Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 4:8 - ಕನ್ನಡ ಸತ್ಯವೇದವು C.L. Bible (BSI)

8 ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು ಆ ತಲೆಯನ್ನು ಅವನಿಗೆ ತೋರಿಸಿದರು; “ಇಗೋ, ನಿಮ್ಮ ಜೀವತೆಗೆಯಬೇಕೆಂದಿದ್ದ ನಿಮ್ಮ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ; ಅರಸರಾದ ನಮ್ಮ ಒಡೆಯರಿಗಾಗಿ ಸರ್ವೇಶ್ವರಸ್ವಾಮಿ ಸೌಲನಿಗೂ ಅವನ ಸಂತಾನಕ್ಕೂ ಈ ಹೊತ್ತು ಸೇಡುತೀರಿಸಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು, ಆ ತಲೆಯನ್ನು ಅವನಿಗೆ ತೋರಿಸಿ, “ಇಗೋ ನಿನ್ನ ಜೀವತೆಗೆಯಬೇಕೆಂದಿದ್ದ ನಿನ್ನ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ. ಅರಸನಾದ ನಮ್ಮ ಒಡೆಯನಿಗಾಗಿ ಸೌಲನಿಗೂ ಅವನ ಸಂತಾನಕ್ಕೂ ಯೆಹೋವನು ಈ ಹೊತ್ತು ಮುಯ್ಯಿ ತೀರಿಸಿದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು ಆ ತಲೆಯನ್ನು ಅವನಿಗೆ ತೋರಿಸಿ - ಇಗೋ, ನಿನ್ನ ಜೀವತೆಗೆಯಬೇಕೆಂದಿದ್ದ ನಿನ್ನ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ! ಅರಸನಾದ ನಮ್ಮ ಒಡೆಯನಿಗಾಗಿ ಸೌಲನಿಗೂ ಅವನ ಸಂತಾನಕ್ಕೂ ಯೆಹೋವನು ಈ ಹೊತ್ತು ಮುಯ್ಯಿತೀರಿಸಿದ್ದಾನೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹೆಬ್ರೋನಿಗೆ ಬಂದು ಈಷ್ಬೋಶೆತನ ತಲೆಯನ್ನು ದಾವೀದನಿಗೆ ಕೊಟ್ಟರು. ರೇಕಾಬನು ಮತ್ತು ಬಾಣನು ರಾಜನಾದ ದಾವೀದನಿಗೆ, “ಸೌಲನ ಮಗನೂ ನಿನ್ನ ಶತ್ರುವೂ ಅದ ಈಷ್ಬೋಶೆತನ ತಲೆಯು ಇಲ್ಲಿದೆ. ಅವನು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದನು. ನಿನಗಾಗಿ ಯೆಹೋವನು ಈ ದಿನ ಸೌಲನನ್ನೂ ಅವನ ಕುಲವನ್ನೂ ದಂಡಿಸಿದನು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅನಂತರ ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಈಷ್ಬೋಶೆತನ ತಲೆಯನ್ನು ತಂದು ಅರಸನಿಗೆ, “ಇಗೋ, ನಿನ್ನ ಪ್ರಾಣವನ್ನು ಹುಡುಕಿದ ನಿನ್ನ ಶತ್ರುವಾಗಿದ್ದ ಸೌಲನ ಮಗ ಈಷ್ಬೋಶೆತನ ತಲೆಯು. ಈ ದಿನದಲ್ಲಿ ಯೆಹೋವ ದೇವರು ಅರಸನಾದ ನಮ್ಮ ಒಡೆಯನಿಗೋಸ್ಕರ ಸೌಲನಿಗೂ, ಅವನ ಸಂತಾನಕ್ಕೂ ಮುಯ್ಯಿ ತೀರಿಸಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 4:8
18 ತಿಳಿವುಗಳ ಹೋಲಿಕೆ  

ಯಾವನಾದರೂ ನನ್ನ ಒಡೆಯರಾದ ನಿಮ್ಮನ್ನು ಹಿಂಸಿಸಿ ಜೀವತೆಗೆಯಬೇಕೆಂದು ಇರುವಾಗ, ಆ ನಿಮ್ಮ ಜೀವ, ತಮ್ಮ ದೇವರಾದ ಸರ್ವೇಶ್ವರನ ರಕ್ಷಣೆಯಲ್ಲಿರುವ ಜೀವನಿಕ್ಷೇಪದಲ್ಲಿ ಸುಭದ್ರವಾಗಿರಲಿ; ಆದರೆ ನಿಮ್ಮ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದುಬಿಡಲಿ.


ನನ್ನ ಶತ್ರುಗಳಿಗೆ ವಿಧಿಸುವನಾ ದೇವ ಪ್ರತಿದಂಡನೆ ಜನಾಂಗಗಳನು ಅಧೀನಪಡಿಸುವನಾತ ನನಗೆ.


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು.


“ಏಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಯೇಲ್ ದೇಶಕ್ಕೆ ಹಿಂದಿರುಗು; ಮಗುವನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋದರು,” ಎಂದು ತಿಳಿಸಿದನು.


ನನಗೆ ಕೇಡು ಬಗೆದವರಿದೋ ಪಡೆದರು ನಿಂದೆ ಅಪಮಾನವನು I ದಿನವೆಲ್ಲ ವರ್ಣಿಪುದೆನ್ನ ನಾಲಿಗೆ ನಿನ್ನೀ ನೀತಿಸಾಧನೆಯನು II


ಅಷ್ಟರಲ್ಲಿ ಕೂಷ್ಯನೂ ಬಂದು, “ನನ್ನ ಒಡೆಯರಾದ ಅರಸರಿಗೆ ಶುಭವರ್ತಮಾನ ತಂದಿದ್ದೇನೆ; ಸರ್ವೇಶ್ವರಸ್ವಾಮಿ ನಿಮಗೆ ವಿರುದ್ಧ ಬಂಡೆದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾರೆ,” ಎಂದನು.


ಚಾದೋಕನ ಮಗ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ, ನಾನು ಅರಸರ ಬಳಿಗೆ ಓಡಿಹೋಗಿ ಸರ್ವೇಶ್ವರಸ್ವಾಮಿ ವೈರಿಗಳಿಗೆ ಮುಯ್ಯಿತೀರಿಸಿದ್ದಾರೆಂಬ ಶುಭವರ್ತಮಾನವನ್ನು ತಿಳಿಸುತ್ತೇನೆ,” ಎಂದನು.


ಜನರು ದಾವೀದನಿಗೆ, “’ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಆಗ ನೀನು ಅವನನ್ನು ನಿನ್ನ ಇಷ್ಟಾನುಸಾರ ನಡೆಸಬಹುದು,’ ಎಂದು ಸರ್ವೇಶ್ವರ ನಿನಗೆ ಹೇಳಿದ ಮಾತು ನೆರವೇರುವ ಸುದಿನವಿದು,” ಎಂದರು. ಅವನೆದ್ದು ಮೆಲ್ಲಗೆ ಹೋಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.


ಸೌಲನು ತನ್ನನ್ನು ಕೊಲ್ಲಲು ಹೊರಟಿದ್ದಾನೆಂದು ದಾವೀದನು ತಿಳಿದು ಜೀಫ್ ಮರುಭೂಮಿಯ ಹೋರೆಷದಲ್ಲಿ ಅಡಗಿಕೊಂಡಿದ್ದನು.


ದಾವೀದನು ರಾಮಾದ ಮಠದಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದನು. “ನಿನ್ನ ತಂದೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ನಾನೇನು ಮಾಡಿದೆ? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹ ಯಾವುದು?” ಎಂದನು.


ಸೌಲನು ಪುನಃ ತನ್ನ ಆಳುಗಳಿಗೆ, “ನೀವು ಹೋಗಿ ನೋಡಿ ದಾವೀದನನ್ನು ಹಾಸಿಗೆಯೊಡನೆ ನನ್ನ ಬಳಿಗೆ ತೆಗೆದುಕೊಂಡು ಬನ್ನಿ, ಅವನನ್ನು ಕೊಂದುಹಾಕುತ್ತೇನೆ,” ಎಂದು ಆಜ್ಞಾಪಿಸಿದನು.


ಆಗ ಸೌಲನು, “ಗೋಡೆಗೆ ಕಚ್ಚಿಕೊಳ್ಳುವಂತೆ ಈ ದಾವೀದನನ್ನು ತಿವಿಯುವೆನು,” ಎಂದುಕೊಂಡು ಅವನತ್ತ ಈಟಿಯನ್ನು ಎರಡುಸಾರಿ ಎಸೆದನು. ಎರಡು ಸಾರಿಯೂ ದಾವೀದನು ತಪ್ಪಿಸಿಕೊಂಡನು.


ಸೌಲನ ಸೇನಾಪತಿ ಹಾಗು ನೇರನ ಮಗನಾದ ಅಬ್ನೇರನು ಸೌಲನ ಮಗನಾದ ಈಷ್ಬೋಶೆತನನ್ನು ನದಿಯ ಆಚೆಯಲ್ಲಿರುವ ಮಹನಯಿಮಿಗೆ ಕರೆದೊಯ್ದನು.


ದಾವೀದನನ್ನು ಕೊಲ್ಲಬೇಕೆಂದು ಸೌಲನು ತನ್ನ ಮಗ ಯೋನಾತಾನನಿಗೂ ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು