Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:21 - ಕನ್ನಡ ಸತ್ಯವೇದವು C.L. Bible (BSI)

21 ತಮ್ಮ ಸಂಕಲ್ಪ ಹಾಗೂ ದಯಾನುಸಾರ ಎಂತೆಂಥಾ ಮಹತ್ಕಾರ್ಯವನ್ನು ನಡೆಸಿದಿರಿ! ಅವುಗಳ ಅನುಭವವನ್ನೂ ನಿಮ್ಮ ದಾಸನಿಗಿತ್ತಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀನು ನಿನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೋಸ್ಕರ, ನಿನ್ನ ಇಷ್ಟಾನುಸಾರವಾಗಿ ಈ ಎಲ್ಲಾ ಮಹತ್ಕಾರ್ಯಗಳನ್ನು ನಡಿಸಿ, ಅವುಗಳ ಅನುಭವಗಳನ್ನು ನಿನ್ನ ಸೇವಕನಿಗೆ ಉಂಟುಮಾಡದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀನು ನಿನ್ನ ವಾಗ್ದಾನಗಳನ್ನು ನೆರವೇರಿಸುವದಕ್ಕೋಸ್ಕರ ನಿನ್ನ ಇಷ್ಟಾನುಸಾರವಾಗಿ ಈ ಎಲ್ಲಾ ಮಹತ್ಕಾರ್ಯಗಳನ್ನು ನಡಿಸಿ ಅವುಗಳ ಅನುಭವವನ್ನು ನಿನ್ನ ಸೇವಕನಿಗೆ ಉಂಟುಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀನು ಈ ಕಾರ್ಯವನ್ನು ನಿನ್ನ ವಾಗ್ದಾನದ ಪ್ರಕಾರವಾಗಿಯೂ ನಿನ್ನ ಚಿತ್ತದ ಪ್ರಕಾರವಾಗಿಯೂ ಮಾಡಿರುವೆ ಮತ್ತು ನಿನ್ನ ಸೇವಕನಿಗೆ ಅದನ್ನು ತಿಳಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿಮ್ಮ ವಾಕ್ಯದ ನಿಮಿತ್ತವಾಗಿಯೂ ನಿಮ್ಮ ಚಿತ್ತಾನುಸಾರವಾಗಿಯೂ ನಿಮ್ಮ ಸೇವಕನಿಗೆ ತಿಳಿಯಪಡಿಸುವ ಹಾಗೆ ಈ ಮಹಾಕಾರ್ಯಗಳನ್ನೆಲ್ಲಾ ಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:21
16 ತಿಳಿವುಗಳ ಹೋಲಿಕೆ  

ನಮಗಲ್ಲ ಹೇ ಪ್ರಭು, ನಮಗಲ್ಲ ಮಹಿಮೆ I ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ I ನಿನ್ನ ನೀತಿ ಸತ್ಯತೆಗಳ ನಿಮಿತ್ತವೆ II


ತಮ್ಮ ಪೂರ್ವಸಂಕಲ್ಪದಂತೆಯೇ ಇದನ್ನು ದೇವರು ನಮ್ಮ ಪ್ರಭುವಾದ ಯೇಸುಕ್ರಿಸ್ತರಲ್ಲಿ ಕಾರ್ಯಗತಗೊಳಿಸಿದರು.


ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು.


ಕ್ರಿಸ್ತಯೇಸುವಿನಲ್ಲಿ ಪುನೀತರಾಗಿ ದೇವಜನರಾಗಲು ಕರೆಹೊಂದಿರುವ ಕೊರಿಂಥದ ಶ್ರೀಸಭೆಯವರಿಗೂ ಹಾಗೂ ಪ್ರಭು ಯೇಸುಕ್ರಿಸ್ತರನ್ನು ಎಲ್ಲೆಡೆಯೂ ನಾಮಸ್ಮರಣೆ ಮಾಡುವ ಸರ್ವಜನರಿಗೂ - ದೇವರ‍ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಲು ಕರೆಹೊಂದಿದ ಪೌಲನಾದ ನಾನು ಸಹೋದರ ಸೊಸ್ಥೆನನೊಂದಿಗೆ ಸೇರಿ ಬರೆಯುವ ಪತ್ರ.


“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.


ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I ನಿನ್ನ ಪ್ರೀತಿಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ II


ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನು I ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು II


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಹೌದು, ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ನೀವು ಅವರ ನಾಡಿಗೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನಿಮ್ಮ ಪುಣ್ಯವೇ ಆಗಲಿ, ನಿಮ್ಮ ಸುಸ್ವಭಾವವೇ ಆಗಲಿ, ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ಕಾರಣ ಹಾಗು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಕಾರಣ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿಬಿಡುತ್ತಾರೆ.


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ಪರಸ್ಪರ ಕರುಣೆಯಿಂದಲೂ ಕನಿಕರದಿಂದಲೂ ವರ್ತಿಸಿರಿ. ಯೇಸುಕ್ರಿಸ್ತರಲ್ಲಿ ದೇವರು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಸಹ ಒಬ್ಬರನ್ನೊಬ್ಬರು ಕ್ಷಮಿಸಿರಿ.


ಸರ್ವೇಶ್ವರಾ, ನಿಮ್ಮ ದಾಸನಾದ ನನ್ನ ಹಿತಕ್ಕಾಗಿಯೂ ತಮ್ಮ ಚಿತ್ತಾನುಸಾರವಾಗಿಯೂ ಈ ಮಹತ್ಕಾರ್ಯಗಳನ್ನೆಲ್ಲಾ ನಡೆಸಿ ನಿಮ್ಮ ಸರ್ವಮಹತ್ವವನ್ನು ತೋರ್ಪಡಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು