Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:5 - ಕನ್ನಡ ಸತ್ಯವೇದವು C.L. Bible (BSI)

5 ದಾವೀದನೂ ಎಲ್ಲ ಇಸ್ರಯೇಲರೂ ಕಿನ್ನರಿ, ಸ್ವರಮಂಡಲ, ತಮಟೆ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು, ಪೂರ್ಣಾವೇಶದಿಂದ ಗೀತೆಗಳನ್ನು ಹಾಡುತ್ತಾ, ಸರ್ವೇಶ್ವರನ ಮುಂದೆ ನರ್ತನ ಮಾಡುತ್ತಾ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದಾವೀದನೂ ಎಲ್ಲಾ ಇಸ್ರಾಯೇಲರೂ ಶಂಕುಮರದಿಂದ (ಸೈಪ್ರಸ್ ಮರ) ಮಾಡಿದ ಕಿನ್ನರಿ, ಸ್ವರಮಂಡಲ, ದಮ್ಮಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ಯೆಹೋವನ ಮುಂದೆ ನರ್ತನ ಮಾಡುತ್ತಾ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದಾವೀದನೂ ಎಲ್ಲಾ ಇಸ್ರಾಯೇಲ್ಯರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತಗಳನ್ನು ಹಾಡುತ್ತಾ ಯೆಹೋವನ ಮುಂದೆ ನರ್ತನಮಾಡುತ್ತಾ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದಾವೀದನು ಮತ್ತು ಇಸ್ರೇಲರೆಲ್ಲರು ಕಿನ್ನರಿ, ದಮ್ಮಡಿ, ಝಲ್ಲರಿ, ತಾಳಗಳನ್ನು ಬಾರಿಸುತ್ತಾ ಸನ್ನಿಧಿಯಲ್ಲಿ ನೃತ್ಯಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದಾವೀದನೂ, ಸಮಸ್ತ ಇಸ್ರಾಯೇಲರೂ ಸಕಲ ವಾದ್ಯಗಳಾದ ಕಿನ್ನರಿ, ವೀಣೆ, ದಮ್ಮಡಿ, ಸ್ವರಮಂಡಲ, ತಾಳ, ತುತೂರಿ ಇವುಗಳನ್ನು ತಮ್ಮ ಸಮಸ್ತ ಬಲದಿಂದ ಬಾರಿಸುತ್ತಾ, ಹಾಡುತ್ತಾ ಯೆಹೋವ ದೇವರ ಮುಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:5
17 ತಿಳಿವುಗಳ ಹೋಲಿಕೆ  

ದಾವೀದನೂ ಎಲ್ಲಾ ಜನರೂ ಕಿನ್ನರಿ, ಸ್ವರಮಂಡಲ, ತಮಟೆ, ತಾಳ, ತುತೂರಿ ಮುಂತಾದ ವಾದ್ಯಗಳನ್ನು ಬಾರಿಸುತ್ತಾ ಪೂರ್ಣಶಕ್ತಿಯಿಂದ ಹಾಡುತ್ತಾ ದೇವರ ಮುಂದೆ ನರ್ತಿಸುತ್ತಾ ನಡೆದರು.


ನಿಮ್ಮ ಭಜನೆ ನಿಂತುಹೋಗಲಿ; ನಿಮ್ಮ ವೀಣಾವಾದ್ಯಗಳು ತೊಲಗಲಿ.


ವೀಣೆಯನ್ನು ನುಡಿಸುತ್ತಾ ಮನಸ್ಸು ಬಂದಂತೆ ಹಾಡುವವರೇ, ದಾವೀದನಂತೆ ಹೊಸ ವಾದ್ಯಸಂಗೀತಗಳನ್ನು ರಚಿಸುವವರೇ, ನಿಮಗೆ ಧಿಕ್ಕಾರ!


ಈಗಲಾದರು ನೀವು ಸಿದ್ಧರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಈ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ?” ಎಂದು ಹೇಳಿದನು.


ಪ್ರಭುವೇ, ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಲಿ;


ಅಂತೆಯೇ ಸಮಸ್ತ ಜನಾಂಗ-ಕುಲ-ಭಾಷೆಗಳವರು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರು ಅದೇ ಸಮಯದಲ್ಲಿ ಅಡ್ಡಬಿದ್ದು ರಾಜ ನೆಬೂಕದ್ನೆಚ್ಚರನು ನಿಲ್ಲಿಸಿದ್ದ ಆ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.


ನೀವು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ರಾಜ ನೆಬೂಕದ್ನೆಚ್ಚರರು ನಿಲ್ಲಿಸಿರುವ ಈ ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕು.


ಏರಿದನು ಪ್ರಭು ಜಯಜಯಕಾರದೊಂದಿಗೆ I ಆರೋಹಣವಾದನು ತುತೂರಿನಾದ ಜೊತೆಗೆ II


ಈಗ ಒಬ್ಬ ವಾದ್ಯಗಾರನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದು ಹೇಳಿದನು. (ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಸರ್ವೇಶ್ವರನ ಶಕ್ತಿ ಪ್ರಾಪ್ತವಾಗುತ್ತಿತ್ತು).


ಒಡೆಯಾ, ಅಪ್ಪಣೆಯಾಗಲಿ, ನಿಮ್ಮ ಸನ್ನಿಧಿಯಲ್ಲಿ ನಿಂತಿರುವ ನಿಮ್ಮ ಸೇವಕರಾದ ನಾವು ಹೋಗಿ ಕಿನ್ನರಿ ಬಾರಿಸುವವರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇವೆ. ಸರ್ವೇಶ್ವರನಿಂದ ಕಳುಹಿಸಲಾದ ದುರಾತ್ಮ ನಿಮ್ಮ ಮೇಲೆ ಬರುವಾಗ ಅವನು ಕಿನ್ನರಿ ಬಾರಿಸಿದರೆ ನಿಮಗೆ ಉಪಶಮನ ಆಗುವುದು,” ಎಂದು ಹೇಳಿದರು.


ಅಲ್ಲಿಂದ ದೇವಗಿರಿಯನ್ನು ಮುಟ್ಟಿದಾಗ ಫಿಲಿಷ್ಟಿಯರ ದಂಡುಪ್ರದೇಶವನ್ನು ಕಾಣುವೆ; ಮುಂಗಡೆಯಲ್ಲಿ ಸ್ವರಮಂಡಲ, ತಮ್ಮಟೆ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಗಳ ಒಂದು ಗುಂಪನ್ನು ಕಾಣುವೆ. ಅವರು ಪರವಶರಾಗಿ ಪ್ರವಾದಿಸುವರು.


ಹೀಗೆ ಎಲ್ಲಾ ಇಸ್ರಯೇಲರು ಜೆರುಸಲೇಮಿನವರೆಗೆ ಆನಂದಘೋಷಣೆಗಳಿಂದಲೂ ತುತೂರಿ, ಕೊಂಬು, ತಾಳ, ತಂತಿ, ವಾದ್ಯಗಳ ಸಂಗೀತದಿಂದಲೂ ಸರ್ವೇಶ್ವರನ ನಿಬಂಧನಾ ಮಂಜೂಷವನ್ನು ಹೊತ್ತುತಂದರು.


ಸ್ವರಮಂಡಲ, ಕಿನ್ನರಿ, ತುತೂರಿ ಇವುಗಳೊಡನೆ ಜೆರುಸಲೇಮಿನಲ್ಲಿರುವ ಸರ್ವೇಶ್ವರನಾಲಯಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು