Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:7 - ಕನ್ನಡ ಸತ್ಯವೇದವು C.L. Bible (BSI)

7 ಹೀಗೆ ಇಸ್ರಯೇಲರ ಮಧ್ಯೆ ಸಂಚರಿಸುತ್ತಿದ್ದಾಗ ನನ್ನ ಜನರಾದ ಅವರನ್ನು ಪಾಲಿಸುವುದಕ್ಕೆ ಕುಲನಾಯಕನನ್ನು ನೇಮಿಸಿದೆ. ಅವರಾರಿಂದಲೂ ‘ನೀವೇಕೆ ನನಗೆ ದೇವದಾರು ಮರದಿಂದ ದೇವಾಲಯವನ್ನು ಕಟ್ಟಿಸಲಿಲ್ಲ?’ ಎಂದು ಕೇಳಿದ್ದಿಲ್ಲ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೊಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ಕುಲನಾಯಕನನ್ನಾದರೂ ನೀವು ನನಗೋಸ್ಕರ ದೇವದಾರು ಮರದ ಮನೆಯನ್ನೇಕೆ ಕಟ್ಟಲಿಲ್ಲವೆಂದು ಕೇಳಿದೆನೋ?’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಇಸ್ರಾಯೇಲ್ಯರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗ ನನ್ನ ಜನರಾದ ಇಸ್ರಾಯೇಲ್ಯರನ್ನು ಪಾಲಿಸುವದಕ್ಕೋಸ್ಕರ ನನ್ನಿಂದ ನೇವಿುಸಲ್ಪಟ್ಟ ಯಾವ ಕುಲದವರನ್ನಾದರೂ - ನೀವು ನನಗೋಸ್ಕರ ದೇವದಾರುಮರದ ಮನೆಯನ್ನೇಕೆ ಕಟ್ಟಲಿಲ್ಲವೆಂದು ಕೇಳಿದೆನೋ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನನಗಾಗಿ ದೇವದಾರು ಮರದಿಂದ ಆಲಯ ಕಟ್ಟುವಂತೆ ಇಸ್ರೇಲರ ಯಾವ ಕುಲದವರನ್ನಾಗಲಿ ನಾನು ಕೇಳಿಕೊಳ್ಳಲಿಲ್ಲ ಎಂಬುದಾಗಿ ಯೆಹೋವನು ತಿಳಿಸುತ್ತಾನೆ’ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ನನ್ನ ಜನರಾದ ಇಸ್ರಾಯೇಲರನ್ನು ಪರಿಪಾಲಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಜೊತೆಯಾದರೂ, “ನೀವು ನನಗೆ ದೇವದಾರು ಮನೆಯನ್ನು ಏಕೆ ಕಟ್ಟಲಿಲ್ಲ,” ಎಂದು, ನಾನು ಸಮಸ್ತ ಇಸ್ರಾಯೇಲಿನ ಸಂಗಡ ಸಂಚರಿಸಿದ ಯಾವ ಸ್ಥಳದಲ್ಲಾದರೂ, ಯಾವಾಗಲಾದರೂ ಕೇಳಿದೆನೋ?’

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:7
19 ತಿಳಿವುಗಳ ಹೋಲಿಕೆ  

ನಾನು ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೆ ದೇವಾಲಯದಲ್ಲಿ ವಾಸಮಾಡಲಿಲ್ಲ; ಗುಡಾರದಲ್ಲೇ ವಾಸಿಸುತ್ತಿದ್ದೆನು. ಹೀಗೆ ಇಸ್ರಯೇಲರ ಮಧ್ಯೆ ಸಂಚರಿಸುತ್ತಿದ್ದಾಗಲೆಲ್ಲಾ ನನ್ನ ಜನರಾದ ಅವರನ್ನು ಪಾಲಿಸುವುದಕ್ಕೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅವರಾರಿಂದಲೂ ‘ನೀವೇಕೆ ನನಗೆ ದೇವದಾರು ಮರದಿಂದ ದೇವಾಲಯವನ್ನು ಕಟ್ಟಿಸಲಿಲ್ಲ?’ ಎಂದು ಕೇಳಿದ್ದಿಲ್ಲ’.”


ಹಿಂದಿನ ದಿವಸಗಳಲ್ಲಿ, ಅಂದರೆ ಸೌಲನ ಆಳ್ವಿಕೆಯಲ್ಲಿ, ಇಸ್ರಯೇಲರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವರು ನೀವೇ. ನಿಮ್ಮನ್ನು ಕುರಿತು ಸರ್ವೇಶ್ವರಸ್ವಾಮಿ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗಿರುವೆ,’ ಎಂದು ವಾಗ್ದಾನಮಾಡಿದ್ದಾರೆ,” ಎಂದರು.


“ಇಸ್ರಯೇಲಿನ ಮಹಾಜನರೇ, ಬೇಗ ಬನ್ನಿ; ನಮ್ಮ ಜನಾಂಗಕ್ಕೂ ನಮ್ಮ ಧರ್ಮಶಾಸ್ತ್ರಕ್ಕೂ ಈ ಮಹಾದೇವಾಲಯಕ್ಕೂ ವಿರುದ್ಧವಾಗಿ ಬೋಧಿಸುವ ವ್ಯಕ್ತಿ ಇವನೇ; ಎಲ್ಲೆಡೆಯಲ್ಲೂ ಎಲ್ಲರಿಗೂ ಇವನು ನಮಗೆ ವಿರುದ್ಧವಾಗಿ ಬೋಧಿಸುತ್ತಾನೆ. ಅಷ್ಟು ಮಾತ್ರವಲ್ಲ. ಈ ಪವಿತ್ರಾಲಯದೊಳಕ್ಕೆ ಅನ್ಯಧರ್ಮೀಯರನ್ನು ಕರೆತಂದು ಇದನ್ನು ಭ್ರಷ್ಟಗೊಳಿಸಿದ್ದಾನೆ,” ಎಂದು ಕೂಗಿಕೊಂಡರು.


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


‘ಜುದೇಯ ನಾಡಿನ ಬೆತ್ಲೆಹೇಮೇ, ಜುದೇಯದ ಪ್ರಮುಖ ಪಟ್ಟಣಗಳಲ್ಲಿ ನೀನು ಅಲ್ಪಳೇನೂ ಅಲ್ಲ. ಕಾರಣ ನನ್ನ ಪ್ರಜೆ ಇಸ್ರಯೇಲನ್ನು ಪರಿಪಾಲಿಸುವವನು ನಿನ್ನಿಂದಲೇ ಉದಯಿಸಲಿರುವನು’. ಎಂದು ಪ್ರವಾದಿ ಬರೆದಿದ್ದಾನೆ” ಎಂದು ಉತ್ತರವಿತ್ತರು.


ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


“ನನ್ನ ಹಿಂಡನ್ನು ಕಾಯಲು ಒಬ್ಬನೇ ಕುರುಬನನ್ನು ಏರ್ಪಡಿಸುವೆನು; ನನ್ನ ದಾಸ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.


ನಾನೇ ನನ್ನ ಕುರಿಗಳನ್ನು ಮೇಯಿಸಿ ಹಾಯಾಗಿ ಮಲಗುವಂತೆ ಮಾಡುವೆನು; ಇದು ಸರ್ವೇಶ್ವರನಾದ ದೇವರ ನುಡಿ.


“ನರಪುತ್ರನೇ, ಇಸ್ರಯೇಲೆಂಬ ಮಂದೆಯ ಕುರುಬರಿಗೆ ವಿರುದ್ಧ ಈ ದೈವೋಕ್ತಿಯನ್ನು ಪ್ರವಚನ ರೂಪವಾಗಿ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಯ್ಯೋ ಸ್ವಂತ ಹೊಟ್ಟೆ ಹೊರೆದುಕೊಳ್ಳುವ ಇಸ್ರಯೇಲಿನ ಕುರುಬರಿಗೆ ಧಿಕ್ಕಾರ! ಕುರಿಗಳ ಹೊಟ್ಟೆ ಗಮನಿಸುವುದು ಕುರುಬರ ಧರ್ಮವಲ್ಲವೆ?


ನಾನು ಅವುಗಳ ಮೇಲೆ ಕುರಿಗಾಹಿಗಳನ್ನು ನೇಮಿಸುವೆನು. ಅವರು ಅವುಗಳನ್ನು ಪರಿಪಾಲಿಸುವರು. ಅವು ಇನ್ನು ಹೆದರಬೇಕಾಗಿಲ್ಲ, ಬೆದರಬೇಕಾಗಿಲ್ಲ. ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ಕೊಡುವೆನು. ಅವರು ನಿಮ್ಮನ್ನು ಜ್ಞಾನವಿವೇಕಗಳಿಂದ ಪೋಷಿಸುವರು.


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ನಿಮ್ಮ ದೇವರಾದ ಸರ್ವೇಶ್ವರಾ ನಿಮ್ಮನ್ನು ಕಾಪಾಡಲು, ಶತ್ರುಗಳನ್ನು ನಿಮ್ಮ ಕೈವಶಮಾಡಲು ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾರೆ; ನಿಮ್ಮಲ್ಲಿ ಅಶುಚಿಯೇನಾದರೂ ಕಂಡುಬಂದರೆ ಅವರು ನಿಮ್ಮನ್ನು ಬಿಟ್ಟುಹೋಗದಂತೆ ಪಾಳೆಯವು ನಿರ್ಮಲವಾಗಿರಬೇಕು.


ಕ್ರಿಸ್ತಯೇಸುವಿನ ಮರಣ -ಯಾತನೆಯನ್ನು ಕಣ್ಣಾರೆ ಕಂಡವನೂ ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಭಾಗಿಯಾಗಲಿರುವವನೂ ಸಭಾಪ್ರಮುಖನೂ ಆದ ನಾನು, ನಿಮ್ಮಲ್ಲಿ ಪ್ರಮುಖರಾದ ಇತರರನ್ನು ಪ್ರೋತ್ಸಾಹಿಸಿ ವಿನಂತಿಸುವುದೇನೆಂದರೆ:


ಅರಸ ಸೌಲ ನಮ್ಮನ್ನು ಆಳುತ್ತಿದ್ದಾಗ ನೀವು ಇಸ್ರಯೇಲರ ದಳಪತಿಯಾಗಿ ಯುದ್ಧ ನಡೆಸಿದಿರಿ. ನಮ್ಮ ದೇವರಾದ ಸರ್ವೇಶ್ವರ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗುವೆ,’ ಎಂದು ವಾಗ್ದಾನ ಮಾಡಿದ್ದು ನಿಮ್ಮನ್ನು ಕುರಿತೇ” ಎಂದು ಹೇಳಿ ವಂದಿಸಿದರು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಆಕಾಶವೇ ನನಗೆ ಸಿಂಹಾಸನವಾಗಿರಲು, ಭೂಮಿಯೇ ನನಗೆ ಪಾದಪೀಠವಾಗಿರಲು ನೀವು ನನಗೆ ಕಟ್ಟುವ ಮನೆ ಇನ್ನು ಎಂಥದ್ದು? ನನ್ನ ವಿಶ್ರಾಂತಿಗೆ ತಕ್ಕ ಸ್ಥಳ ಯಾವುದು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು