Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:16 - ಕನ್ನಡ ಸತ್ಯವೇದವು C.L. Bible (BSI)

16 ನಿನ್ನ ಮನೆತನವೂ ಅರಸುತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಿಂಹಾಸನ ಶಾಶ್ವತವಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು’” ಎಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವವು; ನಿನ್ನ ಸಿಂಹಾಸನವು ಶಾಶ್ವತವಾಗಿರುವದು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿನ್ನ ಕುಟುಂಬ ಮತ್ತು ರಾಜ್ಯ ಎಂದೆಂದಿಗೂ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿನ್ನ ಮನೆಯೂ ನಿನ್ನ ರಾಜ್ಯವೂ ನನ್ನ ಮುಂದೆ ಸದಾಕಾಲಕ್ಕೂ ಸ್ಥಿರವಾಗಿರುವವು. ನಿನ್ನ ಸಿಂಹಾಸನವು ಯುಗಯುಗಾಂತರಕ್ಕೂ ಶಾಶ್ವತವಾಗಿರುವುದು,’ ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:16
29 ತಿಳಿವುಗಳ ಹೋಲಿಕೆ  

ಅವನು ನನ್ನ ಹೆಸರಿನಲ್ಲಿ ಒಂದು ದೇವಾಲಯವನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ಅಮರವಾದುದು ಹೇ ದೇವಾ, ನಿನ್ನ ಸಿಂಹಾಸನ I ನ್ಯಾಯಸ್ಥಾಪಕವಾದುದು ನಿನ್ನ ರಾಜದಂಡ II


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ತಮ್ಮ ಪುತ್ರನನ್ನು ಕುರಿತಾದರೋ: “ದೇವಾ, ನಿನ್ನ ಸಿಂಹಾಸನವು ಶಾಶ್ವತವಾದುದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ.


ನೆರೆದಿದ್ದ ಜನರು ಪ್ರತ್ಯುತ್ತರವಾಗಿ, “ಅಭಿಷಿಕ್ತನಾದ ಲೋಕೋದ್ಧಾರಕ ಸದಾಕಾಲ ಇರುವನೆಂದು ಧರ್ಮಶಾಸ್ತ್ರವೇ ತಿಳಿಸುತ್ತದೆ. ಹೀಗಿರುವಲ್ಲಿ, ನರಪುತ್ರನನ್ನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುತ್ತೀಯಲ್ಲಾ, ಅದು ಹೇಗೆ? ಆ ನರಪುತ್ರನು ಯಾರು?” ಎಂದು ಕೇಳಿದರು.


ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು,’ ಎಂದಿದ್ದಾರೆ".


ಆತನು ಬಾಳಲಿ ಆಚಂದ್ರಾರ್ಕನಾಗಿ I ತಲತಲಾಂತರಕು ಭಯಭಕುತಿಯಿಂದಿರಲಿ II


ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.


ನಿಮ್ಮ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ; ಒಡೆಯಾ, ತಾವು ಸರ್ವೇಶ್ವರನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಅವರು ನಿಮ್ಮ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವರು. ಆದುದರಿಂದ ನಿಮ್ಮ ಜೀವಮಾನದಲ್ಲೆಲ್ಲಾ ನಮ್ಮಲ್ಲಿ ಕೆಟ್ಟತನ ಕಾಣದಿರಲಿ;


ನಾತಾನನು ತನಗಾದ ದರ್ಶನದ ಈ ಮಾತುಗಳನ್ನೆಲ್ಲ ದಾವೀದನಿಗೆ ಹೇಳಿದನು.


ಇಸ್ರಯೇಲ್ ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕುಳಿತುಕೊಳ್ಳುವರು ಎಂಬುದಾಗಿ ನಿನ್ನ ತಂದೆ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


“ಸ್ಥಾಪಿಸುವೆ ಶಾಶ್ವತವಾಗಿ ನಿನ್ನ ಸಂತತಿಯನು I ಸ್ಥಿರಪಡಿಸುವೆ ಯುಗಯುಗಕು ನಿನ್ನ ಸಿಂಹಾಸನವನು” II


ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ ಹಾಗು ಪ್ರಭುಗಳೂ ರಥಾಶ್ವಗಳನ್ನು ಏರಿದವರಾಗಿ ಈ ನಗರದ ಬಾಗಿಲುಗಳನ್ನು ಪ್ರವೇಶಿಸುವರು. ಇವರು ಮಾತ್ರವಲ್ಲ, ಇವರ ಪ್ರಧಾನರು, ಜುದೇಯದ ಜನರು, ಜೆರುಸಲೇಮಿನ ನಿವಾಸಿಗಳು ಎಲ್ಲರೂ ಇಲ್ಲಿ ಸೇರುವರು. ಈ ನಗರದಲ್ಲಿ ಜನರು ಯಾವಾಗಲು ತುಂಬಿರುವರು.


ಸರ್ವೇಶ್ವರನಾದ ನಾನು ಹೇಳುವುದೇನೆಂದರೆ: ದಾವೀದ ವಂಶವು ನಿಂತುಹೋಗದು. ಇಸ್ರಯೇಲರ ವಂಶದವರು ಆ ಸಿಂಹಾಸನದಲ್ಲಿ ಆಸೀನರಾಗುತ್ತಾ ಬರುವರು.


ತಾನೇ ನೇಮಿಸಿದ ಅರಸನಿಗೆ ಆತನೀವನು ವಿಶೇಷ ರಕ್ಷಣೆ.


ಇದಲ್ಲದೆ ಸರ್ವೇಶ್ವರ, ‘ನಿನ್ನ ಸಂತಾನದವರು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಂಬಿಗಸ್ತರಾಗಿ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿದ್ದರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು,’ ಎಂದು ನನಗೆ ಮಾಡಿದ ವಾಗ್ದಾನವನ್ನು ಅವರು ಸ್ಥಿರಪಡಿಸುವರು.


ಆದರೂ ಸರ್ವೇಶ್ವರ ಜುದೇಯದ ರಾಜ್ಯವನ್ನು ನಾಶಮಾಡಲಿಲ್ಲ. “ನಿನ್ನನ್ನು ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂಬುದಾಗಿ ತಮ್ಮ ದಾಸ ದಾವೀದನಿಗೆ ಮಾಡಿದ ಪ್ರಮಾಣವನ್ನು ಸ್ಮರಿಸಿ ಅದನ್ನು ಉಳಿಸಿದರು.


ಇಸ್ರಯೇಲ್ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಕಟ್ಟಳೆಯನ್ನು ಅನುಸರಿಸಿ ನನ್ನ ಮಾರ್ಗದಲ್ಲಿ ನಡೆದುಕೊಂಡರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು’ ಎಂಬುದಾಗಿ ವಾಗ್ದಾನ ಮಾಡಿದ್ದೀರಿ; ಅದನ್ನು ನೆರವೇರಿಸಿರಿ.


ತನ್ನ ಕಟಾಕ್ಷವನ್ನು ಸಜ್ಜನರ ಮೇಲೆ ಅಚಲವಾಗಿರಿಸುವನು ರಾಜರಂತೆ ಸಿಂಹಾಸನದ ಮೇಲೆ ಅವರನು ಕುಳ್ಳಿರಿಸುವನು ಅಮರವಾದ ಉನ್ನತ ಪದವಿಗೆ ಅವರನು ಏರಿಸುವನು.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ನನ್ನ ದಾಸ ಯಕೋಬನಿಗೆ ನಾನು ದಯಪಾಲಿಸಿದ ನಾಡಿನಲ್ಲಿ ಅವರು ವಾಸಿಸುವರು. ಹೌದು, ನಿಮ್ಮ ಪಿತೃಗಳು ವಾಸಿಸಿದ ನಾಡಿನಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ದಾಸ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು