Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:11 - ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರನ ಮಂಜೂಷ ಗತ್ ಊರಿನ ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ಅವಧಿಯಲ್ಲಿ ಸರ್ವೇಶ್ವರ ಅವನನ್ನೂ ಅವನ ಮನೆಯವರನ್ನೂ ಆಶೀರ್ವದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನ ಮಂಜೂಷವು ಗತ್ ಊರಿನ ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ದಿನಗಳಲ್ಲಿ ಯೆಹೋವನು ಅವನನ್ನೂ ಅವನ ಮನೆಯವರನ್ನೂ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನ ಮಂಜೂಷವು ಗತ್ ಊರಿನ ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ಕಾಲದಲ್ಲಿ ಯೆಹೋವನು ಅವನನ್ನೂ ಅವನ ಮನೆಯವರನ್ನೂ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಓಬೇದೆದೋಮನ ಮನೆಯಲ್ಲಿ ಪವಿತ್ರ ಪೆಟ್ಟಿಗೆಯು ಮೂರು ತಿಂಗಳ ಕಾಲ ಇತ್ತು. ಓಬೇದೆದೋಮನನ್ನೂ ಅವನ ಕುಟುಂಬವನ್ನೂ ಯೆಹೋವನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರ ಮಂಜೂಷವು ಗಿತ್ತೀಯನಾದ ಓಬೇದ್ ಏದೋಮನ ಮನೆಯಲ್ಲಿ ಮೂರು ತಿಂಗಳು ಇದ್ದುದರಿಂದ, ಯೆಹೋವ ದೇವರು ಓಬೇದ್ ಎದೋಮನನ್ನೂ, ಅವನ ಮನೆಯವರೆಲ್ಲರನ್ನೂ ಆಶೀರ್ವದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:11
7 ತಿಳಿವುಗಳ ಹೋಲಿಕೆ  

ಹೀಗೆ ತನ್ನ ಮನೆಮಂದಿರದ ಮೇಲೂ ಆಸ್ತಿಪಾಸ್ತಿಯ ಮೇಲೂ ಜೋಸೆಫನನ್ನೇ ಆಡಳಿತಗಾರನನ್ನಾಗಿ ನೇಮಿಸಿದ. ಜೋಸೆಫನ ಪ್ರಯುಕ್ತ ಸರ್ವೇಶ್ವರ ಆ ಈಜಿಪ್ಟಿನವನ ಮನೆತನವನ್ನು ಹರಸಿದರು. ಮನೆಯಲ್ಲೂ ಸರ್ವೇಶ್ವರ ಸ್ವಾಮಿಯ ಆಶೀರ್ವಾದವಿತ್ತು.


ಅದಕ್ಕೆ ಲಾಬಾನನು, “ನನ್ನ ಮೇಲೆ ದಯವಿಟ್ಟು ನನ್ನ ಬಳಿಯಲ್ಲೇ ತಂಗಿರು. ಸರ್ವೇಶ್ವರ ಸ್ವಾಮಿ ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಗೊಳಿಸಿದ್ದಾರೆಂದು ಶಾಸ್ತ್ರೋಕ್ತವಾಗಿ ತಿಳಿದುಕೊಂಡಿದ್ದೇನೆ.


ನನ್ನ ಆಲಯದಲ್ಲಿ ಆಹಾರಕ್ಕೆ ಕೊರತೆಯಿಲ್ಲದಿರುವಂತೆ ದಶಮಾಂಶವನ್ನು ಪೂರ್ತಿಯಾಗಿ ನನ್ನ ಭಂಡಾರಕ್ಕೆ ತೆಗೆದುಕೊಂಡು ಬನ್ನಿ. ಆ ಬಳಿಕ ಪರಲೋಕದ ದ್ವಾರಗಳನ್ನು ತೆರೆದು, ತುಂಬಿತುಳುಕುವಷ್ಟು ವರದಾನಗಳನ್ನು ನಿಮ್ಮ ಮೇಲೆ ಸುರಿಸುವೆನೋ ಇಲ್ಲವೋ ಎಂಬುದನ್ನು ಪರೀಕ್ಷಿಸಿನೋಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಸರ್ವೇಶ್ವರ ಜೋಸೆಫನೊಂದಿಗೆ ಇದ್ದರು. ಅವನು ಕೈಗೊಂಡ ಕೆಲಸವೆಲ್ಲ ಜಯವಾಗುವಂತೆ ಮಾಡುತ್ತಿದ್ದರು. ಈ ಕಾರಣ ಸೆರೆಮನೆಯ ಯಜಮಾನ ಅಲ್ಲಿಯ ಎಲ್ಲ ವಿಷಯದಲ್ಲೂ ನಿಶ್ಚಿಂತನಾಗಿದ್ದನು.


ಅದನ್ನು ದಾವೀದನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.


ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು; ಯೆಹೋಜಾಬಾದನು ಮರಚಲನು; ಯೋವಾಹನು ಮೂರನೆಯವನು; ಸಾಕಾರನು ನಾಲ್ಕನೆಯವನು; ನೆತನೇಲನು ಐದನೆಯವನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು