2 ಸಮುಯೇಲ 8:11 - ಕನ್ನಡ ಸತ್ಯವೇದವು C.L. Bible (BSI)11 ಅರಸನಾದ ದಾವೀದನು ಈ ಕಾಣಿಕೆಗಳನ್ನು ಮಾತ್ರವಲ್ಲದೆ, ತನ್ನಿಂದ ಅಪಜಯಹೊಂದಿದ್ದ ಅರಾಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಹಾಗು ಅಮಾಲೇಕ್ಯರು ಎಂಬ ಸುತ್ತಮುತ್ತಿನ ಜನಾಂಗಗಳಿಂದಲೂ ಮತ್ತು ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅರಸನಾದ ದಾವೀದನು ಇವುಗಳನ್ನು ತನ್ನಿಂದ ಅಪಜಯಹೊಂದಿದ ಅರಾಮ್ಯರೂ, ಮೋವಾಬ್ಯರೂ, ಅಮ್ಮೋನಿಯರೂ, ಫಿಲಿಷ್ಟಿಯರೂ, ಅಮಾಲೇಕ್ಯರೂ ಎಂಬ ಈ ಸುತ್ತಣ ಜನಾಂಗಗಳಿಂದಲೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅರಸನಾದ ದಾವೀದನು ಇವುಗಳನ್ನೂ ತನ್ನಿಂದ ಅಪಜಯಹೊಂದಿದ ಅರಾಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು, ಅಮಾಲೇಕ್ಯರು ಎಂಬೀ ಸುತ್ತಣ ಜನಾಂಗಗಳಿಂದಲೂ ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದಾವೀದನು ಆ ವಸ್ತುಗಳನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದನು. ಅವನು ಅನ್ಯದೇಶಗಳನ್ನು ಸೋಲಿಸಿದ್ದಾಗ ಯೆಹೋವನಿಗೆ ಸಮರ್ಪಿಸಿದ್ದ ಬೆಳ್ಳಿ ಮತ್ತು ಚಿನ್ನಗಳೊಂದಿಗೆ ಇವುಗಳನ್ನೂ ಸೇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅರಸನಾದ ದಾವೀದನು ಚಿನ್ನ, ಬೆಳ್ಳಿ ಮತ್ತು ಕಂಚಿನ ಎಲ್ಲಾ ವಸ್ತುಗಳನ್ನು ಯೆಹೋವ ದೇವರಿಗೆ ಸಮರ್ಪಿಸಿದನು. ಜೊತೆಗೆ ಅವನು ಸೋತ ಎಲ್ಲಾ ದೇಶಗಳಿಂದ ವಶಪಡಿಸಿಕೊಂಡ ವಸ್ತುಗಳನ್ನೂ ಅರ್ಪಿಸಿದನು. ಅಧ್ಯಾಯವನ್ನು ನೋಡಿ |
ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”
ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ, ಇವುಗಳನ್ನೂ ಗೋಮೇಧಕ ರತ್ನ ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪುಹರಳು, ವಿವಿಧ ವರ್ಣದ ಕಲ್ಲು, ತರತರದ ಮಣೆ, ಚಂದ್ರಕಾಂತ ಇವುಗಳನ್ನೂ ನನ್ನ ದೇವರ ಮಂದಿರಕ್ಕಾಗಿ ರಾಶಿರಾಶಿಯಾಗಿ ಸಂಗ್ರಹಿಸಿದ್ದೇನೆ.