Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:1 - ಕನ್ನಡ ಸತ್ಯವೇದವು C.L. Bible (BSI)

1 ಅನಂತರ ಇಸ್ರಯೇಲರ ಎಲ್ಲ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದರು. “ನಾವು ನಿಮ್ಮ ರಕ್ತಸಂಬಂಧಿಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ಇಸ್ರಾಯೇಲರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನಂತರ ಇಸ್ರಾಯೇಲ್ಯರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗ ಇಸ್ರೇಲಿನ ಕುಲಗಳವರೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು, “ನಾವೆಲ್ಲಾ ಒಂದೇ ಕುಲದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲಿನ ಎಲ್ಲಾ ಗೋತ್ರದವರು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದು, “ನಾವು ನಿನ್ನ ಎಲುಬೂ, ನಿನ್ನ ಮಾಂಸವೂ ಆಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:1
13 ತಿಳಿವುಗಳ ಹೋಲಿಕೆ  

ಎಂಬುದಾಗಿ ತಿಳಿಸಿರಿ. ಅದಲ್ಲದೆ ಅಮಾಸನಿಗೆ, ‘ನೀನೂ ನನ್ನ ರಕ್ತಸಂಬಂಧಿಯಾಗಿದ್ದಿ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯಸೇನಾಪತಿಯನ್ನಾಗಿ ಮಾಡುತ್ತೇನೆ. ಹಾಗೆ ಮಾಡದಿದ್ದರೆ ಸರ್ವೇಶ್ವರ ನನಗೆ ಮಾಡಬೇಕಾದದ್ದನ್ನು ಮಾಡಲಿ,’ ಎಂಬುದಾಗಿಯೂ ತಿಳಿಸಿರಿ,” ಎಂದು ಹೇಳಿ ಕಳುಹಿಸಿದನು.


ಲಾಬಾನನು, “ನಿಜವಾಗಿಯೂ ನೀನು ನನ್ನ ರಕ್ತಸಂಬಂಧಿ,” ಎಂದನು. ಅವನೊಂದಿಗೆ ಯಕೋಬನು ಒಂದು ತಿಂಗಳವರೆಗೂ ವಾಸಮಾಡಿದನು.


ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು.


“ನೀವು ದಯವಿಟ್ಟು ಶೆಕೆಮಿನ ಹಿರಿಯರೊಡನೆ ಮಾತಾಡಬೇಕು. ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ? ಎಂದು ಅವರನ್ನು ವಿಚಾರಿಸಬೇಕು; ನಾನು ಅವರ ರಕ್ತಸಂಬಂಧಿಯಾಗಿದ್ದೇನೆಂಬುದನ್ನು ಜ್ಞಾಪಕಪಡಿಸಬೇಕು” ಎಂದು ಕೇಳಿಕೊಂಡನು.


ಆಗ ನೀವು ಅಗತ್ಯವಾಗಿ ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಂಡವನನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೆ ಹೊರತು ಅನ್ಯದೇಶದವನನ್ನು ನೇಮಿಸಬಾರದು.


ಅನಂತರ ಯೆಹೋಶುವನು ಮತ್ತು ಇಸ್ರಯೇಲರು ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರುದ್ಧ ಯುದ್ಧಮಾಡಿದರು.


ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರು; ಆದುದರಿಂದ ನನ್ನನ್ನು ಕರೆದುಕೊಂಡು ಹೋಗುವುದರಲ್ಲಿ ನೀವು ಹಿಂದುಳಿದಿರುವುದು ಸರಿಯಲ್ಲ’


ಆಗ ಇಸ್ರಯೇಲರು ಯೆಹೂದ್ಯರಿಗೆ, “ಅರಸರಲ್ಲಿ ನಮಗೆ ಹತ್ತುಪಾಲು ಉಂಟಲ್ಲವೆ? ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ತಿರಸ್ಕರಿಸಿದ್ದೇಕೆ? ನಮ್ಮ ಅರಸರನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತಾಡಿದವರು ನಾವಲ್ಲವೇ?’ ಎಂದರು. ಇಸ್ರಯೇಲರ ವಾದಕ್ಕಿಂತ ಯೆಹೂದ್ಯರ ವಾದ ಉಗ್ರವಾಗಿತ್ತು.


ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೆತ್ಲೆಹೇಮಿನಲ್ಲಿರುವ ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಗಿತ್ತು.


ಆಗ ಯೆಹೂದ್ಯರೆಲ್ಲರೂ ಏಕ ಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, ” ನೀವು ನಿಮ್ಮ ಎಲ್ಲಾ ಸೇವಕರೊಡನೆ ಮರಳಿ ಬನ್ನಿ,” ಎಂದು ಹೇಳಿಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು