Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:8 - ಕನ್ನಡ ಸತ್ಯವೇದವು C.L. Bible (BSI)

8 “ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ ಹೇಳು, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೀಗೆ ಹೇಳಿದೆಯೆಂದು ತಿಳಿಸು: ‘ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, “ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, ‘ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ನಾಯಕನನ್ನಾಗಿ ನೇಮಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನಂದರೆ - ಸೇನಾಧೀಶ್ವರನಾದ ಯೆಹೋವನು ಹೀಗನ್ನುತ್ತಾನೆ - ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ಮೇಲೆ ನಾಯಕನನ್ನಾಗಿ ನೇವಿುಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನೀನು ಇದನ್ನು ನನ್ನ ಸೇವಕನಾದ ದಾವೀದನಿಗೆ ಹೇಳಲೇಬೇಕು: ‘ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ಹುಲ್ಲುಗಾವಲಿನಲ್ಲಿ ಕುರಿಕಾಯುತ್ತಿದ್ದ ನಿನ್ನನ್ನು ನಾನು ನನ್ನ ಜನರಾದ ಇಸ್ರೇಲರಿಗೆ ನಾಯಕನಾಗಿ ಮಾಡಲು ಕರೆತಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:8
17 ತಿಳಿವುಗಳ ಹೋಲಿಕೆ  

ಆಗ ನಾತಾನನು ದಾವೀದನನ್ನು ದಿಟ್ಟಿಸಿ, “ಆ ಮನುಷ್ಯ ನೀನೇ. ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಹೇಳುವುದು ಇದು: ‘ನಿನ್ನನ್ನು ಅಭಿಷೇಕಿಸಿ ಇಸ್ರಯೇಲರ ಅರಸನನ್ನಾಗಿ ಮಾಡಿದವನು ನಾನು; ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನೂ ನಾನೇ.


ಆಗ ದಾವೀದನು ಆಕೆಗೆ, “ನಾನು ಮಾಡಿದ್ದು ಸರ್ವೇಶ್ವರನ ಸನ್ನಿಧಿಯಲ್ಲಿ ಮಾತ್ರ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟುಬಿಟ್ಟು, ನನ್ನನ್ನೇ ಆರಿಸಿಕೊಂಡು, ತಮ್ಮ ಪ್ರಜೆಗಳಾದ ಇಸ್ರಯೇಲರ ಅರಸನನ್ನಾಗಿ ಮಾಡಿದ ಆ ಸರ್ವೇಶ್ವರನ ಮುಂದೆ ಇನ್ನೂ ಹೆಚ್ಚಾಗಿ ಕುಣಿದಾಡುವೆನು.


“ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೇಳಿದೆನೆಂದು ಹೀಗೆ ತಿಳಿಸು: ‘ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ.


ಆ ಆಳು ಮುಂದೆ ಹೋದಾದ ಮೇಲೆ ಸಮುವೇಲನು ಓಲಿವ್ ಎಣ್ಣೇಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು, ಅವನನ್ನು ಮುದ್ದಿಟ್ಟು ಅವನಿಗೆ, “ಸರ್ವೇಶ್ವರ ತಮ್ಮ ಜನರ ಮೇಲೆ ರಾಜ್ಯ ಆಳಲು ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾರೆ.


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ನಾಡಿನವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರ ಮೇಲೆ ನನಗೆ ಕನಿಕರವಿದೆ,” ಎಂದು ತಿಳಿಸಿದರು.


ದೈವಾನುಗ್ರಹಕ್ಕೆ ಪಾತ್ರನಾದ ದಾವೀದನು ಯಕೋಬನ ದೇವರಿಗೆ ಆಲಯವೊಂದನ್ನು ಕಟ್ಟಲು ಅಪ್ಪಣೆಯಾಗಬೇಕೆಂದು ಬೇಡಿಕೊಂಡನು.


ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.


ದಾವೀದನ ಕಡೇ ಮಾತುಗಳಿವು: ಜೆಸ್ಸೆಯನ ಮಗ ದಾವೀದನ ನುಡಿಗಳಿವು: ಉನ್ನತಸ್ಥಾನವನ್ನು ಅಲಂಕರಿಸಿದವನು, ಯಕೋಬ ದೇವರಿಂದ ಅಭಿಷಿಕ್ತನಾದವನು, ಇಸ್ರಯೇಲರ ವರಕವಿ ಆಡಿದ ವಚನಗಳಿವು:


ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಸರ್ವೇಶ್ವರನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿಮ್ಮ ಕೈ ನನ್ನನ್ನೂ ನನ್ನ ಮನೆಯವರನ್ನೂ ಶಿಕ್ಷಿಸಲಿ,” ಎಂದು ಬೇಡಿಕೊಂಡನು.


ಸೊಲೊಮೋನನು, “ನಿಮಗೆ ಪ್ರಾಮಾಣಿಕನಾಗಿ ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನೀವು ಮಹಾಕೃಪೆಯನ್ನು ತೋರಿಸಿದಿರಿ; ಆ ಕೃಪೆಯನ್ನು ಮುಂದುವರಿಸುತ್ತಾ ಈಗ ಅವರ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿ ಅದನ್ನು ಸಂಪೂರ್ಣಗೊಳಿಸಿದ್ದೀರಿ.


‘ನಾನು ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಆಲಯ ಸ್ಥಾನವನ್ನಾಗಲಿ, ಇಸ್ರಯೇಲ್ ಕುಲಗಳ ಯಾವ ಪಟ್ಟಣವನ್ನಾಗಲಿ ಆರಿಸಿಕೊಳ್ಳಲಿಲ್ಲ. ಆದರೆ ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನು ಆರಿಸಿಕೊಂಡೆ’ ಎಂದು ಹೇಳಿದ್ದರು.


ದಾವೀದನು ದೇವರಿಗೆ, “ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೇ; ಮಹಾಪಾಪ ಮಾಡಿದವನು ನಾನೇ; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಸರ್ವೇಶ್ವರಾ, ನನ್ನ ದೇವರೇ, ನಿಮ್ಮ ಕತ್ತಿ ನಿಮ್ಮ ಜನರನ್ನು ಬಾಧಿಸದೆ, ಅವರಿಗೆ ವಿರೋಧವಾಗಿ ಇರದೆ, ನನಗೂ ನನ್ನ ಮನೆಯವರಿಗೂ ವಿರೋಧ ಆಗಿರಲಿ,” ಎಂದು ಬೇಡಿಕೊಂಡನು.


ಹಿಂದಿನ ದಿವಸಗಳಲ್ಲಿ, ಅಂದರೆ ಸೌಲನ ಆಳ್ವಿಕೆಯಲ್ಲಿ, ಇಸ್ರಯೇಲರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವರು ನೀವೇ. ನಿಮ್ಮನ್ನು ಕುರಿತು ಸರ್ವೇಶ್ವರಸ್ವಾಮಿ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗಿರುವೆ,’ ಎಂದು ವಾಗ್ದಾನಮಾಡಿದ್ದಾರೆ,” ಎಂದರು.


ಆಕೆ, “ಅರಸರು ಈ ತೀರ್ಪು ಕೊಟ್ಟದ್ದರಿಂದ ತಮ್ಮನ್ನೇ ಅಪರಾಧಿಯೆಂದು ನಿರ್ಣಯಿಸಿದ ಹಾಗಾಯಿತು. ತಾವು ಹೊರದೂಡಲಾದವನನ್ನು ಸೇರಿಸಿಕೊಳ್ಳಲೊಲ್ಲದೆ ಇರುವುದರಿಂದ ದೇವಪ್ರಜೆಗೆ ವಿರೋಧ ಆಗಿ ಅದೇ ಆಲೋಚನೆ ಮಾಡಿದ ಹಾಗಾಯಿತು. ಅರಸರು ಹೀಗೇಕೆ ಮಾಡಬೇಕು? ನಾವು ಸಾಯುವವರು:


ಮಂದೆ ಕಾಯುವುದರಿಂದ ಸರ್ವೇಶ್ವರ ನನ್ನನ್ನು ಬಿಡಿಸಿದರು. ನೀನು ಹೋಗಿ ನನ್ನ ಜನರಾದ ಇಸ್ರಯೇಲರಿಗೆ ಪ್ರವಾದನೆಮಾಡು’ ಎಂದು ಹೇಳಿಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು