Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:17 - ಕನ್ನಡ ಸತ್ಯವೇದವು C.L. Bible (BSI)

17 ಜನರು ಸರ್ವೇಶ್ವರನ ಮಂಜೂಷವನ್ನು ತಂದು ದಾವೀದನು ಕಟ್ಟಿಸಿದ್ದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿ ಇಟ್ಟರು; ಆಗ ದಾವೀದನು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿಟ್ಟರು. ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯವಿುತ ಸ್ಥಳದಲ್ಲಿಟ್ಟರು; ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದಾವೀದನು ಪವಿತ್ರ ಪೆಟ್ಟಿಗೆಗಾಗಿ ಒಂದು ಗುಡಾರವನ್ನು ನಿರ್ಮಿಸಿದನು. ಇಸ್ರೇಲರು, ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಗುಡಾರದಲ್ಲಿ ಪ್ರತ್ಯೇಕವಾದ ಸ್ಥಳದಲ್ಲಿ ಇಟ್ಟರು. ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ಯೆಹೋವ ದೇವರ ಮಂಜೂಷವನ್ನು ಒಳಗೆ ತಂದು, ದಾವೀದನು ಅದಕ್ಕೋಸ್ಕರ ಹಾಕಿದ ಗುಡಾರದೊಳಗೆ ಅದರ ನಿಯಮಿತ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ, ದಾವೀದನು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:17
12 ತಿಳಿವುಗಳ ಹೋಲಿಕೆ  

ದಾವೀದನು ದೇವರ ಮಂಜೂಷವನ್ನು, ಈಗಾಗಲೇ ಕಿರ್ಯತ್ಯಾರೀಮಿನಿಂದ ತಾನು ಜೆರುಸಲೇಮಿನಲ್ಲಿ ಅದಕ್ಕೋಸ್ಕರ ಸಿದ್ಧಮಾಡಿದ್ದ ಗುಡಾರಕ್ಕೆ, ತೆಗೆದುಕೊಂಡು ಬಂದಿದ್ದನು.


ದಾವೀದ ನಗರದಲ್ಲಿ ದಾವೀದನು ತನ್ನ ವೈಯಕ್ತಿಕ ಉಪಯೋಗಕ್ಕಾಗಿ ಮನೆಗಳನ್ನು ಕಟ್ಟಿಸಿಕೊಂಡನು. ದೇವಮಂಜೂಷಕ್ಕೂ ಒಂದು ಸ್ಥಳವನ್ನು ಸಿದ್ಧಪಡಿಸಿ ಅದಕ್ಕೆ ಒಂದು ಗುಡಾರವನ್ನು ಹಾಕಿಸಿದನು.


ಆಗಮಿಸು ಪ್ರಭು, ನಿನ್ನ ತೇಜೋ ಮಂಜೂಷದೊಡನೆ I ನಿನ್ನಾ ವಾಸಸ್ಥಾನವನು ಬಂದು ಸೇರು ಬೇಗನೆ II


ಅರಸ ಸೊಲೊಮೋನನು ಹಾಗು ಅಲ್ಲಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರೂ ಮಂಜೂಷದ ಮುಂದೇ ಅಸಂಖ್ಯವಾದ ಕುರಿದನಗಳನ್ನು ಬಲಿದಾನಮಾಡಿದರು.


ಅರಸ ಸೊಲೊಮೋನನೂ ಅಲ್ಲಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರೂ ಮಂಜೂಷದ ಮುಂದೆ ಅಸಂಖ್ಯಾತ ಕುರಿದನಗಳನ್ನು ಬಲಿದಾನ ಮಾಡಿದರು.


ಅವರು ದೇವಮಂಜೂಷವನ್ನು ತಂದು ದಾವೀದನು ಅದಕ್ಕಾಗಿ ಸಿದ್ಧಪಡಿಸಿದ್ದ ಗುಡಾರದೊಳಗೆ ಒಯ್ದು, ಅಲ್ಲಿ ಅದನ್ನು ಸ್ಥಾಪಿಸಿದರು. ದೇವರಿಗೆ ದಹನಬಲಿಗಳನ್ನೂ, ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿದರು.


ಶಾಂತಿಸಮಾಧಾನಕ್ಕಾಗಿ ಅರ್ಪಿಸುವ ಆ ಬಲಿ ಪ್ರಾಣಿಯ ಕೊಬ್ಬನ್ನು ಸರ್ವೇಶ್ವರನಿಗೆ ಹೋಮವಾಗಿ ಸಮರ್ಪಿಸಬೇಕು.


ಮಂಜೂಷವನ್ನು ಜೆರುಸಲೇಮಿಗೆ ತಂದ ತರುವಾಯ ಆರಾಧನಾವಿಧಿಗಾಗಿ ಅರಸ ದಾವೀದನು ಸಂಗೀತಮಂಡಲಿಯನ್ನು ನೇಮಿಸಿದನು.


ತಾನು ಸಿದ್ಧಪಡಿಸಿದ ಸ್ಥಳಕ್ಕೆ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ಎಲ್ಲಾ ಇಸ್ರಯೇಲರನ್ನು ಜೆರುಸಲೇಮಿಗೆ ಬರಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು