನಾನು ರೊಟ್ಟಿಯನ್ನಾಗಲಿ ಬೇರೆ ಯಾವ ಆಹಾರವನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದು ಮಾಡಲಿ,” ಎಂದು ಆಣೆಯಿಟ್ಟು ಹೇಳಿದನು.


ಪ್ರಲಾಪಿಸುವವರು ಈ ಶೋಕಗೀತವನ್ನು ಹಾಡಲಿ; ಜನಾಂಗಗಳ ಯುವತಿಯರು ಹೀಗೆ ಗೋಳಿಡಲಿ; ಈಜಿಪ್ಟಿಗಾಗಿಯೂ ಅಲ್ಲಿನ ಬಹುಪ್ರಜೆಗಾಗಿಯೂ ದುಃಖಿಸಿ ಈ ಗೀತೆಯನ್ನು ಹಾಡಲಿ; ಇದು ಸರ್ವೇಶ್ವರನಾದ ದೇವರ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು