Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 9:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ಅರಸನು, “ಸೌಲನ ಕುಟುಂಬದವರಲ್ಲಿ ಯಾರಾದರೂ ಉಳಿದಿದ್ದರೆ ಹೇಳು; ನಾನು ದೇವರನ್ನು ನೆನಸಿ ಅವರಿಗೆ ದಯೆ ತೋರಿಸುತ್ತೇನೆ,” ಎಂದನು. ಆಗ ಚೀಬನು, “ಯೋನಾತಾನನಿಗೆ, ಎರಡು ಕಾಲೂ ಕುಂಟಾದ ಒಬ್ಬ ಮಗನಿರುತ್ತಾನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅರಸನು ಅವನಿಗೆ, “ಸೌಲನ ಕುಟುಂಬದಲ್ಲಿ ಯಾರಾದರೂ ಉಳಿದಿದ್ದರೆ ಹೇಳು, ನಾನು ದೇವರನ್ನು ನೆನಸಿ ಅವರಿಗೆ ದಯೆತೋರಿಸುತ್ತೇನೆ” ಎಂದನು. ಆಗ ಚೀಬನು ಅರಸನಿಗೆ “ಯೋನಾತಾನನಿಗೆ ಎರಡೂ ಕಾಲು ಕುಂಟಾದ ಒಬ್ಬ ಮಗನಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅರಸನು ಅವನಿಗೆ - ಸೌಲನ ಕುಟುಂಬದವರಲ್ಲಿ ಯಾರಾದರೂ ಉಳಿದಿದ್ದರೆ ಹೇಳು; ನಾನು ದೇವರನ್ನು ನೆನಸಿ ಅವರಿಗೆ ದಯೆತೋರಿಸುತ್ತೇನೆ ಅಂದನು. ಆಗ ಚೀಬನು ಅರಸನಿಗೆ - ಯೋನಾತಾನನಿಗೆ ಎರಡು ಕಾಲೂ ಕುಂಟಾದ ಒಬ್ಬ ಮಗನಿರುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ರಾಜನಾದ ದಾವೀದನು, “ಸೌಲನ ಕುಟುಂಬದಲ್ಲಿ ಯಾವ ವ್ಯಕ್ತಿಯಾದರೂ ಉಳಿದಿರುವನೇ? ನಾನು ಆ ವ್ಯಕ್ತಿಗೆ ದೇವರ ಕರುಣೆಯನ್ನು ತೋರಿಸಬೇಕಾಗಿದೆ” ಎಂದು ಹೇಳಿದನು. ಚೀಬನು ರಾಜನಾದ ದಾವೀದನಿಗೆ, “ಯೋನಾತಾನನ ಮಗನೊಬ್ಬನು ಇನ್ನೂ ಇದ್ದಾನೆ. ಅವನ ಎರಡೂ ಕಾಲುಗಳು ಕುಂಟಾಗಿವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅರಸನು, “ನಾನು ದೇವರ ದಯೆ ತೋರಿಸುವ ಹಾಗೆ ಸೌಲನ ಕುಟುಂಬದಲ್ಲಿ ಇನ್ನೂ ಯಾವನಾದರೂ ಇದ್ದಾನೋ?” ಎಂದನು. ಆಗ ಚೀಬನು ಅರಸನಿಗೆ, “ಯೋನಾತಾನನಿಗೆ ಎರಡೂ ಕಾಲು ಕುಂಟಾದ ಮಗನಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 9:3
11 ತಿಳಿವುಗಳ ಹೋಲಿಕೆ  

ಸೌಲನ ಮಗ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಕುಂಟ ಮಗನಿದ್ದನು. ಅವನು ಕುಂಟನಾದದ್ದು ಹೀಗೆ: ಸೌಲ ಹಾಗು ಯೋನಾತಾನರು ಸತ್ತರೆಂಬ ವರ್ತಮಾನ ಜೆಸ್ರೀಲಿನಿಂದ ಬಂದಾಗ ಐದು ವರ್ಷದವನಾಗಿದ್ದ ಅವನನ್ನು ಅವನ ದಾದಿ ತೆಗೆದುಕೊಂಡು ಅವಸರದಿಂದ ಓಡಿಹೋಗುವಾಗ ಅವನು ಬಿದ್ದು ಕಾಲು ಮುರಿದುಕೊಂಡನು.


ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ.


ಆದರೂ ಅವರು ನಿಮ್ಮ ಪಿತೃಗಳಲ್ಲಿ ಇಷ್ಟವುಳ್ಳವರಾಗಿ ಅವರನ್ನು ಪ್ರೀತಿಸಿದರು. ಈಗ ನಿಮ್ಮ ಅನುಭವಕ್ಕೆ ಬಂದಿರುವಂತೆ, ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲ ಜನಾಂಗಗಳಿಂದ ಆರಿಸಿಕೊಂಡರು.


ಅವನು, “ಒಡೆಯರೇ, ಅರಸರೇ, ನನ್ನ ಸೇವಕ ನನ್ನನ್ನು ವಂಚಿಸಿದ. ಕುಂಟನಾದ ನಾನು ಅವನಿಗೆ, ‘ಕತ್ತೆಗೆ ತಡಿಹಾಕು, ನಾನು ಕುಳಿತುಕೊಂಡು ಅರಸರ ಜೊತೆಯಲ್ಲೇ ಹೋಗಬೇಕು’ ಎಂದು ಆಜ್ಞಾಪಿಸಿದೆ.


ನಿಮ್ಮ ಪಿತೃಗಳನ್ನು ಪ್ರೀತಿಸಿ, ತರುವಾಯ ಅವರ ಸಂತತಿಯಾದ ನಿಮ್ಮನ್ನೂ ಆರಿಸಿಕೊಂಡರು.


ಆಗ ದಾವೀದನು, “ಹೆದರಬೇಡ; ನಿನ್ನ ತಂದೆ ಯೋನಾತಾನನ ನೆನಪಿನಲ್ಲಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ; ಇದಲ್ಲದೆ ನೀನು ಪ್ರತಿದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು,” ಎಂದು ಹೇಳಿದನು.


ಮೆಫೀಬೋಶೆತನಿಗೆ ಪ್ರತಿದಿನವೂ ರಾಜಪಂಕ್ತಿಯಲ್ಲಿ ಊಟವಾಗುತ್ತಿದ್ದುದರಿಂದ ಅವನು ಜೆರುಸಲೇಮಿನಲ್ಲೇ ವಾಸಿಸಿದನು. ಅವನ ಎರಡು ಕಾಲುಗಳೂ ಕುಂಟಾಗಿದ್ದವು.


ಅವನು ಹಾಗೆ ಮಾಡದೆ ನನ್ನ ಒಡೆಯರಾದ ಅರಸರ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದ. ಅರಸರು ದೇವದೂತನ ಹಾಗಿರುತ್ತೀರಿ. ತಮಗೆ ಸರಿಕಂಡದ್ದನ್ನು ಮಾಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು