Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:10 - ಕನ್ನಡ ಸತ್ಯವೇದವು C.L. Bible (BSI)

10 ತೋವಿಗೂ ಹದದೆಜೆರನಿಗೂ ಹಗೆತನವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ ಅವನನ್ನು ಸೋಲಿಸಿದುದರಿಂದ ತೋವು ದಾವೀದನನ್ನು ಅಭಿನಂದಿಸುವುದಕ್ಕಾಗಿ ಹಾಗು ಹರಸುವುದಕ್ಕಾಗಿ ತನ್ನ ಮಗ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೆ ತಾಮ್ರ, ಬೆಳ್ಳಿ ಹಾಗು ಬಂಗಾರದ ಪಾತ್ರೆಗಳನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತೋವಿಗೂ ಹದದೆಜೆರನಿಗೂ ವಿರೋಧವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ, ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ವಂದಿಸುವುದಕ್ಕೂ ಹರಸುವುದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ, ಬೆಳ್ಳಿ, ಬಂಗಾರದ ಪಾತ್ರೆಗಳನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 (ತೋವಿಗೂ ಹದದೆಜೆರನಿಗೂ ವಿರೋಧವಿತ್ತು.) ದಾವೀದನು ಹದದೆಜೆರನ ಮೇಲೆ ಬಿದ್ದು ಅವನನ್ನು ಸೋಲಿಸಿದದರಿಂದ ತೋವು ದಾವೀದನನ್ನು ವಂದಿಸುವದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ ಬೆಳ್ಳಿ ಬಂಗಾರದ ಪಾತ್ರೆಗಳನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ತೋವಿಯು ತನ್ನ ಮಗನಾದ ಯೋರಾಮನನ್ನು ರಾಜನಾದ ದಾವೀದನ ಬಳಿಗೆ ಕಳುಹಿಸಿದನು. ದಾವೀದನು ಹದದೆಜೆರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಯೋರಾಮನು ದಾವೀದನನ್ನು ಅಭಿನಂದಿಸಿದನು ಮತ್ತು ಆಶೀರ್ವದಿಸಿದನು. (ಈ ಮೊದಲು ಹದದೆಜೆರನು ತೋವಿಗೆ ವಿರುದ್ಧವಾಗಿ ಯುದ್ಧವನ್ನು ಮಾಡಿದನು.) ಯೋರಾಮನು ಚಿನ್ನ, ಬೆಳ್ಳಿ ಮತ್ತು ಹಿತ್ತಾಳೆಯಿಂದ ಮಾಡಿದ ವಸ್ತುಗಳನ್ನು ತಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನು ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಯೋರಾಮನನ್ನು ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:10
9 ತಿಳಿವುಗಳ ಹೋಲಿಕೆ  

‘ಪ್ರಭು ನಿನ್ನನು ಆಶೀರ್ವದಿಸಲಿ’ ಎಂಬ ಮಾತನ್ನಾಗಲಿ I ‘ಪ್ರಭು ನಾಮದಲಿ ನಿನಗೆ ಶುಭ’ ಎಂದಾಗಲಿ I ಹಾದುಹೋಗುವ ಜನಜಂಗುಳಿ ಅವರಿಗೆ ಹೇಳದಿರಲಿ” II


(ತೋವಿಗೂ ಹದರೆಜೆರನಿಗೂ ವಿರೋಧವಿತ್ತು). ದಾವೀದನು ಹದರೆಜೆರನ ಮೇಲೆ ದಾಳಿಮಾಡಿ ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ಅಭಿನಂದಿಸುವುದಕ್ಕಾಗಿ ಹಾಗು ಹರಸುವುದಕ್ಕಾಗಿ ತನ್ನ ಮಗ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೆ ವಿಧವಿಧವಾದ ತಾಮ್ರ, ಬೆಳ್ಳಿ ಹಾಗು ಬಂಗಾರದ ಪಾತ್ರೆಗಳನ್ನು ತಂದನು.


ಅದು ಮುಗಿಯುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವುದಕ್ಕಾಗಿ ಮುಂದೆ ಹೋದನು.


ಅದೇ ಕಾಲದಲ್ಲಿ ಬಲದಾನನ ಮಗನು ಹಾಗೂ ಬಾಬಿಲೋನಿಯದ ಅರಸನು ಆದ ಮೆರೋದಕಬಲದಾನ ಎಂಬವನು, ರಾಜ ಹಿಜ್ಕೀಯನು ರೋಗದಿಂದ ಗುಣಹೊಂದಿದನು ಎಂದು ಕೇಳಿ ಅವನಿಗೆ ಉಡುಗೊರೆಯೊಂದಿಗೆ ಒಂದು ಪತ್ರವನ್ನು ಕಳುಹಿಸಿದನು.


ಅರಸ ದಾವೀದನ ಸೇವಕರು ನಮ್ಮ ಒಡೆಯನೂ ಅರಸನೂ ಆದ ದಾವೀದನ ಮುಂದೆ ಬಂದು, ‘ನಿಮ್ಮ ದೇವರು ನಿಮ್ಮ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ! ರಾಜ್ಯವನ್ನು ನಿಮ್ಮ ಕಾಲದಲ್ಲಿ ಇದ್ದುದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಅಭಿವೃದ್ಧಿಗೊಳಿಸಲಿ!’ ಎಂದು ಅವನನ್ನು ಹರಸಿದ್ದಾರೆ. ಅರಸನು ತನ್ನ ಹಾಸಿಗೆಯ ಮೇಲೆ ಬಿದ್ದುಕೊಂಡು,


ಅವನು ಅವರ ಯೋಗಕ್ಷೇಮವನ್ನು ವಿಚಾರಿಸಿದನು. ಬಳಿಕ, “ನೀವು ಹೇಳಿದ ಮುಪ್ಪುವಯಸ್ಸಿನ ನಿಮ್ಮ ತಂದೆ ಕ್ಷೇಮವೋ? ಇನ್ನು ಬದುಕಿದ್ದಾನೋ?" ಎಂದು ಕೇಳಲು


ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನ ಹಮಾತಿನ ಅರಸನಾದ ತೋವಿಗೆ ಮುಟ್ಟಿತು.


ಅರಸನಾದ ದಾವೀದನು ಈ ಕಾಣಿಕೆಗಳನ್ನು ಮಾತ್ರವಲ್ಲದೆ, ತನ್ನಿಂದ ಅಪಜಯಹೊಂದಿದ್ದ ಅರಾಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಹಾಗು ಅಮಾಲೇಕ್ಯರು ಎಂಬ ಸುತ್ತಮುತ್ತಿನ ಜನಾಂಗಗಳಿಂದಲೂ ಮತ್ತು ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ


ಅನೇಕರು ಸರ್ವೇಶ್ವರನಿಗೆ ಕಾಣಿಕೆಗಳನ್ನೂ ಜುದೇಯದ ಅರಸ ಹಿಜ್ಕೀಯನಿಗೆ ಶ್ರೇಷ್ಠವಸ್ತುಗಳನ್ನೂ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲ ರಾಷ್ಟ್ರಗಳವರು ಹಿಜ್ಕೀಯನನ್ನು ಮಹಾನ್‍ವ್ಯಕ್ತಿಯೆಂದು ಸನ್ಮಾನಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು