Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:7 - ಕನ್ನಡ ಸತ್ಯವೇದವು C.L. Bible (BSI)

7 ಆಗ ಸರ್ವೇಶ್ವರ ಉಜ್ಜನ ಮೇಲೆ ಕೋಪಗೊಂಡರು. ಅಂಥ ಅಗೌರವಕ್ಕಾಗಿ ಅವನನ್ನು ದಂಡಿಸಿದರು. ಅವನು ಅಲ್ಲೇ ದೇವರ ಮಂಜೂಷದ ಬಳಿ ಸತ್ತುಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಯೆಹೋವನು ಉಜ್ಜನ ಮೇಲೆ ಕೋಪಗೊಂಡು, ಈ ತಪ್ಪಿಗೆ ಅವನನ್ನು ಸಂಹರಿಸಿದನು. ಅವನು ಅಲ್ಲೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಯೆಹೋವನು ಉಜ್ಜನ ಮೇಲೆ ಕೋಪಗೊಂಡು ಈ ತಪ್ಪಿನ ಸಲವಾಗಿ ಅವನನ್ನು ಹತಮಾಡಿದನು; ಅವನು ಅಲ್ಲೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಉಜ್ಜನ ಮೇಲೆ ಕೋಪಗೊಂಡು ಅವನನ್ನು ಕೊಂದನು. ಉಜ್ಜನು ದೇವರಿಗೆ ಗೌರವವನ್ನು ತೋರಿಸದೆ ಪವಿತ್ರ ಪೆಟ್ಟಿಗೆಯನ್ನು ಸ್ಪರ್ಶಿಸಿದನು. ದೇವರ ಪವಿತ್ರ ಪಟ್ಟಿಗೆಯ ಹತ್ತಿರದಲ್ಲೇ ಉಜ್ಜನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯೆಹೋವ ದೇವರು ಉಜ್ಜನ ಮೇಲೆ ಕೋಪಗೊಂಡು, ಅಂಥ ಅಗೌರವಕ್ಕಾಗಿ ದೇವರು ಅವನನ್ನು ಶಿಕ್ಷಿಸಿದರು; ಅವನು ಅಲ್ಲಿಯೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:7
10 ತಿಳಿವುಗಳ ಹೋಲಿಕೆ  

ಮಂಜೂಷವನ್ನು ತೆರೆದು ನೋಡಿದ ಬೇತ್ ಷೆಮೆಷಿನವರಾದ ಎಪ್ಪತ್ತು ಮಂದಿಯನ್ನು ಸರ್ವೇಶ್ವರ ನಾಶಮಾಡಿದರು. ಈ ವಿನಾಶಕ್ಕಾಗಿ ಬೇತ್ ಷೆಮೆಷಿನವರು ಗೋಳಾಡಿದರು.


ಮೊದಲೊಂದು ಸಾರಿ, ಅದನ್ನು ತರಲು ನೀವು ಇಲ್ಲದೇ ಹೋದುದರಿಂದ ಹಾಗು ನಾವು ತಕ್ಕ ರೀತಿಯಲ್ಲಿ ಅವರನ್ನು ಆರಾಧಿಸದೇ ಹೋದುದಕ್ಕಾಗಿ ನಮ್ಮ ದೇವರಾದ ಸರ್ವೇಶ್ವರ ನಮ್ಮನ್ನು ಶಿಕ್ಷಿಸಿದರು,” ಎಂದು ಅವರನ್ನು ಎಚ್ಚರಿಸಿದನು.


ಮಂಜೂಷವನ್ನು ಮುಟ್ಟಿದ್ದಕ್ಕಾಗಿ ಕೂಡಲೇ ಸರ್ವೇಶ್ವರ ಉಜ್ಜನ ಮೇಲೆ ಉಗ್ರಕೋಪ ತಾಳಿ ಅವನನ್ನು ಕೊಂದುಹಾಕಿದರು. ದೇವರ ಸನ್ನಿಧಿಯಲ್ಲಿಯೇ ಅವನು ಮರಣ ಹೊಂದಿದನು.


‘ಲೇವಿಯರು ಮಾತ್ರವೇ ದೇವಮಂಜೂಷವನ್ನು ಹೊರಬೇಕು. ಏಕೆಂದರೆ ಸದಾಕಾಲ ತಮ್ಮ ಸೇವೆಮಾಡುವುದಕ್ಕೂ ಮಂಜೂಷವನ್ನು ಹೊರುವುದಕ್ಕೂ ಸರ್ವೇಶ್ವರನಿಂದ ಆಯ್ಕೆಯಾದವರು ಅವರೇ’ ಎಂದು ನಿಶ್ಚಯಿಸಿಕೊಂಡನು.


ಆರೋನನು ಮತ್ತು ಅವನ ಮಕ್ಕಳು ದಂಡು ಹೊರಡುವ ಕಾಲದಲ್ಲಿ ದೇವಸ್ಥಾನದ ಎಲ್ಲ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು. ಮುಟ್ಟಿದರೆ ಬದುಕಲಾರರು. ಕೆಹಾತ್ಯರು ದೇವದರ್ಶನದ ಗುಡಾರದ ಸಲಕರಣೆಗಳಲ್ಲಿ ಹೊರಬೇಕಾದವುಗಳು ಇವೇ.


ಸರ್ವೇಶ್ವರ ವಿಧಿಸಿದ ದಂಡನೆಯ ನಿಮಿತ್ತ ಸುಮಾರು ಹತ್ತು ದಿನಗಳಾದ ನಂತರ ನಾಬಾಲನು ಸತ್ತುಹೋದನು.


ಸರ್ವೇಶ್ವರ ಉಜ್ಜನನ್ನು ಶಿಕ್ಷಿಸಿದ್ದರಿಂದ ದಾವೀದನು ಸಿಟ್ಟುಗೊಂಡು ಆ ಸ್ಥಳಕ್ಕೆ ‘ಪೆರೆಚುಜ್ಜಾ’ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ.


ಹೊರಡುವಾಗ ಆ ಗುಡಾರವನ್ನು ಲೇವಿಯರೇ ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು