Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:21 - ಕನ್ನಡ ಸತ್ಯವೇದವು C.L. Bible (BSI)

21 ಆಗ ದಾವೀದನು ಆಕೆಗೆ, “ನಾನು ಮಾಡಿದ್ದು ಸರ್ವೇಶ್ವರನ ಸನ್ನಿಧಿಯಲ್ಲಿ ಮಾತ್ರ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟುಬಿಟ್ಟು, ನನ್ನನ್ನೇ ಆರಿಸಿಕೊಂಡು, ತಮ್ಮ ಪ್ರಜೆಗಳಾದ ಇಸ್ರಯೇಲರ ಅರಸನನ್ನಾಗಿ ಮಾಡಿದ ಆ ಸರ್ವೇಶ್ವರನ ಮುಂದೆ ಇನ್ನೂ ಹೆಚ್ಚಾಗಿ ಕುಣಿದಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ದಾವೀದನು ಮೀಕಲಳಿಗೆ, “ಇದನ್ನು ಯೆಹೋವನ ಸನ್ನಿಧಿಯಲ್ಲಿ ಮಾಡಿದ್ದೇನಷ್ಟೇ, ನಿನ್ನ ತಂದೆಯನ್ನೂ ಅವರ ಮನೆಯವರೆಲ್ಲರನ್ನೂ ಬಿಟ್ಟು, ನನ್ನನ್ನೇ ಆರಿಸಿಕೊಂಡು, ತನ್ನ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಸಂತೋಷದಿಂದ ಕುಣಿದಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೋವನ ಸನ್ನಿಧಿಯಲ್ಲಿಯಷ್ಟೆ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟು ನನ್ನನ್ನೇ ಆರಿಸಿಕೊಂಡು ತನ್ನ ಪ್ರಜೆಗಳಾದ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಕುಣಿದಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ದಾವೀದನು ಮೀಕಲಳಿಗೆ, “ಯೆಹೋವನು ನಿನ್ನ ತಂದೆಯನ್ನಾಗಲಿ ಅವರ ಕುಟುಂಬದ ಇತರ ಯಾರನ್ನೇ ಆಗಲಿ ಆರಿಸಿಕೊಳ್ಳದೆ ನನ್ನನ್ನೇ ಇಸ್ರೇಲರ ನಾಯಕನನ್ನಾಗಿ ಆರಿಸಿಕೊಂಡಿದ್ದಾನೆ. ಆದ್ದರಿಂದಲೇ ನಾನು ಯೆಹೋವನ ಸನ್ನಿಧಿಯಲ್ಲಿ ಕುಣಿದಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ದಾವೀದನು ಮೀಕಲಳಿಗೆ, “ನಾನು ಕುಣಿದದ್ದು ಯೆಹೋವ ದೇವರ ಸನ್ನಿಧಿಯಲ್ಲಿ ಮಾತ್ರ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟುಬಿಟ್ಟು, ನನ್ನನ್ನೇ ಆರಿಸಿಕೊಂಡು, ತಮ್ಮ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಆ ಯೆಹೋವ ದೇವರ ಮುಂದೆ ಇನ್ನೂ ಹೆಚ್ಚಾಗಿ ಕುಣಿದಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:21
15 ತಿಳಿವುಗಳ ಹೋಲಿಕೆ  

ಅನಂತರ ದೇವರು ಸೌಲನನ್ನು ತ್ಯಜಿಸಿ ದಾವೀದನನ್ನು ಅರಸನನ್ನಾಗಿ ನೇಮಿಸಿದರು. ಇವನ ಬಗ್ಗೆ ದೇವರು, “ಜೆಸ್ಸೆಯನ ಮಗ ದಾವೀದನು ನನಗೆ ಮೆಚ್ಚುಗೆಯಾದ ವ್ಯಕ್ತಿ; ಇವನು ನನ್ನ ಆಶೆ ಆಕಾಂಕ್ಷೆಗಳನ್ನೆಲ್ಲಾ ಪೂರೈಸುವನು,” ಎಂದು ತಮ್ಮ ಒಪ್ಪಿಗೆಯನ್ನು ಸೂಚಿಸಿದರು.


ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿ ನೋಡಿ ದಾವೀದನು ಸರ್ವೇಶ್ವರನ ಮುಂದೆ ನಲಿದಾಡುತ್ತಾ ಕುಣಿಯುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲೇ ಅವನನ್ನು ತಿರಸ್ಕರಿಸಿದಳು.


ಈಗಲಾದರೋ, ನಿನ್ನ ಅರಸುತನ ನಿಲ್ಲುವುದಿಲ್ಲ; ನೀನು ಸರ್ವೇಶ್ವರನ ಆಜ್ಞೆಯನ್ನು ಕೈಗೊಳ್ಳದೆ ಹೋದುದರಿಂದ ಅವರು ತಮಗೆ ಒಪ್ಪಿಗೆಯಾದ ಬೇರೊಬ್ಬ ವ್ಯಕ್ತಿಯನ್ನು ತಮ್ಮ ಪ್ರಜೆಯ ಮೇಲೆ ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದನು.


ಆಗ ಸಮುವೇಲನು ಅವನಿಗೆ, “ಸರ್ವೇಶ್ವರ ಈ ದಿನ ಇಸ್ರಯೇಲ್ ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮವಾದ ಇನ್ನೊಬ್ಬನಿಗೆ ಕೊಟ್ಟಿದ್ದಾರೆ.


ದಾವೀದನು ಏಫೋದೆಂಬ ನಾರುಮಡಿಯನ್ನು ಮಾತ್ರ ಉಟ್ಟುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ಪೂರ್ಣಾವೇಶದಿಂದ ಕುಣಿದಾಡಿದನು.


ದಾವೀದನೂ ಎಲ್ಲ ಇಸ್ರಯೇಲರೂ ಕಿನ್ನರಿ, ಸ್ವರಮಂಡಲ, ತಮಟೆ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು, ಪೂರ್ಣಾವೇಶದಿಂದ ಗೀತೆಗಳನ್ನು ಹಾಡುತ್ತಾ, ಸರ್ವೇಶ್ವರನ ಮುಂದೆ ನರ್ತನ ಮಾಡುತ್ತಾ ಹೋದರು.


ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.


ಅದಕ್ಕೆ ನನ್ನ ಉತ್ತರ ಇದು: ನೀವು ಉಂಡರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿ.


ಆ ಮಂಜೂಷ ಪಟ್ಟಣದೊಳಗೆ ಬರುತ್ತಿದ್ದಂತೆ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿ ನೋಡಿದಳು. ದಾವೀದನು ಸಂತೋಷದಿಂದ ಕುಣಿಯುತ್ತಾ ನರ್ತಿಸುತ್ತಾ ಇದ್ದುದನ್ನು ಕಂಡಳು. ಅದನ್ನು ನೋಡಿ ಅವನ ಬಗ್ಗೆ ಅವಳಲ್ಲಿ ತಿರಸ್ಕಾರ ಭಾವ ಮೂಡಿತು.


ಅವನು ಕೆಂಬಣ್ಣದವನು, ಸುಂದರ ನೇತ್ರನು, ಹಾಗು ನೋಟಕ್ಕೆ ರಮಣೀಯನು. ಸರ್ವೇಶ್ವರ ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ,” ಎಂದು ಆಜ್ಞಾಪಿಸಿದರು.


ಇದಕ್ಕಿಂತಲೂ ಹೆಚ್ಚಾದ ತಿರಸ್ಕಾರ ಹೊಂದುವುದಕ್ಕೂ ನನ್ನನ್ನೇ ಅಲ್ಪನೆಂದು ಭಾವಿಸಿಕೊಳ್ಳುವುದಕ್ಕೂ ನಾನು ಸಿದ್ಧನು. ನೀನು ಹೇಳಿದ ದಾಸಿಯರಾದರೋ ನನ್ನನ್ನು ಹೇಗೂ ಸನ್ಮಾನಿಸುವರು!” ಎಂದನು.


“ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ ಹೇಳು, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೀಗೆ ಹೇಳಿದೆಯೆಂದು ತಿಳಿಸು: ‘ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ.


ಹಿಂದಿನ ದಿವಸಗಳಲ್ಲಿ, ಅಂದರೆ ಸೌಲನ ಆಳ್ವಿಕೆಯಲ್ಲಿ, ಇಸ್ರಯೇಲರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವರು ನೀವೇ. ನಿಮ್ಮನ್ನು ಕುರಿತು ಸರ್ವೇಶ್ವರಸ್ವಾಮಿ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗಿರುವೆ,’ ಎಂದು ವಾಗ್ದಾನಮಾಡಿದ್ದಾರೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು